AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್​ಗೆ ಮಧ್ಯಂತರ ಜಾಮೀನು

ಡಬ್ಲ್ಯುಎಫ್‌ಐ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ದೆಹಲಿ ಕೋರ್ಟ್ ಇಂದು (ಜು.18) ಮಧ್ಯಂತರ ಜಾಮೀನು ನೀಡಿದೆ.

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್​ಗೆ ಮಧ್ಯಂತರ ಜಾಮೀನು
ಬ್ರಿಜ್ ಭೂಷಣ್ ಸಿಂಗ್
ಅಕ್ಷಯ್​ ಪಲ್ಲಮಜಲು​​
|

Updated on:Jul 18, 2023 | 3:21 PM

Share

ದೆಹಲಿ: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಬ್ಲ್ಯುಎಫ್‌ಐ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ (brij bhushan sharan singh) ಅವರಿಗೆ ದೆಹಲಿ ಕೋರ್ಟ್ ಇಂದು (ಜು.18) ಮಧ್ಯಂತರ ಜಾಮೀನು ನೀಡಿದೆ. ತಲಾ 25,000 ರೂಪಾಯಿ ಬಾಂಡ್ ಮೇಲೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ. ಬ್ರಿಜ್ ಭೂಷಣ್ ಅವರ ವಿರುದ್ಧ ಸಲ್ಲಿಸಲಾಗಿದ್ದ ಚಾರ್ಜ್‌ಶೀಟ್​​ನಲ್ಲಿ ಮೌಖಿಕ ವರದಿ ನೀಡಿದ್ದಾರೆ. ಮತ್ತು ಕುಸ್ತಿಪಟುಗಳು ನ್ಯಾಯಾಲಯದಲ್ಲಿ ಮಾಧ್ಯಮ ವಿಚಾರಣೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ನ್ಯಾಯಾಲಯವು ಇದಕ್ಕೆ ಸಂಬಂಧಿಸಿದಂತೆ ಸೂಕ್ತ ಅರ್ಜಿ ಸಲ್ಲಿಸಬಹುದು ಎಂದು ಹೇಳಿದೆ.

ಇನ್ನೂ ಡಬ್ಲ್ಯುಎಫ್‌ಐನ ಅಮಾನತುಗೊಂಡಿರುವ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್‌ಗೂ ಮಧ್ಯಂತರ ಜಾಮೀನು ನೀಡಲಾಗಿದೆ. ಈ ಜಾಮೀನು ಕುರಿತು ನ್ಯಾಯಾಲಯವು ಗುರುವಾರ ವಿಚಾರಣೆ ನಡೆಸಲಿದೆ. ಕೋರ್ಟ್​ನಲ್ಲಿ ಬ್ರಿಜ್ ಭೂಷಣ್ ಸಿಂಗ್ ಪರ ವಾದ ಮಾಡಿದ ವಕೀಲರು, ಸುಮಾರು ಆರು ಮಹಿಳಾ ಕುಸ್ತಿಪಟುಗಳು ಬ್ರಿಜ್ ಭೂಷಣ್ ಸಿಂಗ್ ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಮತ್ತು ಬೆದರಿಕೆ ಹಾಕುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಜೂನ್ 2 ರಂದು ದೆಹಲಿ ಪೊಲೀಸರು ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಆರೋಪಗಳ ಆಧಾರದ ಮೇಲೆ ಎರಡು ಎಫ್ಐಆರ್ ಮತ್ತು 10 ದೂರುಗಳನ್ನು ದಾಖಲಿಸಿದ್ದಾರೆ. ಈ ದೂರಿನಲ್ಲಿ ಕುಸ್ತಿಪಟುಗಳ ಎದೆಯ ಮೇಲೆ ಕೈ ಹಾಕುವುದು, ಬೆನ್ನು ಸವರುವುದು ಮತ್ತು ಅವರನ್ನು ಹಿಂಬಾಲಿಸುವುದು ಇತ್ಯಾದಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೊಲೆ ಯತ್ನ, ಡಕಾಯಿತಿ..ಹಲವು ಕ್ರಿಮಿನಲ್ ಕೇಸ್…ಕುಸ್ತಿ ಒಕ್ಕೂಟದ ಮುಖ್ಯಸ್ಥನ ವಿರುದ್ಧವೇ ಬೀದಿಗಿಳಿದ ಕುಸ್ತಿಪಟುಗಳು

ಆರು ಬಾರಿ ಸಂಸದರಾಗಿರುವ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ನಗರ ಪೊಲೀಸರು ಜೂನ್ 15 ರಂದು ಸೆಕ್ಷನ್ 354 (ಹೆಣ್ಣಿನ ನಮ್ರತೆಗೆ ಆಕ್ರೋಶ ವ್ಯಕ್ತಪಡಿಸುವ ಉದ್ದೇಶದಿಂದ ಹಲ್ಲೆ ಅಥವಾ ಕ್ರಿಮಿನಲ್ ಬಲ), 354 ಎ (ಲೈಂಗಿಕ ಕಿರುಕುಳ), 354 ಡಿ (ಹಿಂಬಾಲಿಸುವುದು) ಮತ್ತು ಆರೋಪಪಟ್ಟಿ ಸಲ್ಲಿಸಿದ್ದರು. IPC ಯ 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ. ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ತಮ್ಮ ಮೇಲಿರುವ ಎಲ್ಲ ಆರೋಪಗಳನ್ನು ನಿರಾಕರಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:59 pm, Tue, 18 July 23

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ