AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Wrestlers Protest: ಇನ್ಮುಂದೆ ಬೀದಿಗಿಳಿದು ಪ್ರತಿಭಟನೆ ಮಾಡುವುದಿಲ್ಲ ಏನಿದ್ರೂ ಕೋರ್ಟ್​ನಲ್ಲಿ ಹೋರಾಟ ಎಂದ ಕುಸ್ತಿಪಟುಗಳು

ಇನ್ನುಮುಂದೆ ಬೀದಿಗಳಿದು ಪ್ರತಿಭಟನೆ ಮಾಡುವುದಿಲ್ಲ, ನ್ಯಾಯಾಲಯದಲ್ಲಿ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಕುಸ್ತಿಪಟುಗಳು(Wrestlers) ಹೇಳಿಕೆ ನೀಡಿದ್ದಾರೆ.

Wrestlers Protest: ಇನ್ಮುಂದೆ ಬೀದಿಗಿಳಿದು ಪ್ರತಿಭಟನೆ ಮಾಡುವುದಿಲ್ಲ ಏನಿದ್ರೂ ಕೋರ್ಟ್​ನಲ್ಲಿ ಹೋರಾಟ ಎಂದ ಕುಸ್ತಿಪಟುಗಳು
ಕುಸ್ತಿಪಟುಗಳುImage Credit source: Outlook
ನಯನಾ ರಾಜೀವ್
|

Updated on: Jun 26, 2023 | 8:19 AM

Share

ಇನ್ನುಮುಂದೆ ಬೀದಿಗಳಿದು ಪ್ರತಿಭಟನೆ ಮಾಡುವುದಿಲ್ಲ, ನ್ಯಾಯಾಲಯದಲ್ಲಿ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಕುಸ್ತಿಪಟುಗಳು(Wrestlers) ಹೇಳಿಕೆ ನೀಡಿದ್ದಾರೆ. ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು, ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕು ಹಾಗೂ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಒಂದು ತಿಂಗಳುಗಳ ಕಾಲ ದೆಹಲಿಯ ಜಂತರ್ ಮಂತರ್ ಎದುರು ಪ್ರತಿಭಟನೆ ನಡೆಸಿದ್ದರು.

ಇದಾದ ಬಳಿಕ ಪೊಲೀಸರು ಅಲ್ಲಿ ಪ್ರತಿಭಟನೆ ಮಾಡಲು ಅನುಮತಿಯನ್ನು ನಿರಾಕರಿಸಿದ್ದರು. ಅಮಿತ್ ಶಾ ಅವರೊಂದಿಗೆ ಎರಡು ಸಭೆಗಳನ್ನು ನಡೆಸಿ ಅದು ವಿಫಲವಾಗಿತ್ತು. ಜತೆಗೆ ಸಚಿವ ಅನುರಾಗ್ ಠಾಕೂರ್ ಅವರ ಜತೆಯೂ ಸಭೆ ನಡೆಸಿದ್ದರು. ಇದೀಗ ತಮ್ಮ ಚಳವಳಿಯನ್ನು ನ್ಯಾಯಾಲಯದಲ್ಲಿ ಮಾಡುವುದಾಗಿ ವಿನೇಶ್ ಫೋಗಟ್, ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಒಂದೇ ರೀತಿಯ ಟ್ವೀಟ್​ಗಳನ್ನು ಮಾಡಿದ್ದಾರೆ.

ಮತ್ತಷ್ಟು ಓದಿ: Wrestlers Protest: ಗೃಹ ಸಚಿವ ಅಮಿತ್​ ಶಾರನ್ನು ಭೇಟಿಯಾದ ಕುಸ್ತಿಪಟುಗಳು

ಈ ಪ್ರಕರಣದಲ್ಲಿ ನಮಗೆ ನ್ಯಾಯ ಸಿಗುವವರೆಗೂ ಕುಸ್ತಿಪಟುಗಳ ಪ್ರತಿಭಟನೆ ಮುಂದುವರೆಯುತ್ತದೆ ಆದರೆ ಹೋರಾಟ ರಸ್ತೆಯಲ್ಲಲ್ಲ, ನ್ಯಾಯಾಲಯದಲ್ಲಿ ಎಂದು ಹೇಳಿದ್ದಾರೆ.

ಸರ್ಕಾರ ಭಾರತೀಯ ಕುಸ್ತಿ ಒಕ್ಕೂಟದಲ್ಲಿ ಬದಲಾವಣೆ ಮಾಡಲು ಮುಂದಾಗಿದೆ, ಸರ್ಕಾರ ನೀಡಿದ ಭರವಸೆಯಂತೆ ಪ್ರಕ್ರಿಯೆ ಆರಂಭಗೊಂಡಿದೆ.

ಜುಲೈ 11ರಂದು ಚುನಾವಣೆ ನಡೆಯಲಿದೆ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಈ ಟ್ವೀಟ್ ಮಾಡಿದ ಕೆಲವೇ ಕ್ಷಣಗಳಲ್ಲಿ ವಿನೇಶ್‌ ಫೋಘಟ್ ಮತ್ತು ಸಾಕ್ಷಿ ಮಲ್ಲಿಕ್ ನಾವು ಸಾಮಾಜಿಕ ಜಾಲತಾಣಗಳಿಂದ ಬಿಡುವು ಪಡೆಯುತ್ತಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ