AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat: ಕಚ್​ನ ಬಂದರಿನಲ್ಲಿ 9000 ಕೋಟಿ ರೂ.ಮೌಲ್ಯದ ಮಾದಕ ದ್ರವ್ಯ ವಶ; ಅಫ್ಘಾನಿಸ್ತಾನದಿಂದ ಬಂದ ಡ್ರಗ್ಸ್​

ಕಳೆದ ಎರಡು ದಿನಗಳ ಹಿಂದೆ ಇದೇ ಬಂದರಿನಲ್ಲಿ ಸುಮಾರು 2000 ಕೋಟಿ ರೂಪಾಯಿ ಮೌಲ್ಯದ ಹೆರೋಯಿನ್​ನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದರು.

Gujarat: ಕಚ್​ನ ಬಂದರಿನಲ್ಲಿ 9000 ಕೋಟಿ ರೂ.ಮೌಲ್ಯದ ಮಾದಕ ದ್ರವ್ಯ ವಶ; ಅಫ್ಘಾನಿಸ್ತಾನದಿಂದ ಬಂದ ಡ್ರಗ್ಸ್​
ಮುಂದ್ರಾ ಬಂದರಿನಲ್ಲಿ ಜಪ್ತಿ ಮಾಡಲಾದ ಹೆರೋಯಿನ್​ (ಫೋಟೋ ಕೃಪೆ-ಇಂಡಿಯಾ ಟುಡೆ)
Follow us
TV9 Web
| Updated By: Lakshmi Hegde

Updated on:Sep 19, 2021 | 5:35 PM

ಗುಜರಾತ್​​ನ ಕಚ್​​ನಲ್ಲಿರುವ ಮುಂದ್ರಾ ಬಂದರಿನಲ್ಲಿ ಸುಮಾರು 9000 ಕೋಟಿ ರೂಪಾಯಿ ಮೌಲ್ಯದ ಹೆರೋಯಿನ್​​ಗಳನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ನಿಷೇಧಿತ ಹೆರೋಯಿನ್​ನ್ನು ಅಫ್ಘಾನಿಸ್ತಾನದಿಂದ ತರಲಾಗಿದೆ. ಇದು ಕಳ್ಳವ್ಯಾಪಾರ ಎಂದು ಡಿಆರ್​ಐ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಈ ಮಾದಕದ್ರವ್ಯವನ್ನು ಟಾಲ್ಕಂ ಪೌಡರ್​ ಎಂಬಂತೆ ಬಿಂಬಿಸಿ ಬಂದರಿಗೆ ತರಲಾಗುತ್ತಿದೆ ಎಂದೂ ಗೊತ್ತಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ಶುರುವಾಗಿದೆ.  

ಆಂಧ್ರಪ್ರದೇಶದ ವಿಜಯವಾಡದಲ್ಲಿರುವ ಅಶಿ ಟ್ರೇಡಿಂಗ್​ ಸಂಸ್ಥೆ ಅಫ್ಘಾನಿಸ್ತಾನದಿಂದ ಕಂಟೇನರ್​ಗಳು ಮೂಲಕ ಇಷ್ಟು ದೊಡ್ಡ ಪ್ರಮಾಣದ ಹೆರೋಯಿನ್​ ಆಮದು ಮಾಡಿಕೊಂಡಿದ್ದಾಗಿ ತಿಳಿದುಬಂದಿದೆ.  ಕಳೆದ ಎರಡು ದಿನಗಳ ಹಿಂದೆ ಇದೇ ಬಂದರಿನಲ್ಲಿ ಸುಮಾರು 2000 ಕೋಟಿ ರೂಪಾಯಿ ಮೌಲ್ಯದ ಹೆರೋಯಿನ್​ನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ಅದೂ ಕೂಡ ಟಾಲ್ಕಂ ಪೌಡರ್​ ಜತೆಗೇ ಬಂದಿತ್ತು. ಪ್ರತಿಬಾರಿಯೂ ಹೀಗೆ ಟಾಲ್ಕಂ ಪೌಡರ್​ ಜತೆಗೇ ಬರುವ ಹೆರೋಯಿನ್​ ದೊಡ್ಡ ತಲೆನೋವಾಗಿದೆ. ಈ ಬಗ್ಗೆ ಗಂಭೀರ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇಷ್ಟು ದೊಡ್ಡ ಮೊತ್ತದ ಹೆರೋಯಿನ್​ ಹೊತ್ತ ಶಿಪಿಂಗ್​ ಕಂಟೇನರ್​ಗಳು ಬಂದರಿಗೆ ಬರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದು, ಕಿಂಗ್​ಪಿನ್​​ ಯಾರೆಂದು ಪತ್ತೆ ಹಚ್ಚಲು ಗುಪ್ತಚರ ಅಧಿಕಾರಿಗಳು ಮುಂದಾಗಿದ್ದಾರೆ.

ಇದನ್ನೂ ಓದಿ: ಪ್ರಭಾಸ್ ನಟನೆಯ ‘ಆದಿಪುರುಷ್’ ಚಿತ್ರ ಯಾವ ಹಂತದಲ್ಲಿದೆ? ಇಲ್ಲಿದೆ ಕುತೂಹಲಕರ ಮಾಹಿತಿ

ಉತ್ತರಾಖಂಡ್​​ ಜನರಿಗೆ ಭರ್ಜರಿ ಭರವಸೆ ನೀಡಿದ ಅರವಿಂದ್ ಕೇಜ್ರಿವಾಲ್​; 6 ತಿಂಗಳಲ್ಲಿ ಲಕ್ಷ ಉದ್ಯೋಗ ಸೃಷ್ಟಿ

Published On - 5:34 pm, Sun, 19 September 21

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ