AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WFI ಮುಖ್ಯಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ; ಕುಸ್ತಿಪಟುಗಳ ಪ್ರತಿಭಟನೆಯ ಟೈಮ್​​ಲೈನ್

ಕುಸ್ತಿಪಟುಗಳು ದೇಶಕ್ಕಾಗಿ ಪದಕಗಳನ್ನು ಗೆದ್ದಿರುವುದರಿಂದ ಅವರ ಮಾತನ್ನು ಸತ್ಯ ಎಂದು ಕಣ್ಮುಚ್ಚಿ ಒಪ್ಪಬೇಕು.  ಅವರ ಹೇಳಿಕೆಗಳ ಆಧಾರದ ಮೇಲೆ ಬ್ರಿಜ್ ಭೂಷಣ್ ಶರನ್ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಕುಸ್ತಿಪಟುಗಳು ಹೇಳುತ್ತಿದ್ದಾರೆ. ಆದಾಗ್ಯೂ, ಕಾನೂನು ತನ್ನ ಮಾರ್ಗವನ್ನು ಅನುಸರಿಸುತ್ತಿದೆ.

WFI ಮುಖ್ಯಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ; ಕುಸ್ತಿಪಟುಗಳ ಪ್ರತಿಭಟನೆಯ ಟೈಮ್​​ಲೈನ್
ಕುಸ್ತಿಪಟುಗಳ ಪ್ರತಿಭಟನೆ
TV9 Web
| Edited By: |

Updated on:May 30, 2023 | 7:48 PM

Share

ಭಾರತೀಯ ಕುಸ್ತಿ ಫೆಡರೇಷನ್ (Wrestling Federation of India) ಮುಖ್ಯಸ್ಥರು ಲೈಂಗಿಕ ಕಿರುಕುಳ ನೀಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕಳೆದ ಒಂದು ತಿಂಗಳಿನಿಂದ ಅಗ್ರ ಕುಸ್ತಿಪಟುಗಳು ಪ್ರತಿಭಟನೆ (Wrestlers protest) ಮಾಡುತ್ತಿದ್ದಾರೆ. ಇದೀಗ ಪ್ರತಿಭಟನೆಯ ಭಾಗವಾಗಿ ತಾವು ಗಳಿಸಿದ ಪದಕಗಳನ್ನು ಗಂಗಾ ನದಿಗೆ ಎಸೆಯುವುದಾಗಿ ಕುಸ್ತಿಪಟುಗಳು ಹೇಳಿದ್ದಾರೆ. ಇಷ್ಟೆಲ್ಲ ವಿದ್ಯಮಾನಗಳು ನಡೆಯುತ್ತಿರುವಾಗ ಪ್ರಸ್ತುತ ಪ್ರತಿಭಟನೆಯ ಬಗ್ಗೆ ಒಂದಷ್ಟು ಸಂಗತಿಗಳು ಮತ್ತು ಪ್ರತಿಭಟನೆಯ ಟೈಮ್​​ಲೈನ್ ಹೀಗಿದೆ.

7 ವರ್ಷಗಳ ಹಿಂದೆ ಈ ಘಟನೆ ನಡೆದಿದ್ದರೂ ಕುಸ್ತಿಪಟುಗಳು ಈ ಹಿಂದೆ ದೂರು ದಾಖಲಿಸಿರಲಿಲ್ಲ. ಅವರು ಸುಲಭವಾಗಿ ಯಾವುದೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಬಹುದಿತ್ತು. ಜನವರಿಯಲ್ಲಿ ತಮ್ಮ ಪ್ರತಿಭಟನೆಯನ್ನು ಪ್ರಾರಂಭಿಸಿದ ತಕ್ಷಣ, ಸಮಸ್ಯೆಯನ್ನು ಅರ್ಥಮಾಡಿಕೊಳ್ಳಲು ಕ್ರೀಡಾ ಸಚಿವಾಲಯದ ಅಧಿಕಾರಿಗಳ ನಡುವೆ ಎರಡು ದಿನಗಳ ವ್ಯಾಪಕ ಚರ್ಚೆಗಳನ್ನು ನಡೆಸಲಾಯಿತು. ಚರ್ಚೆಯ ನಂತರ, ಕುಸ್ತಿಪಟುಗಳ ಅಪೇಕ್ಷೆಯಂತೆ ಮೇಲುಸ್ತುವಾರಿ ಸಮಿತಿಯನ್ನು ರಚಿಸಲಾಯಿತು. ಕುಸ್ತಿಪಟುಗಳು ನೀಡಿದ ಸಲಹೆಯಂತೆ ಸಮಿತಿಗೆ ಸದಸ್ಯರನ್ನು ಸೇರಿಸಲಾಯಿತು.ಮೇಲುಸ್ತುವಾರಿ ಸಮಿತಿಯು ಪ್ರತಿ ದೂರುದಾರರನ್ನು ಆಲಿಸಿತು. ಎಲ್ಲವನ್ನೂ ವಿಡಿಯೊ ರೆಕಾರ್ಡ್ ಮಾಡಲಾಗಿದೆ. ಹೆಚ್ಚಿನ ತನಿಖೆಗಾಗಿ ದೆಹಲಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಮೇಲುಸ್ತುವಾರಿ ಸಮಿತಿಯ ವರದಿಯನ್ನು ಸರ್ಕಾರವು ಸಮಸ್ಯೆಯ ಸೂಕ್ಷ್ಮತೆಯ ಕಾರಣದಿಂದ ಸಾರ್ವಜನಿಕಗೊಳಿಸಲಿಲ್ಲ. ವರದಿಯನ್ನು ದೆಹಲಿ ಪೊಲೀಸರಿಗೆ ನೀಡಲಾಗಿದೆ. ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ನ್ಯಾಯಯುತ ತನಿಖೆಗೆ ಅವಕಾಶ ಮಾಡಿಕೊಡಲು ಭಾರತೀಯ ಕುಸ್ತಿ ಫೆಡರೇಷನ್​​ನ ದೈನಂದಿನ ಕಾರ್ಯಗಳಿಂದ ದೂರವಿದ್ದು ಮೇಲುಸ್ತುವಾರಿ ಸಮಿತಿ ಮುಂದೆ ಹಾಜರಾಗಿ ತಮ್ಮ ಹೇಳಿಕೆ ನೀಡಿದ್ದಾರೆ.

ಕುಸ್ತಿಪಟುಗಳ ಬೇಡಿಕೆಯಂತೆ ದೆಹಲಿ ಪೊಲೀಸ್ ಈಗಾಗಲೇ ಬ್ರಿಜ್ ಭೂಷಣ್ ವಿರುದ್ಧ 2 ಪ್ರಕರಣಗಳನ್ನು ದಾಖಲಿಸಿದ್ದಾರೆ. ಕಾರ್ಯವಿಧಾನದ ಪ್ರಕಾರ ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಏಪ್ರಿಲ್‌ನಲ್ಲಿ ಪ್ರತಿಭಟನೆ ಆರಂಭಿಸಿದಾಗಿನಿಂದ ಅವರಿಗೆ ಎಲ್ಲ ರೀತಿಯ ಬೆಂಬಲ ನೀಡಲಾಗುತ್ತಿದೆ. ನಿಷೇಧಿತ ಪ್ರದೇಶವಾದ ಜಂತರ್ ಮಂತರ್‌ನಲ್ಲಿ ಅವರಿಗೆ ಕುಳಿತುಕೊಳ್ಳಲು ಅವಕಾಶ ನೀಡಲಾಯಿತು. ಅವರಿಗೆ ಎಲ್ಲಾ ಸೌಕರ್ಯಗಳನ್ನು ನೀಡಲಾಯಿತು. ಎಫ್‌ಐಆರ್‌ನ ಅವರ ಬೇಡಿಕೆಯನ್ನು ಈಡೇರಿಸಿದ್ದರೂ ಸಹ 38 ದಿನಗಳ ಕಾಲ ಪ್ರತಿಭಟನೆಯನ್ನು ಮುಂದುವರಿಸಲು ಅವರಿಗೆ ಅವಕಾಶ ನೀಡಲಾಯಿತು.

ಅವರು ಇಂಡಿಯಾ ಗೇಟ್‌ನಲ್ಲಿ ಕ್ಯಾಂಡಲ್ ಮಾರ್ಚ್ ನಡೆಸಿದರು, ಗುರುದ್ವಾರ ಮತ್ತು ಕನ್ನಾಟ್ ಪ್ಲೇಸ್‌ಗೆ ಹೋದರು. ಅವರನ್ನು ದೆಹಲಿ ಪೊಲೀಸರು ತಡೆಯಲಿಲ್ಲ. ಭಾನುವಾರ ಹೊಸ ಸಂಸತ್ತಿನ ಭದ್ರತೆಯನ್ನು ಉಲ್ಲಂಘಿಸಲು ಕುಸ್ತಿಪಟುಗಳು ಪ್ರಯತ್ನಿಸಿದಾಗ ದೆಹಲಿ ಪೊಲೀಸರು ಕ್ರಮ ತೆಗೆದುಕೊಳ್ಳಬೇಕಾಯಿತು, ಏಕೆಂದರೆ ಪ್ರದೇಶವು ಸೆಕ್ಷನ್ 144 ರ ಅಡಿಯಲ್ಲಿದೆ.

ಮಾಧ್ಯಮಗಳಿಗೆ ಕುಸ್ತಿಪಟುಗಳು ನೀಡಿದ ಹೇಳಿಕೆಗಳ ಪ್ರಕಾರ ಅವರು ಕಾನೂನು ವ್ಯವಸ್ಥೆ ಅಥವಾ ಪೊಲೀಸ್ ತನಿಖೆಗಳನ್ನು ಅಥವಾ ಮೇಲ್ವಿಚಾರಣಾ ಸಮಿತಿಯ ಸಂಶೋಧನೆಗಳನ್ನು ನಂಬುವುದಿಲ್ಲ. ಅವರು ಯಾರನ್ನೂ ನಂಬುವುದಿಲ್ಲ.

ಕುಸ್ತಿಪಟುಗಳು ದೇಶಕ್ಕಾಗಿ ಪದಕಗಳನ್ನು ಗೆದ್ದಿರುವುದರಿಂದ ಅವರ ಮಾತನ್ನು ಸತ್ಯ ಎಂದು ಕಣ್ಮುಚ್ಚಿ ನಂಬಬೇಕು.  ಅವರ ಹೇಳಿಕೆಗಳ ಆಧಾರದ ಮೇಲೆ ಬ್ರಿಜ್ ಭೂಷಣ್ ಶರನ್ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಕುಸ್ತಿಪಟುಗಳು ಹೇಳುತ್ತಿದ್ದಾರೆ. ಆದಾಗ್ಯೂ, ಕಾನೂನು ತನ್ನ ಮಾರ್ಗವನ್ನು ಅನುಸರಿಸುತ್ತಿದೆ. ಅವು ಒಂದೇ ಕಾನೂನು ವ್ಯವಸ್ಥೆಯ ಭಾಗವಾಗಿದೆ. ಕಾನೂನು ಎಲ್ಲರಿಗೂ ಒಂದೇ ಆಗಿರುತ್ತವೆ. ಯಾರೂ ಕಾನೂನಿಗಿಂತ ಮೇಲಲ್ಲ,. ಅವರು ವ್ಯವಸ್ಥೆಯ ಮೂಲಕವೇ ಹೋಗಬೇಕು.

ಇದನ್ನೂ ಓದಿ: Wrestlers Protest: ಪ್ರತಿಭಟನಾನಿರತ ಕುಸ್ತಿಪಟುಗಳು ಇಲ್ಲಿಯವರೆಗೆ ಗೆದ್ದ ಪದಕಗಳೆಷ್ಟು?

ಕ್ರೀಡಾ ಸಚಿವಾಲಯದ ಹಿರಿಯ ಅಧಿಕಾರಿಗಳು ಜನವರಿಯಿಂದ ನಿರಂತರವಾಗಿ ಕುಸ್ತಿಪಟುಗಳೊಂದಿಗೆ ಸಂಪರ್ಕದಲ್ಲಿದ್ದು ಕಾನೂನಿನ ಪ್ರಕಾರ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಭರವಸೆ ನೀಡಿದ್ದಾರೆ.

ಕುಸ್ತಿಪಟುಗಳು ಗೆದ್ದ ಪದಕ ಅವರಿಗೆ ಮಾತ್ರವಲ್ಲ, ದೇಶಕ್ಕೆ ಸೇರಿದ್ದು. ಏಕೆಂದರೆ ಅವರು ಭಾರತವನ್ನು ಪ್ರತಿನಿಧೀಕರಿಸಿದ್ದರು. ಅವರ ಪದಕಗಳು ಕೇವಲ ಕುಸ್ತಿಪಟುಗಳ ಶ್ರಮದಿಂದ ಮಾತ್ರವಲ್ಲ, ತರಬೇತುದಾರರು, ಸಹಾಯಕ ಸಿಬ್ಬಂದಿಯ ಪರಿಶ್ರಮದಿಂದ ದಕ್ಕಿದ್ದು. ಕುಸ್ತಿಪಟುಗಳಿಗೆ ಉತ್ತಮ ತರಬೇತಿ, ಮೂಲಸೌಕರ್ಯ ಸೌಲಭ್ಯಗಳನ್ನು ಪಡೆಯಲು ಕಳೆದ 5 ವರ್ಷಗಳಲ್ಲಿ 150 ಕೋಟಿಗೂ ಹೆಚ್ಚು ಹಣವನ್ನು ಖರ್ಚು ಮಾಡಲಾಗಿದೆ. ಅವರ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಮತ್ತು ಒಲಿಂಪಿಕ್, ಏಷ್ಯನ್ ಗೇಮ್ಸ್ ಮತ್ತು ಮನ್‌ವೆಲ್ತ್ ಕ್ರೀಡಾಕೂಟಗಳಲ್ಲಿ ಪದಕಗಳನ್ನು ಗೆಲ್ಲಲು ಅವರಿಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ತರಬೇತಿ ನೀಡಲಾಗಿದೆ.ಈ ಹಣ ತೆರಿಗೆದಾರರದ್ದು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:21 pm, Tue, 30 May 23

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ