AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇರೆ ದೇಶದ ಅಲ್ಪಸಂಖ್ಯಾತರ ಮೇಲಿನ ದಾಳಿಯ ಬಗ್ಗೆಯೂ ಜಗತ್ತು ಗಮನಹರಿಸಬೇಕು; ಮೋಹನ್ ಭಾಗವತ್

ಹಿಂದುತ್ವವು ಶಾಶ್ವತ ಧರ್ಮವಾಗಿದೆ. ಈ ಸನಾತನ ಧರ್ಮದ ಆಚಾರ್ಯರು ಸೇವಾ ಧರ್ಮವನ್ನು ಅನುಸರಿಸುತ್ತಾರೆ. ಸೇವಾ ಧರ್ಮವು ಮಾನವೀಯತೆಯ ಧರ್ಮವಾಗಿದೆ ಎಂದು ಆರ್‌ಎಸ್‌ಎಸ್ ಸರಸಂಘಚಾಲಕ್ ಡಾ. ಮೋಹನ್ ಭಾಗವತ್ ಹೇಳಿದ್ದಾರೆ. ಹಿಂದೂ ಸೇವಾ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದೂ ಸೇವಾ ಮಹೋತ್ಸವವನ್ನು ಹಿಂದೂ ಆಧ್ಯಾತ್ಮಿಕ ಸೇವಾ ಸಂಸ್ಥೆಯು ಪುಣೆಯ ಶಿಕ್ಷಣ ಪ್ರಸಾರಕ ಮಂಡಳಿಯ ಕಾಲೇಜು ಮೈದಾನದಲ್ಲಿ ಆಯೋಜಿಸಿದೆ. ಈ ಉತ್ಸವವು ಡಿಸೆಂಬರ್ 22ರವರೆಗೆ ನಡೆಯಲಿದ್ದು, ಇದು ಹಿಂದೂ ಸಂಸ್ಕೃತಿ, ಆಚರಣೆಗಳು ಮತ್ತು ಸಾಮಾಜಿಕ ಸೇವಾ ಕಾರ್ಯಗಳ ಮಾಹಿತಿಯನ್ನು ಪ್ರದರ್ಶಿಸುತ್ತದೆ.

ಬೇರೆ ದೇಶದ ಅಲ್ಪಸಂಖ್ಯಾತರ ಮೇಲಿನ ದಾಳಿಯ ಬಗ್ಗೆಯೂ ಜಗತ್ತು ಗಮನಹರಿಸಬೇಕು; ಮೋಹನ್ ಭಾಗವತ್
Mohan Bhagwat
ಸುಷ್ಮಾ ಚಕ್ರೆ
|

Updated on:Dec 19, 2024 | 6:44 PM

Share

ಪುಣೆ: ಕೆಲವು ದೇಶಗಳು ಭಾರತಕ್ಕೆ ಇಲ್ಲಿನ ಅಲ್ಪಸಂಖ್ಯಾತರ ಸಮಸ್ಯೆಗಳನ್ನು ಪರಿಶೀಲಿಸುವಂತೆ ಆಗಾಗ ಹೇಳುತ್ತವೆ. ಆದರೆ ಇತರ ದೇಶಗಳಲ್ಲಿ ಅಲ್ಪಸಂಖ್ಯಾತ ಸಮುದಾಯಗಳು ಏನನ್ನು ಎದುರಿಸುತ್ತಿವೆ ಎಂಬುದನ್ನು ಅವರು ನೋಡುತ್ತಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಪುಣೆಯಲ್ಲಿ .’ಹಿಂದೂ ಸೇವಾ ಮಹೋತ್ಸವ’ವನ್ನು ಉದ್ಘಾಟಿಸಿ ಮೋಹನ್ ಭಾಗವತ್ ಮಾತನಾಡಿದ್ದಾರೆ.

ವಿಶ್ವ ಶಾಂತಿಯ ಬಗ್ಗೆ ದೊಡ್ಡ ಘೋಷಣೆಗಳನ್ನು ಮಾಡಲಾಗುತ್ತಿದೆ. ವಿಶ್ವಶಾಂತಿಯ ಬಗ್ಗೆ ನಮ್ಮ ದೇಶಕ್ಕೆ ಸಲಹೆ ನೀಡಲಾಗುತ್ತಿದೆ. ಆದರೆ ಅದೇ ಸಮಯದಲ್ಲಿ ಬೇರೆ ದೇಶಗಳಲ್ಲಿ ಯುದ್ಧಗಳು ಕೊನೆಗೊಳ್ಳುತ್ತಿಲ್ಲ. ನಮ್ಮ ದೇಶದಲ್ಲಿ ಅಲ್ಪಸಂಖ್ಯಾತರ ಬಗ್ಗೆ ಚಿಂತಿಸುವಂತೆ ನಾವು ಆಗಾಗ ಹೇಳುತ್ತಿದ್ದರೂ, ಅಲ್ಪಸಂಖ್ಯಾತರು ಹೊರಗೆ ಎಂತಹ ಪರಿಸ್ಥಿತಿ ಎದುರಿಸುತ್ತಿದ್ದಾರೆ ಎಂಬುದನ್ನು ನಾವು ನೋಡುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ವಾರಗಳಲ್ಲಿ, ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾ ಸರ್ಕಾರವನ್ನು ಪದಚ್ಯುತಗೊಳಿಸಿದ ನಂತರ ನೆರೆಯ ರಾಷ್ಟ್ರದಲ್ಲಿ ಹಿಂದೂಗಳ ಪರಿಸ್ಥಿತಿಯ ಬಗ್ಗೆ ಆರ್​ಎಸ್​ಎಸ್​ ತೀವ್ರ ಕಳವಳ ವ್ಯಕ್ತಪಡಿಸಿತ್ತು. ಆದರೆ, ಇಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ವಿರುದ್ಧದ ಹಿಂಸಾಚಾರದ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ.

ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಅಸಹನೀಯ ಪರಿಸ್ಥಿತಿಗೆ ಖಂಡನೆ; 685 ಭಾರತೀಯ ಗಣ್ಯರಿಂದ ಬಹಿರಂಗ ಪತ್ರ

“ಮಾನವ ಧರ್ಮ ಎಲ್ಲಾ ಧರ್ಮಗಳ ಶಾಶ್ವತ ಧರ್ಮವಾಗಿದೆ, ಇದನ್ನು ವಿಶ್ವ ಧರ್ಮ ಮತ್ತು ಹಿಂದೂ ಧರ್ಮ ಎಂದೂ ಕರೆಯುತ್ತಾರೆ. ಆದರೆ, ಜಗತ್ತು ಈ ಧರ್ಮವನ್ನು ಮರೆತಿದೆ. ಅವರು ಅದೇ ಧರ್ಮವನ್ನು ಹೊಂದಿದ್ದಾರೆ. ಆದರೆ ಅವರು ಮರೆತಿದ್ದಾರೆ. ಇದರಿಂದಾಗಿ, ಇಂದು ನಾವು ಪರಿಸರ ಮತ್ತು ಇತರ ಸಮಸ್ಯೆಗಳಂತಹ ವಿವಿಧ ರೀತಿಯ ಸಮಸ್ಯೆಗಳನ್ನು ನೋಡುತ್ತಿದ್ದೇವೆ” ಎಂದು ಮೋಹನ್ ಭಾಗವತ್ ಹೇಳಿದರು.

Mohan Bhagwat (3)

ನಮ್ಮ ದೇಶದ ಹೊರಗಿನ ಬಹಳಷ್ಟು ಜನರು ಭಾರತದ ಪಾತ್ರವನ್ನು ವಹಿಸದೆ ವಿಶ್ವಶಾಂತಿ ಸಾಧ್ಯವಿಲ್ಲ ಎಂದು ಭಾವಿಸುತ್ತಾರೆ. ಭಾರತ ಮತ್ತು ಅದರ ಶ್ರೀಮಂತ ಸಂಪ್ರದಾಯವು 3,000 ವರ್ಷಗಳಿಂದ ನಡೆದುಬಂದಿದೆ. ಪ್ರಪಂಚದ ಈ ಅಗತ್ಯವನ್ನು ಪೂರೈಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದರು.

ಶಿಕ್ಷಣ ಪ್ರಸಾರಕ ಮಂಡಳಿ ಅಧ್ಯಕ್ಷ ಅ. ಎಸ್.ಕೆ. ಜೈನ್, ಉಪಾಧ್ಯಕ್ಷ ಶ್ರೀಕೃಷ್ಣ ಚಿತಾಳೆ, ಹಿಂದೂ ಸೇವಾ ಮಹೋತ್ಸವದ ಅಧ್ಯಕ್ಷ ಕೃಷ್ಣಕುಮಾರ್ ಗೋಯಲ್, ಸ್ವಾಮಿ ಗೋವಿಂದ ದೇವಗಿರಿ ಜಿ ಮಹಾರಾಜ್, ಜ್ಯೋತಿಷಿ ಲಾಭೇಶ್ ಮುನಿಜಿ ಮಹಾರಾಜ್, ಇಸ್ಕಾನ್‌ನ ಗೌರಂಗ್ ಪ್ರಭು, ಹಿಂದೂ ಆಧ್ಯಾತ್ಮಿಕ ಸೇವಾ ಸಂಸ್ಥೆಯ ರಾಷ್ಟ್ರೀಯ ಸಂಚಾಲಕ ಗುಣವಂತ ಕೊಠಾರಿ ಮೊದಲಾದವರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:07 pm, Thu, 19 December 24

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ