Wrestlers Protest: ಜಂತರ್​ ಮಂತರ್​ನಲ್ಲಿ ನಡೆಯುತ್ತಿರುವ ಕುಸ್ತಿಪಟುಗಳ ಪ್ರತಿಭಟನೆಗೆ ರೈತರ ಬೆಂಬಲ

ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟು(Wrestler)ಗಳು ನಡೆಸುತ್ತಿರುವ ಪ್ರತಿಭಟನೆಗೆ ಮತ್ತಷ್ಟು ಬಲ ಸಿಕ್ಕಿದೆ. ಇಂದು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಒಗ್ಗಟ್ಟು ಪ್ರದರ್ಶಿಸಲಿದ್ದಾರೆ.

Wrestlers Protest: ಜಂತರ್​ ಮಂತರ್​ನಲ್ಲಿ ನಡೆಯುತ್ತಿರುವ ಕುಸ್ತಿಪಟುಗಳ ಪ್ರತಿಭಟನೆಗೆ ರೈತರ ಬೆಂಬಲ
ಕುಸ್ತಿಪಟುಗಳ ಪ್ರತಿಭಟನೆ

Updated on: May 07, 2023 | 10:54 AM

ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟು(Wrestler)ಗಳು ನಡೆಸುತ್ತಿರುವ ಪ್ರತಿಭಟನೆಗೆ ಮತ್ತಷ್ಟು ಬಲ ಸಿಕ್ಕಿದೆ. ಇಂದು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಒಗ್ಗಟ್ಟು ಪ್ರದರ್ಶಿಸಲಿದ್ದಾರೆ. ಭಾರತೀಯ ಕಿಸಾನ್ ಯೂನಿಯನ್​ನ ನರೇಶ್ ಟಿಕಾಯತ್ ಕೂಡ ಆಗಮಿಸಿದ್ದಾರೆ. ಬೆಳಗ್ಗೆ 11 ಗಂಟೆಯಿಂದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ, ದೆಹಲಿಯ ಜಂತರ್​ ಮಂತರ್​ನಲ್ಲಿ ಪೊಲೀಸರು ಭದ್ರತೆಯನ್ನು ಬಿಗಿಗೊಳಿಸಿದ್ದಾರೆ.

ಜಂತರ್ ಮಂತರ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆರ್ ಎಎಫ್, ಸಿಆರ್ ಪಿಎಫ್ ಮತ್ತು ದೆಹಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದರೊಂದಿಗೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬ್ಯಾರಿಕೇಡ್‌ ಹಾಕಲಾಗಿದೆ. ಇದರೊಂದಿಗೆ ದೆಹಲಿಯ ಗಡಿ ಪ್ರದೇಶಗಳಲ್ಲಿ ಭದ್ರತಾ ತಪಾಸಣೆ ಮತ್ತು ಗಸ್ತು ಕೂಡ ಹೆಚ್ಚಿಸಲಾಗಿದೆ.

ಮತ್ತಷ್ಟು ಓದಿ: Wrestlers Protest: ಕುಸ್ತಿಪಟುಗಳ ಪ್ರತಿಭಟನಾ ಸ್ಥಳಕ್ಕೆ ಪ್ರವೇಶ ನಿರ್ಬಂಧಿಸಿದ ದೆಹಲಿ ಪೊಲೀಸ್

ದೆಹಲಿ ಪೊಲೀಸರ ಪ್ರಕಾರ, ಯಾವುದೇ ರೀತಿಯಲ್ಲಿ ಕಾನೂನು ಉಲ್ಲಂಘನೆಯಾಗದಂತೆ ನೋಡಿಕೊಳ್ಳಲು ಸಂಪೂರ್ಣ ಸಿದ್ಧತೆಗಳನ್ನು ಮಾಡಲಾಗಿದೆ. ಈ ರೀತಿ ಮಾಡುವವರನ್ನು ವಶಕ್ಕೆ ತೆಗೆದುಕೊಳ್ಳಲಾಗುವುದು. ಗಡಿಭಾಗದಲ್ಲಿ ವಾಹನಗಳನ್ನು ತಪಾಸಣೆ ನಡೆಸಿ ಅದರಲ್ಲಿ ಟೆಂಟ್ ಅಥವಾ ಅಂತಹ ವಸ್ತು ಕಂಡುಬಂದಲ್ಲಿ ವಶಪಡಿಸಿಕೊಳ್ಳಲಾಗುವುದು. ಇದರೊಂದಿಗೆ ವಾಹನವನ್ನು ದೆಹಲಿ ಪ್ರವೇಶಿಸಲು ಸಹ ಅನುಮತಿಸಲಾಗುವುದಿಲ್ಲ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಪೊಲೀಸರನ್ನೂ ನಿಯೋಜಿಸಲಾಗುವುದು.

ಪಂಜಾಬ್, ಹರಿಯಾಣ, ದೆಹಲಿ ಮತ್ತು ಪಶ್ಚಿಮ ಉತ್ತರ ಪ್ರದೇಶದ ಯುನೈಟೆಡ್ ಕಿಸಾನ್ ಮೋರ್ಚಾಕ್ಕೆ ಸೇರಿದ ಸಾವಿರಾರು ರೈತ ಮುಖಂಡರು ಜಂತರ್ ಮಂತರ್ ತಲುಪಿ ಕುಸ್ತಿಪಟುಗಳಿಗೆ ತಮ್ಮ ಬೆಂಬಲವನ್ನು ನೀಡಲಿದ್ದಾರೆ. ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ವ್ರೆಸ್ಲಿಂಗ್ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ಸಂಘಟನೆ ಒತ್ತಾಯಿಸಿದೆ.

ಇದರೊಂದಿಗೆ ಕುಸ್ತಿಪಟುಗಳನ್ನು ಬೆಂಬಲಿಸಿ ದೇಶಾದ್ಯಂತ ಪ್ರತಿಭಟನೆ ನಡೆಸಲು ರೈತ ಸಂಘಟನೆ ಮುಂದಾಗಿದೆ. ಕುಸ್ತಿ ಅಸೋಸಿಯೇಷನ್ ​​ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಾಗಿರುವಾಗ ಅವರನ್ನು ಏಕೆ ಬಂಧಿಸುತ್ತಿಲ್ಲ ಎಂದು ಪ್ರಶ್ನಿಸಲಾಗುತ್ತಿದೆ.

ಮೇ 11-18ರ ಅವಧಿಯಲ್ಲಿ ಎಲ್ಲಾ ರಾಜ್ಯಗಳ ರಾಜಧಾನಿ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸಲಿವೆ. ಯುನೈಟೆಡ್ ಕಿಸಾನ್ ಮೋರ್ಚಾ ದೆಹಲಿ ಪೊಲೀಸರು ಸೂಕ್ಷ್ಮತೆಯನ್ನು ತೋರಿಸುತ್ತಿಲ್ಲ ಎಂದು ಆರೋಪಿಸಿದೆ ಮತ್ತು ಕುಸ್ತಿಪಟುಗಳು ಮೂಲಭೂತ ಹಕ್ಕುಗಳಿಂದ ವಂಚಿತರಾಗಿರುವುದನ್ನು ಖಂಡಿಸಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us