AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat: ಕಚ್​ನ ಬಂದರಿನಲ್ಲಿ 9000 ಕೋಟಿ ರೂ.ಮೌಲ್ಯದ ಮಾದಕ ದ್ರವ್ಯ ವಶ; ಅಫ್ಘಾನಿಸ್ತಾನದಿಂದ ಬಂದ ಡ್ರಗ್ಸ್​

ಕಳೆದ ಎರಡು ದಿನಗಳ ಹಿಂದೆ ಇದೇ ಬಂದರಿನಲ್ಲಿ ಸುಮಾರು 2000 ಕೋಟಿ ರೂಪಾಯಿ ಮೌಲ್ಯದ ಹೆರೋಯಿನ್​ನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದರು.

Gujarat: ಕಚ್​ನ ಬಂದರಿನಲ್ಲಿ 9000 ಕೋಟಿ ರೂ.ಮೌಲ್ಯದ ಮಾದಕ ದ್ರವ್ಯ ವಶ; ಅಫ್ಘಾನಿಸ್ತಾನದಿಂದ ಬಂದ ಡ್ರಗ್ಸ್​
ಮುಂದ್ರಾ ಬಂದರಿನಲ್ಲಿ ಜಪ್ತಿ ಮಾಡಲಾದ ಹೆರೋಯಿನ್​ (ಫೋಟೋ ಕೃಪೆ-ಇಂಡಿಯಾ ಟುಡೆ)
TV9 Web
| Edited By: |

Updated on:Sep 19, 2021 | 5:35 PM

Share

ಗುಜರಾತ್​​ನ ಕಚ್​​ನಲ್ಲಿರುವ ಮುಂದ್ರಾ ಬಂದರಿನಲ್ಲಿ ಸುಮಾರು 9000 ಕೋಟಿ ರೂಪಾಯಿ ಮೌಲ್ಯದ ಹೆರೋಯಿನ್​​ಗಳನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ನಿಷೇಧಿತ ಹೆರೋಯಿನ್​ನ್ನು ಅಫ್ಘಾನಿಸ್ತಾನದಿಂದ ತರಲಾಗಿದೆ. ಇದು ಕಳ್ಳವ್ಯಾಪಾರ ಎಂದು ಡಿಆರ್​ಐ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಈ ಮಾದಕದ್ರವ್ಯವನ್ನು ಟಾಲ್ಕಂ ಪೌಡರ್​ ಎಂಬಂತೆ ಬಿಂಬಿಸಿ ಬಂದರಿಗೆ ತರಲಾಗುತ್ತಿದೆ ಎಂದೂ ಗೊತ್ತಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ಶುರುವಾಗಿದೆ.  

ಆಂಧ್ರಪ್ರದೇಶದ ವಿಜಯವಾಡದಲ್ಲಿರುವ ಅಶಿ ಟ್ರೇಡಿಂಗ್​ ಸಂಸ್ಥೆ ಅಫ್ಘಾನಿಸ್ತಾನದಿಂದ ಕಂಟೇನರ್​ಗಳು ಮೂಲಕ ಇಷ್ಟು ದೊಡ್ಡ ಪ್ರಮಾಣದ ಹೆರೋಯಿನ್​ ಆಮದು ಮಾಡಿಕೊಂಡಿದ್ದಾಗಿ ತಿಳಿದುಬಂದಿದೆ.  ಕಳೆದ ಎರಡು ದಿನಗಳ ಹಿಂದೆ ಇದೇ ಬಂದರಿನಲ್ಲಿ ಸುಮಾರು 2000 ಕೋಟಿ ರೂಪಾಯಿ ಮೌಲ್ಯದ ಹೆರೋಯಿನ್​ನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ಅದೂ ಕೂಡ ಟಾಲ್ಕಂ ಪೌಡರ್​ ಜತೆಗೇ ಬಂದಿತ್ತು. ಪ್ರತಿಬಾರಿಯೂ ಹೀಗೆ ಟಾಲ್ಕಂ ಪೌಡರ್​ ಜತೆಗೇ ಬರುವ ಹೆರೋಯಿನ್​ ದೊಡ್ಡ ತಲೆನೋವಾಗಿದೆ. ಈ ಬಗ್ಗೆ ಗಂಭೀರ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇಷ್ಟು ದೊಡ್ಡ ಮೊತ್ತದ ಹೆರೋಯಿನ್​ ಹೊತ್ತ ಶಿಪಿಂಗ್​ ಕಂಟೇನರ್​ಗಳು ಬಂದರಿಗೆ ಬರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದು, ಕಿಂಗ್​ಪಿನ್​​ ಯಾರೆಂದು ಪತ್ತೆ ಹಚ್ಚಲು ಗುಪ್ತಚರ ಅಧಿಕಾರಿಗಳು ಮುಂದಾಗಿದ್ದಾರೆ.

ಇದನ್ನೂ ಓದಿ: ಪ್ರಭಾಸ್ ನಟನೆಯ ‘ಆದಿಪುರುಷ್’ ಚಿತ್ರ ಯಾವ ಹಂತದಲ್ಲಿದೆ? ಇಲ್ಲಿದೆ ಕುತೂಹಲಕರ ಮಾಹಿತಿ

ಉತ್ತರಾಖಂಡ್​​ ಜನರಿಗೆ ಭರ್ಜರಿ ಭರವಸೆ ನೀಡಿದ ಅರವಿಂದ್ ಕೇಜ್ರಿವಾಲ್​; 6 ತಿಂಗಳಲ್ಲಿ ಲಕ್ಷ ಉದ್ಯೋಗ ಸೃಷ್ಟಿ

Published On - 5:34 pm, Sun, 19 September 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ