AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Wrestlers Protest: ಬಿಜೆಪಿ ಸಂಸದನ ವಿರುದ್ಧ MeToo ಆರೋಪ, ರ್ಯಾಲಿ ಮುಂದೂಡಿದ ಬ್ರಿಜ್ ಭೂಷಣ್ ಶರಣ್ ಸಿಂಗ್

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕುಸ್ತಿ ಸಂಸ್ಥೆಯ ಮುಖ್ಯಸ್ಥ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಇಂದು ಅಯೋಧ್ಯೆಯಲ್ಲಿ ರ್ಯಾಲಿಯನ್ನು ನಡೆಸುವುದಾಗಿ ಹೇಳಿದರು, ಆದರೆ ಇದೀಗ ಕೆಲವು ದಿನಗಳ ಕಾಲ ಈ ರ್ಯಾಲಿಯನ್ನು ಮುಂದೂಡಲಾಗಿದೆ

Wrestlers Protest: ಬಿಜೆಪಿ ಸಂಸದನ ವಿರುದ್ಧ MeToo ಆರೋಪ, ರ್ಯಾಲಿ ಮುಂದೂಡಿದ ಬ್ರಿಜ್ ಭೂಷಣ್ ಶರಣ್ ಸಿಂಗ್
ಬ್ರಿಜ್ ಭೂಷಣ್ ಶರಣ್ ಸಿಂಗ್
ಅಕ್ಷಯ್​ ಪಲ್ಲಮಜಲು​​
|

Updated on: Jun 02, 2023 | 12:21 PM

Share

ದೆಹಲಿ: ಮಹಿಳಾ ಕುಸ್ತಿಪಟುಗಳಿಗೆ (Wrestlers Protest) ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕುಸ್ತಿ ಸಂಸ್ಥೆಯ ಮುಖ್ಯಸ್ಥ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಅವರು ಇಂದು ಅಯೋಧ್ಯೆಯಲ್ಲಿ ರ್ಯಾಲಿಯನ್ನು ನಡೆಸುವುದಾಗಿ ಹೇಳಿದರು, ಆದರೆ ಇದೀಗ ಕೆಲವು ದಿನಗಳ ಕಾಲ ಈ ರ್ಯಾಲಿಯನ್ನು ಮುಂದೂಡಲಾಗಿದೆ, ಪೊಲೀಸರು ತಮ್ಮ ವಿರುದ್ಧದ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ. ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಸೋಮವಾರ “ಸಾಧುಗಳ ಆಶೀರ್ವಾದದೊಂದಿಗೆ” ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವುದಾಗಿ ಹೇಳಿದರು. ಈಗಾಗಲೇ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ವಿರುದ್ಧ ಮಹಿಳಾ ಕುಸ್ತಿಪಟುಗಳು ದೂರು ನೀಡಿದ್ದು, ಅವರನ್ನು ಕುಸ್ತಿ ಸಂಸ್ಥೆಯ ಮುಖ್ಯಸ್ಥ ಸ್ಥಾನದಿಂದ ತೆಗೆದು ಹಾಕಬೇಕು ಎಂದು ಒತ್ತಾಯಿಸಲಾಗಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ನಾನು 28 ವರ್ಷಗಳಿಂದ ನಿಮ್ಮ ಸೇವೆಯನ್ನು ಮಾಡುತ್ತಿದ್ದಾನೆ. ರಾಜಕೀಯ ಉದ್ದೇಶಕ್ಕಾಗಿ ನನ್ನ ಮೇಲೆ ಇಂತಹ ಆರೋಪ ಮಾಡಲಾಗುತ್ತಿದೆ. ನನ್ನ ಪಕ್ಷವನ್ನು ಈ ವಿಚಾರದಲ್ಲಿ ದೂರುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:Wrestlers Protest: ಬ್ರಿಜ್​ ಭೂಷಣ್​ರನ್ನು ಬಂಧಿಸಲು ಸಾಕಷ್ಟು ಸಾಕ್ಷ್ಯಗಳಿಲ್ಲ: ಪೊಲೀಸ್ ಮೂಲಗಳು

ಪ್ರಸ್ತುತ ಪರಿಸ್ಥಿತಿಯಲ್ಲಿ ಕೆಲವು ರಾಜಕೀಯ ಪಕ್ಷಗಳು ಪ್ರಾಂತೀಯತೆ, ಪ್ರಾದೇಶಿಕತೆ ಮತ್ತು ಜನಾಂಗೀಯ ಸಂಘರ್ಷವನ್ನು ಉತ್ತೇಜಿಸುವ ಮೂಲಕ ಸಾಮಾಜಿಕ ಸೌಹಾರ್ದತೆ ಕದಡಲು ಯತ್ನಿಸುತ್ತಿದ್ದು, ಈ ಕಾರಣದಿಂದ ಜೂನ್ 5 ರಂದು ಅಯೋಧ್ಯೆಯಲ್ಲಿ ಸಂತರ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿರುವಾಗ, ಜತೆಗೆ ಸುಪ್ರೀಂ ಕೋರ್ಟ್​​ನಲ್ಲಿ ಈ ಬಗ್ಗೆ ವಿಚಾರಣೆ ಇರುವಾಗ ಈ ರ್ಯಾಲಿ ಮಾಡುವುದು ಸರಿಯಲ್ಲ ಎಂದು ಹೇಳಿದರು.

ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು “ಎಲ್ಲಾ ಧರ್ಮಗಳು, ಜಾತಿಗಳು ಮತ್ತು ಕ್ಷೇತ್ರಗಳ ಲಕ್ಷಾಂತರ ಬೆಂಬಲಿಗರು ಮತ್ತು ಹಿತೈಷಿಗಳು ನನ್ನನ್ನು ಬೆಂಬಲಿಸಿದ್ದಾರೆ” ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ