ಸಿನಿಮಾದಿಂದಲೇ ಜನರಿಗೆ ಮಹಾತ್ಮಾ ಗಾಂಧಿ ಗೊತ್ತಾಗಿದ್ದು; ಮೋದಿ ಹೇಳಿಕೆಗೆ ಕಾಂಗ್ರೆಸ್ ಆಕ್ರೋಶ

1982ರಲ್ಲಿ ರಿಚರ್ಡ್ ಅಟೆನ್‌ಬರೋ ಅವರ ‘ಗಾಂಧಿ’ ಸಿನಿಮಾ ನಿರ್ಮಾಣವಾಗುವವರೆಗೂ ಮಹಾತ್ಮಾ ಗಾಂಧಿ ಬಗ್ಗೆ ಜಗತ್ತಿಗೆ ಗೊತ್ತಿರಲಿಲ್ಲ ಎಂಬ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಕಾಂಗ್ರೆಸ್‌ ತೀವ್ರ ಟೀಕೆ ಮಾಡಿದೆ. ಮಹಾತ್ಮಾ ಗಾಂಧಿ ಒಬ್ಬ ಶ್ರೇಷ್ಠ ವ್ಯಕ್ತಿಯಾಗಿದ್ದರೂ ಜಗತ್ತಿಗೆ ಅವರ ಬಗ್ಗೆ ತಿಳಿದಿರಲಿಲ್ಲ. ಕಳೆದ 75 ವರ್ಷಗಳಲ್ಲಿ ಗಾಂಧಿಯವರಿಗೆ ಜಾಗತಿಕ ಮನ್ನಣೆ ಸಿಗುವಂತೆ ಮಾಡುವುದು ರಾಷ್ಟ್ರದ ಜವಾಬ್ದಾರಿಯಲ್ಲವೇ ಎಂದು ಕೇಳಿದ್ದರು.

ಸಿನಿಮಾದಿಂದಲೇ ಜನರಿಗೆ ಮಹಾತ್ಮಾ ಗಾಂಧಿ ಗೊತ್ತಾಗಿದ್ದು; ಮೋದಿ ಹೇಳಿಕೆಗೆ ಕಾಂಗ್ರೆಸ್ ಆಕ್ರೋಶ
ಪಿಎಂ ನರೇಂದ್ರ ಮೋದಿ
Follow us
|

Updated on: May 29, 2024 | 6:58 PM

ನವದೆಹಲಿ: 1982ರಲ್ಲಿ ತೆರೆಕಂಡ ರಿಚರ್ಡ್ ಅಟೆನ್‌ಬರೋ (Richard Attenborough) ಅವರ ಸಿನಿಮಾ ಗಾಂಧಿಗೂ (Gandhi Movie) ಮೊದಲು ಜಗತ್ತಿಗೆ ಮಹಾತ್ಮಾ ಗಾಂಧಿ ಬಗ್ಗೆ ತಿಳಿದಿರಲಿಲ್ಲ ಎಂದು ಟಿವಿ ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಬಗ್ಗೆ ಎಕ್ಸ್​ನಲ್ಲಿ ವ್ಯಂಗ್ಯವಾಡಿರುವ ರಾಹುಲ್ ಗಾಂಧಿ, ಎಂಟೈರ್ ಪೊಲಿಟಿಕಲ್ ಸೈನ್ಸ್ ವಿದ್ಯಾರ್ಥಿ ಮಾತ್ರ ಮಹಾತ್ಮ ಗಾಂಧಿಯವರ ಬಗ್ಗೆ ತಿಳಿದುಕೊಳ್ಳಲು ಚಲನಚಿತ್ರವನ್ನು ನೋಡಬೇಕಾಗುತ್ತದೆ ಎಂದು ಬರೆದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಎಂಟೈರ್ ಪೊಲಿಟಿಕಲ್ ಸೈನ್ಸ್​ ವಿಷಯದ ಮಾಸ್ಟರ್ ಆಫ್ ಆರ್ಟ್ಸ್ ಪದವಿ ಪ್ರಮಾಣಪತ್ರವನ್ನು ಈ ಹಿಂದೆ ಬಿಜೆಪಿ ತನ್ನ ಎಕ್ಸ್​ ಪೇಜಿನಲ್ಲಿ ಪೋಸ್ಟ್ ಮಾಡಿತ್ತು. ಅದನ್ನು ಪ್ರಸ್ತಾಪಿಸಿರುವ ರಾಹುಲ್ ಗಾಂಧಿ ‘ಕೇವಲ ಸಂಪೂರ್ಣ ರಾಜಕೀಯ ಶಾಸ್ತ್ರದ ವಿದ್ಯಾರ್ಥಿಗೆ’ ಮಾತ್ರ ಸಿನಿಮಾ ನೋಡಿ ಗಾಂಧೀಜಿಯನ್ನು ತಿಳಿದುಕೊಳ್ಳಬೇಕಾದ ಅಗತ್ಯವಿರುತ್ತದೆ ಎಂದು ಲೇವಡಿ ಮಾಡಿದ್ದಾರೆ.

ಇದನ್ನೂ ಓದಿ: ಸಿಎಂ ನವೀನ್ ಪಟ್ನಾಯಕ್ ಆರೋಗ್ಯದ ತನಿಖೆಗೆ ವಿಶೇಷ ಸಮಿತಿ ರಚನೆ; ಪ್ರಧಾನಿ ಮೋದಿ

ಏನಿದು ಪ್ರಕರಣ?:

ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚಿನ ಟಿವಿ ಸಂದರ್ಶನವೊಂದರಲ್ಲಿ, ಬೆನ್ ಕಿಂಗ್ಸ್ಲಿ ಅವರ ಗಾಂಧಿ (1982) ಸಿನಿಮಾ ಬರುವವರೆಗೆ ಮಹಾತ್ಮ ಗಾಂಧಿ ಬಗ್ಗೆ ಈ ಜಗತ್ತಿಗೆ ತಿಳಿದಿರಲಿಲ್ಲ ಎಂದು ಹೇಳಿದ್ದಾರೆ. 2024ರ ಲೋಕಸಭಾ ಚುನಾವಣೆಯ ಕೊನೆಯ ಹಂತಕ್ಕೆ ಮುಂಚಿತವಾಗಿ ಈ ಹೇಳಿಕೆ ಬಂದಿದೆ.

ತಮ್ಮ ವಿಶ್ವ ಪ್ರವಾಸಗಳ ಅವಲೋಕನಗಳನ್ನು ಸಂದರ್ಶನದಲ್ಲಿ ಹಂಚಿಕೊಂಡ ಪಿಎಂ ನರೇಂದ್ರ ಮೋದಿ, ಮಹಾತ್ಮ ಗಾಂಧಿಯವರನ್ನು ವಿಶ್ವವೇ ಗುರುತಿಸುವಂತೆ ಮಾಡಲು ರಿಚರ್ಡ್ ಅಟೆನ್‌ಬರೋ ಅವರ 1982ರ ಚಲನಚಿತ್ರ ‘ಗಾಂಧಿ’ ಮುಖ್ಯ ಪಾತ್ರ ವಹಿಸುತ್ತದೆ. ಅಲ್ಲಿಯವರೆಗೂ ಜಗತ್ತಿನವರಿಗೆ ಗಾಂಧಿ ಬಗ್ಗೆ ತಿಳಿದಿರಲಿಲ್ಲ ಎಂದಿದ್ದರು.

ಇದನ್ನೂ ಓದಿ: ‘ನರೇಂದ್ರ ಮೋದಿ ಒಬಿಸಿ ಆದದ್ದು ಹೇಗೆ?’; ಜಾತಿ ಗಣತಿ ಪರ ಮತ್ತೆ ರಾಹುಲ್ ಗಾಂಧಿ ಬ್ಯಾಟಿಂಗ್

ಮಹಾತ್ಮಾ ಗಾಂಧಿಯವರು ಜಗತ್ತಿನ ಮಹಾನ್ ಚೇತನ, ಈ 75 ವರ್ಷಗಳಲ್ಲಿ ಮಹಾತ್ಮ ಗಾಂಧಿಯವರ ಬಗ್ಗೆ ಜಗತ್ತಿಗೆ ತಿಳಿಸುವುದು ನಮ್ಮ ಜವಾಬ್ದಾರಿಯಲ್ಲವೇ? ಅವರ ಬಗ್ಗೆ ಯಾರಿಗೂ ತಿಳಿದಿರಲಿಲ್ಲ, ಕ್ಷಮಿಸಿ, ಆದರೆ ಜಗತ್ತಿನಲ್ಲಿ ಅವರ ಬಗ್ಗೆ ಮೊದಲ ಬಾರಿಗೆ ಕುತೂಹಲ ಹುಟ್ಟಿತು. ‘ಗಾಂಧಿ’ ಚಿತ್ರ ನಿರ್ಮಾಣವಾದಾಗ ಜಗತ್ತಿನ ಜನರಿಗೆ ಗಾಂಧೀಜಿ ಬಗ್ಗೆ ಗೊತ್ತಾಯಿತು. ಆದರೆ, ಭಾರತೀಯರಾದ ನಮಗೆ ಗಾಂಧೀಜಿಯ ಬಗ್ಗೆ ತಿಳಿಸಲು ಸಾಧ್ಯವಾಗಲಿಲ್ಲ” ಎಂದು ಪ್ರಧಾನಿ ಸಂದರ್ಶನದಲ್ಲಿ ಹೇಳಿದ್ದರು.

ಮಾರ್ಟಿನ್ ಲೂಥರ್ ಕಿಂಗ್ ಮತ್ತು ನೆಲ್ಸನ್ ಮಂಡೇಲಾ ಅವರಂತಹ ಇತರ ನಾಯಕರ ಬಗ್ಗೆ ಜಗತ್ತಿಗೆ ತಿಳಿದಿತ್ತು. ಆದರೆ, ಗಾಂಧಿ ಅವರೆಲ್ಲರಿಗಿಂತಲೂ ಕಡಿಮೆಯೇನಿಲ್ಲ ಎಂದು ಅವರು ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ