AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat: ಕಚ್​ನ ಬಂದರಿನಲ್ಲಿ 9000 ಕೋಟಿ ರೂ.ಮೌಲ್ಯದ ಮಾದಕ ದ್ರವ್ಯ ವಶ; ಅಫ್ಘಾನಿಸ್ತಾನದಿಂದ ಬಂದ ಡ್ರಗ್ಸ್​

ಕಳೆದ ಎರಡು ದಿನಗಳ ಹಿಂದೆ ಇದೇ ಬಂದರಿನಲ್ಲಿ ಸುಮಾರು 2000 ಕೋಟಿ ರೂಪಾಯಿ ಮೌಲ್ಯದ ಹೆರೋಯಿನ್​ನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದರು.

Gujarat: ಕಚ್​ನ ಬಂದರಿನಲ್ಲಿ 9000 ಕೋಟಿ ರೂ.ಮೌಲ್ಯದ ಮಾದಕ ದ್ರವ್ಯ ವಶ; ಅಫ್ಘಾನಿಸ್ತಾನದಿಂದ ಬಂದ ಡ್ರಗ್ಸ್​
ಮುಂದ್ರಾ ಬಂದರಿನಲ್ಲಿ ಜಪ್ತಿ ಮಾಡಲಾದ ಹೆರೋಯಿನ್​ (ಫೋಟೋ ಕೃಪೆ-ಇಂಡಿಯಾ ಟುಡೆ)
TV9 Web
| Edited By: |

Updated on:Sep 19, 2021 | 5:35 PM

Share

ಗುಜರಾತ್​​ನ ಕಚ್​​ನಲ್ಲಿರುವ ಮುಂದ್ರಾ ಬಂದರಿನಲ್ಲಿ ಸುಮಾರು 9000 ಕೋಟಿ ರೂಪಾಯಿ ಮೌಲ್ಯದ ಹೆರೋಯಿನ್​​ಗಳನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ನಿಷೇಧಿತ ಹೆರೋಯಿನ್​ನ್ನು ಅಫ್ಘಾನಿಸ್ತಾನದಿಂದ ತರಲಾಗಿದೆ. ಇದು ಕಳ್ಳವ್ಯಾಪಾರ ಎಂದು ಡಿಆರ್​ಐ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಈ ಮಾದಕದ್ರವ್ಯವನ್ನು ಟಾಲ್ಕಂ ಪೌಡರ್​ ಎಂಬಂತೆ ಬಿಂಬಿಸಿ ಬಂದರಿಗೆ ತರಲಾಗುತ್ತಿದೆ ಎಂದೂ ಗೊತ್ತಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ಶುರುವಾಗಿದೆ.  

ಆಂಧ್ರಪ್ರದೇಶದ ವಿಜಯವಾಡದಲ್ಲಿರುವ ಅಶಿ ಟ್ರೇಡಿಂಗ್​ ಸಂಸ್ಥೆ ಅಫ್ಘಾನಿಸ್ತಾನದಿಂದ ಕಂಟೇನರ್​ಗಳು ಮೂಲಕ ಇಷ್ಟು ದೊಡ್ಡ ಪ್ರಮಾಣದ ಹೆರೋಯಿನ್​ ಆಮದು ಮಾಡಿಕೊಂಡಿದ್ದಾಗಿ ತಿಳಿದುಬಂದಿದೆ.  ಕಳೆದ ಎರಡು ದಿನಗಳ ಹಿಂದೆ ಇದೇ ಬಂದರಿನಲ್ಲಿ ಸುಮಾರು 2000 ಕೋಟಿ ರೂಪಾಯಿ ಮೌಲ್ಯದ ಹೆರೋಯಿನ್​ನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ಅದೂ ಕೂಡ ಟಾಲ್ಕಂ ಪೌಡರ್​ ಜತೆಗೇ ಬಂದಿತ್ತು. ಪ್ರತಿಬಾರಿಯೂ ಹೀಗೆ ಟಾಲ್ಕಂ ಪೌಡರ್​ ಜತೆಗೇ ಬರುವ ಹೆರೋಯಿನ್​ ದೊಡ್ಡ ತಲೆನೋವಾಗಿದೆ. ಈ ಬಗ್ಗೆ ಗಂಭೀರ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇಷ್ಟು ದೊಡ್ಡ ಮೊತ್ತದ ಹೆರೋಯಿನ್​ ಹೊತ್ತ ಶಿಪಿಂಗ್​ ಕಂಟೇನರ್​ಗಳು ಬಂದರಿಗೆ ಬರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದು, ಕಿಂಗ್​ಪಿನ್​​ ಯಾರೆಂದು ಪತ್ತೆ ಹಚ್ಚಲು ಗುಪ್ತಚರ ಅಧಿಕಾರಿಗಳು ಮುಂದಾಗಿದ್ದಾರೆ.

ಇದನ್ನೂ ಓದಿ: ಪ್ರಭಾಸ್ ನಟನೆಯ ‘ಆದಿಪುರುಷ್’ ಚಿತ್ರ ಯಾವ ಹಂತದಲ್ಲಿದೆ? ಇಲ್ಲಿದೆ ಕುತೂಹಲಕರ ಮಾಹಿತಿ

ಉತ್ತರಾಖಂಡ್​​ ಜನರಿಗೆ ಭರ್ಜರಿ ಭರವಸೆ ನೀಡಿದ ಅರವಿಂದ್ ಕೇಜ್ರಿವಾಲ್​; 6 ತಿಂಗಳಲ್ಲಿ ಲಕ್ಷ ಉದ್ಯೋಗ ಸೃಷ್ಟಿ

Published On - 5:34 pm, Sun, 19 September 21

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’