AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat: ಕಚ್​ನ ಬಂದರಿನಲ್ಲಿ 9000 ಕೋಟಿ ರೂ.ಮೌಲ್ಯದ ಮಾದಕ ದ್ರವ್ಯ ವಶ; ಅಫ್ಘಾನಿಸ್ತಾನದಿಂದ ಬಂದ ಡ್ರಗ್ಸ್​

ಕಳೆದ ಎರಡು ದಿನಗಳ ಹಿಂದೆ ಇದೇ ಬಂದರಿನಲ್ಲಿ ಸುಮಾರು 2000 ಕೋಟಿ ರೂಪಾಯಿ ಮೌಲ್ಯದ ಹೆರೋಯಿನ್​ನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದರು.

Gujarat: ಕಚ್​ನ ಬಂದರಿನಲ್ಲಿ 9000 ಕೋಟಿ ರೂ.ಮೌಲ್ಯದ ಮಾದಕ ದ್ರವ್ಯ ವಶ; ಅಫ್ಘಾನಿಸ್ತಾನದಿಂದ ಬಂದ ಡ್ರಗ್ಸ್​
ಮುಂದ್ರಾ ಬಂದರಿನಲ್ಲಿ ಜಪ್ತಿ ಮಾಡಲಾದ ಹೆರೋಯಿನ್​ (ಫೋಟೋ ಕೃಪೆ-ಇಂಡಿಯಾ ಟುಡೆ)
TV9 Web
| Edited By: |

Updated on:Sep 19, 2021 | 5:35 PM

Share

ಗುಜರಾತ್​​ನ ಕಚ್​​ನಲ್ಲಿರುವ ಮುಂದ್ರಾ ಬಂದರಿನಲ್ಲಿ ಸುಮಾರು 9000 ಕೋಟಿ ರೂಪಾಯಿ ಮೌಲ್ಯದ ಹೆರೋಯಿನ್​​ಗಳನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ನಿಷೇಧಿತ ಹೆರೋಯಿನ್​ನ್ನು ಅಫ್ಘಾನಿಸ್ತಾನದಿಂದ ತರಲಾಗಿದೆ. ಇದು ಕಳ್ಳವ್ಯಾಪಾರ ಎಂದು ಡಿಆರ್​ಐ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಈ ಮಾದಕದ್ರವ್ಯವನ್ನು ಟಾಲ್ಕಂ ಪೌಡರ್​ ಎಂಬಂತೆ ಬಿಂಬಿಸಿ ಬಂದರಿಗೆ ತರಲಾಗುತ್ತಿದೆ ಎಂದೂ ಗೊತ್ತಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ಶುರುವಾಗಿದೆ.  

ಆಂಧ್ರಪ್ರದೇಶದ ವಿಜಯವಾಡದಲ್ಲಿರುವ ಅಶಿ ಟ್ರೇಡಿಂಗ್​ ಸಂಸ್ಥೆ ಅಫ್ಘಾನಿಸ್ತಾನದಿಂದ ಕಂಟೇನರ್​ಗಳು ಮೂಲಕ ಇಷ್ಟು ದೊಡ್ಡ ಪ್ರಮಾಣದ ಹೆರೋಯಿನ್​ ಆಮದು ಮಾಡಿಕೊಂಡಿದ್ದಾಗಿ ತಿಳಿದುಬಂದಿದೆ.  ಕಳೆದ ಎರಡು ದಿನಗಳ ಹಿಂದೆ ಇದೇ ಬಂದರಿನಲ್ಲಿ ಸುಮಾರು 2000 ಕೋಟಿ ರೂಪಾಯಿ ಮೌಲ್ಯದ ಹೆರೋಯಿನ್​ನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ಅದೂ ಕೂಡ ಟಾಲ್ಕಂ ಪೌಡರ್​ ಜತೆಗೇ ಬಂದಿತ್ತು. ಪ್ರತಿಬಾರಿಯೂ ಹೀಗೆ ಟಾಲ್ಕಂ ಪೌಡರ್​ ಜತೆಗೇ ಬರುವ ಹೆರೋಯಿನ್​ ದೊಡ್ಡ ತಲೆನೋವಾಗಿದೆ. ಈ ಬಗ್ಗೆ ಗಂಭೀರ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇಷ್ಟು ದೊಡ್ಡ ಮೊತ್ತದ ಹೆರೋಯಿನ್​ ಹೊತ್ತ ಶಿಪಿಂಗ್​ ಕಂಟೇನರ್​ಗಳು ಬಂದರಿಗೆ ಬರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದು, ಕಿಂಗ್​ಪಿನ್​​ ಯಾರೆಂದು ಪತ್ತೆ ಹಚ್ಚಲು ಗುಪ್ತಚರ ಅಧಿಕಾರಿಗಳು ಮುಂದಾಗಿದ್ದಾರೆ.

ಇದನ್ನೂ ಓದಿ: ಪ್ರಭಾಸ್ ನಟನೆಯ ‘ಆದಿಪುರುಷ್’ ಚಿತ್ರ ಯಾವ ಹಂತದಲ್ಲಿದೆ? ಇಲ್ಲಿದೆ ಕುತೂಹಲಕರ ಮಾಹಿತಿ

ಉತ್ತರಾಖಂಡ್​​ ಜನರಿಗೆ ಭರ್ಜರಿ ಭರವಸೆ ನೀಡಿದ ಅರವಿಂದ್ ಕೇಜ್ರಿವಾಲ್​; 6 ತಿಂಗಳಲ್ಲಿ ಲಕ್ಷ ಉದ್ಯೋಗ ಸೃಷ್ಟಿ

Published On - 5:34 pm, Sun, 19 September 21

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ