AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Green City Award 2022: ವರ್ಲ್ಡ್​ ಗ್ರೀನ್ ಸಿಟಿ ಪ್ರಶಸ್ತಿ ಗೆದ್ದ ಹೈದರಾಬಾದ್; ಭಾರತದ ಬೇರೆ ಯಾವ ನಗರಕ್ಕೂ ಇಲ್ಲ ಸ್ಥಾನ!

ಹೈದರಾಬಾದ್ ಈ ಪ್ರಶಸ್ತಿಗೆ ಆಯ್ಕೆಯಾದ ಏಕೈಕ ಭಾರತೀಯ ನಗರವಾಗಿದೆ. ಇದು ತೆಲಂಗಾಣ ಮತ್ತು ಭಾರತಕ್ಕೆ ಹೆಮ್ಮೆಯ ವಿಷಯವಾಗಿದೆ.

World Green City Award 2022: ವರ್ಲ್ಡ್​ ಗ್ರೀನ್ ಸಿಟಿ ಪ್ರಶಸ್ತಿ ಗೆದ್ದ ಹೈದರಾಬಾದ್; ಭಾರತದ ಬೇರೆ ಯಾವ ನಗರಕ್ಕೂ ಇಲ್ಲ ಸ್ಥಾನ!
TV9 Web
| Edited By: |

Updated on: Oct 15, 2022 | 11:24 AM

Share

ಹೈದರಾಬಾದ್: ಇಂಟರ್​ ನ್ಯಾಷನಲ್ ಅಸೋಸಿಯೇಷನ್ ಆಫ್ ಹಾರ್ಟಿಕಲ್ಚರಲ್ ಪ್ರೊಡ್ಯೂಸರ್ಸ್ (AIPH) ನೀಡುವ ವರ್ಲ್ಡ್ ಗ್ರೀನ್ ಸಿಟಿ ಅವಾರ್ಡ್ಸ್ 2022 ಅನ್ನು ಹೈದರಾಬಾದ್‌ (Hyderabad) ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಈ ಮೂಲಕ ಹೈದರಾಬಾದ್​ನ ಮುಕುಟಕ್ಕೆ ಮತ್ತೊಂದು ಗರಿ ಸೇರಿದಂತಾಗಿದೆ. ಶುಕ್ರವಾರ ಬಿಡುಗಡೆಯಾದ ಅಧಿಕೃತ ಪ್ರಕಟಣೆಯ ಪ್ರಕಾರ, ಹೈದರಾಬಾದ್ ಈ ಪ್ರಶಸ್ತಿಗೆ ಆಯ್ಕೆಯಾದ ಏಕೈಕ ಭಾರತೀಯ ನಗರವಾಗಿದೆ. ಇದು ತೆಲಂಗಾಣ (Telangana) ಮತ್ತು ಭಾರತಕ್ಕೆ ಹೆಮ್ಮೆಯ ವಿಷಯವಾಗಿದೆ. ಹೈದರಾಬಾದ್ ಎಲ್ಲ 6 ವಿಭಾಗಗಳಲ್ಲಿಯೂ ‘ವರ್ಲ್ಡ್​ ಗ್ರೀನ್ ಅವಾರ್ಡ್​ 2022’ ಗೆದ್ದುಕೊಂಡಿದೆ.

ಔಟರ್ ರಿಂಗ್ ರೋಡ್ (ORR)ನಲ್ಲಿ ಮತ್ತು ಸುತ್ತಲೂ ಹಚ್ಚ ಹಸಿರನ್ನು ಅಭಿವೃದ್ಧಿಪಡಿಸುವುದಕ್ಕಾಗಿ ಹೈದರಾಬಾದ್ ಪ್ರತಿಷ್ಠಿತ AIPH ಗ್ಲೋಬಲ್ ‘ವರ್ಲ್ಡ್ ಗ್ರೀನ್ ಸಿಟಿ ಅವಾರ್ಡ್ಸ್ 2022’ ಅನ್ನು ಪಡೆದುಕೊಂಡಿದೆ. ಪೌರಾಡಳಿತ ಮತ್ತು ನಗರಾಭಿವೃದ್ಧಿ ಸಚಿವ ಕೆ.ಟಿ. ರಾಮರಾವ್ ಅವರು ಸಂಪೂರ್ಣ ಹೈದರಾಬಾದ್ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ತಂಡ ಮತ್ತು ವಿಶೇಷ ಮುಖ್ಯ ಕಾರ್ಯದರ್ಶಿ ಅರವಿಂದ್ ಕುಮಾರ್ ಅವರನ್ನು ಈ ಸಾಧನೆಗಾಗಿ ಅಭಿನಂದಿಸಿದ್ದಾರೆ.

ಇದನ್ನೂ ಓದಿ: ಹೈದರಾಬಾದ್ ಸೇರಿ ತೆಲಂಗಾಣದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ: ಹಳದಿ ಅಲರ್ಟ್ ಘೋಷಣೆ

ಹೈದರಾಬಾದ್​ಗೆ ಪ್ರತಿಷ್ಠಿತ “ಇಂಟರ್ನ್ಯಾಷನಲ್ ಅಸೋಸಿಯೇಶನ್ ಆಫ್ ಹಾರ್ಟಿಕಲ್ಚರ್ ಪ್ರೊಡ್ಯೂಸರ್ಸ್” (AIPH) ಪ್ರಶಸ್ತಿ ಲಭಿಸಿರುವುದಕ್ಕೆ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಅಂತಾರಾಷ್ಟ್ರೀಯ ಪ್ರಶಸ್ತಿಗಳು ತೆಲಂಗಾಣ ಮತ್ತು ದೇಶದ ಕೀರ್ತಿಯನ್ನು ಮತ್ತಷ್ಟು ಗಟ್ಟಿಗೊಳಿಸಿವೆ ಎಂದಿದ್ದಾರೆ.

ಈ ಅಂತಾರಾಷ್ಟ್ರೀಯ ಪ್ರಶಸ್ತಿಗಳಿಗೆ ಆಯ್ಕೆಯಾದ ಭಾರತದ ಏಕೈಕ ನಗರ ಹೈದರಾಬಾದ್ ಎಂಬುದು ಹೆಮ್ಮೆಯ ಸಂಗತಿಯಾಗಿದೆ ಎಂದು ಸಿಎಂ ಕೆಸಿಆರ್​ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ