AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: 1000 ಕೆಜಿ ತೂಕದ ಖಾದಿ ತ್ರಿವರ್ಣಧ್ವಜ ಲೇಹ್​​ನಲ್ಲಿ ಅನಾವರಣ; ವಿಶ್ವದಲ್ಲೇ ಅತ್ಯಂತ ದೊಡ್ಡ ರಾಷ್ಟ್ರಧ್ವಜವಿದು

Gandhi Jayanti 2021: ರಾಷ್ಟ್ರಧ್ವಜವನ್ನು ಲಡಾಖ್​​ನ ಲೆಫ್ಟಿನೆಂಟ್​ ಗವರ್ನರ್​ ಆರ್​.ಕೆ.ಮಾಥುರ್​ ಅನಾವರಣಗೊಳಿಸಿದ್ದಾರೆ. ಹಾಗೇ, ಸೇನಾ ಮುಖ್ಯಸ್ಥ ಎಂ.ಎಂ.ನರವಾನೆ ಕೂಡ ಉಪಸ್ಥಿತರಿದ್ದರು.

Video: 1000 ಕೆಜಿ ತೂಕದ ಖಾದಿ ತ್ರಿವರ್ಣಧ್ವಜ ಲೇಹ್​​ನಲ್ಲಿ ಅನಾವರಣ; ವಿಶ್ವದಲ್ಲೇ ಅತ್ಯಂತ ದೊಡ್ಡ ರಾಷ್ಟ್ರಧ್ವಜವಿದು
ಲೇಹ್​​ನಲ್ಲಿ ಹಾರಿಸಲಾದ ಅತ್ಯಂತ ದೊಡ್ಡ ರಾಷ್ಟ್ರಧ್ವಜ
TV9 Web
| Edited By: |

Updated on:Oct 02, 2021 | 11:20 AM

Share

ಇಂದು ದೇಶಾದ್ಯಂತ ಮಹಾತ್ಮ ಗಾಂಧಿ (Mahatma Gandhi) 152ನೇ ಜನ್ಮದಿನ ಆಚರಣೆ ಮಾಡಲಾಗುತ್ತಿದ್ದು, ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್​, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಕೇಂದ್ರ ಸಚಿವರಾದಿಯಾಗಿ ಅನೇಕರು ಗಾಂಧಿಗೆ ನಮನ ಸಲ್ಲಿಸಿದ್ದಾರೆ.  ವಿವಿಧ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಹಾಗೇ, ಇಂದು ಕೇಂದ್ರಾಡಳಿತ ಪ್ರದೇಶ ಲಡಾಖ್​​ನ ಲೇಹ್ (Leh Of Ladakh)​​ನಲ್ಲಿ ಗಾಂಧಿ ಜಯಂತಿ ನಿಮಿತ್ತ, ಅತ್ಯಂತ ದೊಡ್ಡದಾದ ತ್ರಿವರ್ಣ ಧ್ವಜ ಹಾರಿಸಲಾಗಿದೆ. ಲೇಹ್​ನ ಝಾನ್ಸ್​​ಕರ್​ ಕಣಿವೆಯಲ್ಲಿ ಹಾರಿಸಾಲದ ಈ ಖಾದಿ ರಾಷ್ಟ್ರಧ್ವಜ 225 ಅಡಿ ಉದ್ದವಿದ್ದು, 125 ಅಡಿ ಅಗಲವಿದೆ. ಹಾಗೇ, 1000 ಕೆಜಿಗಳಷ್ಟು ತೂಗುತ್ತದೆ. ಇದು ವಿಶ್ವದಲ್ಲೇ ಅತ್ಯಂತ ದೊಡ್ಡ ರಾಷ್ಟ್ರಧ್ವಜ ಎನ್ನಿಸಿದ್ದು, ಮುಂಬೈನ ಮುದ್ರಣಕಂಪನಿಯೊಂದರ ಸಹಯೋಗದೊಂದಿಗೆ ಧ್ವಜ ತಯಾರಾಗಿದೆ.  

ಈ ರಾಷ್ಟ್ರಧ್ವಜವನ್ನು ಲಡಾಖ್​​ನ ಲೆಫ್ಟಿನೆಂಟ್​ ಗವರ್ನರ್​ ಆರ್​.ಕೆ.ಮಾಥುರ್​ ಅನಾವರಣಗೊಳಿಸಿದ್ದಾರೆ. ಹಾಗೇ, ಸೇನಾ ಮುಖ್ಯಸ್ಥ ಎಂ.ಎಂ.ನರವಾನೆ ಕೂಡ ಉಪಸ್ಥಿತರಿದ್ದರು. ಇಂದು ಇಲ್ಲಿ ಹಾರಿಸಲಾದ ಅತ್ಯಂತ ದೊಡ್ಡ ಖಾದಿ ರಾಷ್ಟ್ರಧ್ವಜವನ್ನು ಅಕ್ಟೋಬರ್​ 8ರಂದು ಏರ್​ಫೋರ್ಸ್​ ದಿನಾಚರಣೆ ನಿಮಿತ್ತ ಹಿಂಡನ್​ನಲ್ಲಿ ಹಾರಿಸಲಾಗುವುದು. ಅಂದಹಾಗೆ ಈ ಝಾನ್ಸ್​ಕರ್​ ವ್ಯಾಲಿ ಲಡಾಖ್​ನ ಕಾರ್ಗಿಲ್​ ಜಿಲ್ಲೆಯಲ್ಲಿದೆ. ಕಾರ್ಗಿಲ್​​ನ ರಾಷ್ಟ್ರೀಯ ಹೆದ್ದಾರಿಯಿಂದ 250 ಕಿಮೀ ದೂರದಲ್ಲಿದೆ.

ಭೌಗೋಳಿಕವಾಗಿ ಈ ಝಾನ್ಸ್​ಕರ್​ ಶ್ರೇಣಿ ಟೆಥಿಸ್​ ಹಿಮಾಲಯ ಶ್ರೇಣಿಗಳ ಭಾಗವಾಗಿದೆ. ಇದು ಸರಾಸರಿ 6000 ಮೀಟರ್​ (19,700 ಅಡಿ) ಎತ್ತರವಾಗಿದೆ. ಝಾನ್ಸ್​ಕರ್​ ಶ್ರೇಣಿಯ ಪೂರ್ವಭಾಗವನ್ನು ರೂಪ್ಶು ಎಂದು ಕರೆಯಲಾಗುತ್ತದೆ. ಈ ಝಾನ್ಸ್​ಕರ್​ ಪ್ರದೆಶವನ್ನು ಜಿಲ್ಲೆಯಾಗಿ ಪರಿವರ್ತಿಸಬೇಕು ಎಂಬ ಆಗ್ರಹವೂ ಬಹುದಿನಗಳಿಂದ ಇದೆ. ಝಾನ್ಸ್​ಕರ್ ಕಣಿವೆಯಂತೂ ಹಿಮಾಚ್ಛಾದಿತವಾಗಿದ್ದು, ಶುದ್ಧ ನದಿಗಳ ಹರಿವನ್ನು ಹೊಂದಿದೆ. ಬೌದ್ಧಧರ್ಮದ ಕೇಂದ್ರವೂ ಹೌದು.

ಇದನ್ನೂ ಓದಿ: ಯಲಹಂಕ: ಶಿವರಾಮ ಕಾರಂತ ಬಡಾವಣೆ ಭೂಸ್ವಾಧೀನಕ್ಕೆ ರೈತರ ವಿರೋಧ; ಪ್ರತಿಭಟಿಸುತ್ತಿದ್ದ ರೈತರು ಪೊಲೀಸರ ವಶಕ್ಕೆ

Youtube inspiration: ಯುಟ್ಯೂಬ್​ನಲ್ಲಿ ವೆಬ್ ​ಸಿರೀಸ್​ ನೋಡಿ ಬೈಕ್ ಕದಿಯುತ್ತಿದ್ದ ಗ್ಯಾಂಗ್​ ಬಂಧನ

Published On - 11:11 am, Sat, 2 October 21

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!