AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯನ್ನು ಆವರಿಸಿದ ಪಟಾಕಿ ಹೊಗೆ: ರಾಷ್ಟ್ರ ರಾಜಧಾನಿಯಲ್ಲಿ ಹದಗೆಟ್ಟ ವಾಯು ಗುಣಮಟ್ಟ

ದೆಹಲಿ: ಪಟಾಕಿ ಬಿಟ್ಟಾಕಿ ಅಂದ್ರೂ ಕೇಳದೆ, ಎಗ್ಗಿಲ್ಲದೆ ಪಟಾಕಿ ಸಿಡಿಸಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಹದಗೆಟ್ಟಿದೆ. ಜನರು ಪಟಾಕಿ ನಿಷೇಧವನ್ನು ನಿರ್ಲಕ್ಷಿಸಿರುವ ಪರಿಣಾಮವಾಗಿ ನಗರದ ವಾಯು ಗುಣಮಟ್ಟ ಸೂಚ್ಯಂಕದಲ್ಲಿ ಭಾರಿ ಕುಸಿತ ಕಂಡುಬಂದಿದೆ. ಕಳೆದ ನಾಲ್ಕು ವರ್ಷಗಳ ದೀಪಾವಳಿ ಹಬ್ಬದ ವೇಳೆಯಿದ್ದ ವಾಯು ಗುಣಮಟ್ಟವನ್ನು ಹೋಲಿಸಿದರೆ ಈ ಬಾರಿಯ ದೀಪಾವಳಿಯಲ್ಲಿ ಅತ್ಯಂತ ಕಳಪೆ ವಾಯು ಗುಣಮಟ್ಟ ಕಂಡುಬಂದಿದೆ. ಕಳೆದ 24 ಗಂಟೆಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕದಲ್ಲಿ (AQI) 414 ದಾಖಲಾಗಿದೆ. ಜೊತೆಗೆ, ಭಾನುವಾರ […]

ದೆಹಲಿಯನ್ನು ಆವರಿಸಿದ ಪಟಾಕಿ ಹೊಗೆ: ರಾಷ್ಟ್ರ ರಾಜಧಾನಿಯಲ್ಲಿ ಹದಗೆಟ್ಟ ವಾಯು ಗುಣಮಟ್ಟ
KUSHAL V
|

Updated on: Nov 15, 2020 | 4:33 PM

Share

ದೆಹಲಿ: ಪಟಾಕಿ ಬಿಟ್ಟಾಕಿ ಅಂದ್ರೂ ಕೇಳದೆ, ಎಗ್ಗಿಲ್ಲದೆ ಪಟಾಕಿ ಸಿಡಿಸಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಹದಗೆಟ್ಟಿದೆ. ಜನರು ಪಟಾಕಿ ನಿಷೇಧವನ್ನು ನಿರ್ಲಕ್ಷಿಸಿರುವ ಪರಿಣಾಮವಾಗಿ ನಗರದ ವಾಯು ಗುಣಮಟ್ಟ ಸೂಚ್ಯಂಕದಲ್ಲಿ ಭಾರಿ ಕುಸಿತ ಕಂಡುಬಂದಿದೆ. ಕಳೆದ ನಾಲ್ಕು ವರ್ಷಗಳ ದೀಪಾವಳಿ ಹಬ್ಬದ ವೇಳೆಯಿದ್ದ ವಾಯು ಗುಣಮಟ್ಟವನ್ನು ಹೋಲಿಸಿದರೆ ಈ ಬಾರಿಯ ದೀಪಾವಳಿಯಲ್ಲಿ ಅತ್ಯಂತ ಕಳಪೆ ವಾಯು ಗುಣಮಟ್ಟ ಕಂಡುಬಂದಿದೆ.

ಕಳೆದ 24 ಗಂಟೆಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕದಲ್ಲಿ (AQI) 414 ದಾಖಲಾಗಿದೆ. ಜೊತೆಗೆ, ಭಾನುವಾರ ಮಧ್ಯಾಹ್ನದ ವೇಳೆಗೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಗಾಳಿಯ ಗುಣಮಟ್ಟ ಕೊಂಚ ಸುಧಾರಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

2019ರ ದೀಪಾವಳಿಯಲ್ಲಿ (ಅಕ್ಟೋಬರ್ 27) ವಾಯು ಗುಣಮಟ್ಟ ಸೂಚ್ಯಂಕವು 337 (AQI) ಪ್ರದರ್ಶಿಸಿತ್ತು. ನಂತರದ ಎರಡು ದಿನಗಳ ಕಾಲ, ಅತ್ಯಂತ ಕಳಪೆ ವಾಯು ಗುಣಮಟ್ಟ ಮುಂದುವರಿದಿದ್ದು 368 ಮತ್ತು 400 (AQI) ವರದಿಯಾಗಿತ್ತು. 2018ರ ದೀಪಾವಳಿಯಲ್ಲಿ, ವಾಯು ಗುಣಮಟ್ಟ ಸೂಚ್ಯಂಕ 281 (AQI) ಆಗಿತ್ತು. ಮರುದಿನ 390 (AQI) ಆಗಿದ್ದು, ಮೂರು ದಿನಗಳ ಕಾಲ ಅತ್ಯಂತ ಕಳಪೆ ವಾಯು ಗುಣಮಟ್ಟ ಕಂಡುಬಂದಿತ್ತು. 2017ರ ದೀಪಾವಳಿಯಲ್ಲಿ (ಅಕ್ಟೋಬರ್ 19), 24 ಗಂಟೆಗಳ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕವು 319 (AQI) ಆಗಿತ್ತು. ನಂತರದ ಒಂದು ದಿನ ಅತ್ಯಂತ ಕಳಪೆ ವಾಯು ಗುಣಮಟ್ಟ ಮುಂದುವರಿದಿತ್ತು.

ಈ ನಡುವೆ, ಪಟಾಕಿ ಹೊಡೆದಿರುವ ಕಾರಣಕ್ಕೆ 32 ಜನರ ಮೇಲೆ ಕೇಸ್ ದಾಖಲಿಸಿರುವ ದೆಹಲಿ ಪೊಲೀಸರು, 55 ಪಟಾಕಿ ವ್ಯಾಪಾರಿಗಳನ್ನು ಸಹ ಬಂಧಿಸಿದ್ದಾರೆ. ಜೊತೆಗೆ, 3,407.85 ಕೆ.ಜಿ ಪಟಾಕಿ ವಶಪಡಿಸಿಕೊಂಡಿದ್ದಾರೆ.

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ