AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಶೇಖರ್ ಆಜಾದ್​​​ನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ; ದಾಳಿಕೋರರನ್ನು ಬಂಧಿಸುವಂತೆ ಒತ್ತಾಯ

ಭೀಮ್ ಆರ್ಮಿ ಮುಖ್ಯಸ್ಥರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ ಎಂದು ತಿಳಿದಾಗ, ನಾವು ಭೇಟಿಯಾಗಲು ಇಲ್ಲಿಗೆ ಬಂದಿದ್ದೇವೆ ಎಂದು ಅವರು ಹೇಳಿದ್ದಾರೆ. ಚಂದ್ರಶೇಖರ್ ಮೇಲಿನ ಹಲ್ಲೆಯನ್ನು ಖಂಡಿಸಿದ ಸಾಕ್ಷಿ ಮಲಿಕ್, ಇದು ನಾಚಿಕೆಗೇಡಿನ ಸಂಗತಿ. ಪೊಲೀಸರು ಕೂಡಲೇ ದಾಳಿಕೋರರನ್ನು ಗುರುತಿಸಿ ಬಂಧಿಸಬೇಕು ಎಂದು ಹೇಳಿದ್ದಾರೆ..

ಚಂದ್ರಶೇಖರ್ ಆಜಾದ್​​​ನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ; ದಾಳಿಕೋರರನ್ನು ಬಂಧಿಸುವಂತೆ ಒತ್ತಾಯ
ಚಂದ್ರಶೇಖರ್ ಆಜಾದ್​​ನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ
ರಶ್ಮಿ ಕಲ್ಲಕಟ್ಟ
|

Updated on:Jun 29, 2023 | 4:30 PM

Share

ಕುಸ್ತಿಪಟುಗಳಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ (Bajrang Punia) ಗುರುವಾರ ಆಜಾದ್ ಸಮಾಜ್ ಪಾರ್ಟಿ (Azad Samaj Party) ಮುಖ್ಯಸ್ಥ ಚಂದ್ರಶೇಖರ್ ಆಜಾದ್ (Chandrashekhar Azad) ಅವರನ್ನು ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲಾ ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದಾರೆ. ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಪುನಿಯಾ, ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ. ಇಂದು ಸತ್ಯಕ್ಕಾಗಿ ಹೋರಾಡುವವರ ಮೇಲೆ ಮಾತ್ರ ದಾಳಿ ಮಾಡಲಾಗುತ್ತಿದೆ. ದಾಳಿಕೋರರನ್ನು ಆದಷ್ಟು ಬೇಗ ಬಂಧಿಸಬೇಕು ಎಂಬುದು ನಮ್ಮ ಏಕೈಕ ಬೇಡಿಕೆಯಾಗಿದೆ ಎಂದರು. ಚಂದ್ರಶೇಖರ್ ಯಾವುದೇ ಒಂದು ಸಮಾಜದ ನಾಯಕನಲ್ಲ, ಅವುರ ಇಡೀ ಸಮಾಜದ ನಾಯಕ. ಅದು ರೈತ ಚಳವಳಿಯಾಗಲಿ ಅಥವಾ ಕುಸ್ತಿಪಟುಗಳ ಹೋರಾಟವೇ ಆಗಿರಲಿ, ಅವರು ಸತ್ಯಕ್ಕಾಗಿ ಹೋರಾಡುವ ಪ್ರತಿಯೊಬ್ಬ ವ್ಯಕ್ತಿಯೊಂದಿಗೆ ನಿಂತಿದ್ದಾರೆ, ಚಂದ್ರಶೇಖರ್ ಅವರ ಪ್ರತಿಭಟನೆಗೆ ಸಂಪೂರ್ಣ ಬೆಂಬಲವಿದೆ ಎಂದು ಪುನಿಯಾ ಹೇಳಿದ್ದಾರೆ.

ಭೀಮ್ ಆರ್ಮಿ ಮುಖ್ಯಸ್ಥರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ ಎಂದು ತಿಳಿದಾಗ, ನಾವು ಭೇಟಿಯಾಗಲು ಇಲ್ಲಿಗೆ ಬಂದಿದ್ದೇವೆ ಎಂದು ಅವರು ಹೇಳಿದ್ದಾರೆ. ಚಂದ್ರಶೇಖರ್ ಮೇಲಿನ ಹಲ್ಲೆಯನ್ನು ಖಂಡಿಸಿದ ಸಾಕ್ಷಿ ಮಲಿಕ್, ಇದು ನಾಚಿಕೆಗೇಡಿನ ಸಂಗತಿ. ಪೊಲೀಸರು ಕೂಡಲೇ ದಾಳಿಕೋರರನ್ನು ಗುರುತಿಸಿ ಬಂಧಿಸಬೇಕು ಎಂದು ಹೇಳಿದ್ದಾರೆ..

ಇದಕ್ಕೂ ಮುನ್ನ ಉತ್ತರ ಪ್ರದೇಶ ಪೊಲೀಸರು ಕೊಲೆ ಯತ್ನ ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಬುಧವಾರ ಸಂಜೆ ಸಹರಾನ್‌ಪುರ ಜಿಲ್ಲೆಯ ದಿಯೋಬಂದ್‌ನಲ್ಲಿ ಅಪರಿಚಿತ ದುಷ್ಕರ್ಮಿಗಳು ಕಾರಿನ ಮೇಲೆ ಗುಂಡು ಹಾರಿಸಿದ್ದು ಈ ದಾಳಿಯಲ್ಲಿ ಚಂದ್ರಶೇಖರ್ ಗಾಯಗೊಂಡಿದ್ದಾರೆ.

ಜಿಲ್ಲೆಯ ಸಹರಾನ್‌ಪುರದ ದಿಯೋಬಂದ್ ಪ್ರದೇಶದಲ್ಲಿ ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಅಜ್ಞಾತ ದುಷ್ಕರ್ಮಿಗಳು ಆಜಾದ್ ಮೇಲೆ ಗುಂಡು ಹಾರಿಸಿದಾಗ ಆಜಾದ್ ಸಮಾಜ ಪಕ್ಷದ ಸದಸ್ಯ ಮನೀಶ್ ವಾಹನ ಚಲಾಯಿಸುತ್ತಿದ್ದರು.

ಇದನ್ನೂ ಓದಿ: Chandrashekhar Azad: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮೇಲೆ ಉತ್ತರ ಪ್ರದೇಶದ ಸಹರಾನ್​ಪುರದಲ್ಲಿ ಗುಂಡಿನ ದಾಳಿ

ಆಜಾದ್ ಅವರ ಸೊಂಟಕ್ಕೆ ಗುಂಡು ತಗುಲಿದ್ದು, ಚಿಕಿತ್ಸೆಗಾಗಿ ದೇವಬಂದ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ನಂತರ ಅವರನ್ನು ಸಹರಾನ್‌ಪುರದ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆಜಾದ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಎಸ್‌ಯುವಿಯಲ್ಲಿ ಹಿಂತಿರುಗುತ್ತಿದ್ದಾಗ ದೇವಬಂದ್‌ನ ಗಾಂಧಿ ಕಾಲೋನಿಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾಳಿಕೋರರು ಕಾರಿನಲ್ಲಿದ್ದರು. ಅವರು ಬಲಭಾಗದಿಂದ ಬಂದು ಆಜಾದ್ ಅವರ ಎಸ್‌ಯುವಿ ಮೇಲೆ ಗುಂಡು ಹಾರಿಸಿದರು. ಗುಂಡು ಅವರ ಹೊಟ್ಟೆಯನ್ನು ತೂರಿಕೊಂಡಿದೆ ಎಂದು ಸಹರಾನ್‌ಪುರ (ನಗರ) ಪೊಲೀಸ್ ವರಿಷ್ಠಾಧಿಕಾರಿ ಅಭಿಮನ್ಯು ಮಾಂಗ್ಲಿಕ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:28 pm, Thu, 29 June 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ