AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Wrestlers Protest: ನಿಮಗೆ ಹಾನಿಯಾಗುವ ಕ್ರಮಗಳನ್ನು ತೆಗೆದುಕೊಳ್ಳಬೇಡಿ: ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್

ಮೋದಿ ಸರ್ಕಾರದ ಅಡಿಯಲ್ಲಿ ಕ್ರೀಡಾ ಬಜೆಟ್ ಅನ್ನು ₹ 874 ಕೋಟಿಯಿಂದ ₹ 2782 ಕೋಟಿಗೆ ಹೆಚ್ಚಿಸಲಾಗಿದೆ. ಖೇಲೋ ಇಂಡಿಯಾ ಮತ್ತು ಟಾರ್ಗೆಟ್ ಒಲಿಂಪಿಕ್ಸ್ ಪೋಡಿಯಂ ಸ್ಕೀಮ್ (TOPS) ನಂತಹ ಯೋಜನೆಗಳನ್ನು ಪರಿಚಯಿಸಿ ಅದನ್ನು ತಲುಪುವ ಅವಕಾಶವನ್ನು ಒದಗಿಸಲಾಯಿತು. ಕ್ರೀಡಾಪಟುಗಳಿಗೆ ತರಬೇತಿ ನೀಡಲು ಕೋಟಿಗಟ್ಟಲೆ ಹಣವನ್ನು ಖರ್ಚು ಮಾಡಲಾಗಿದೆ

Wrestlers Protest: ನಿಮಗೆ ಹಾನಿಯಾಗುವ ಕ್ರಮಗಳನ್ನು ತೆಗೆದುಕೊಳ್ಳಬೇಡಿ: ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್
ಅನುರಾಗ್ ಠಾಕೂರ್
ರಶ್ಮಿ ಕಲ್ಲಕಟ್ಟ
|

Updated on: May 31, 2023 | 6:34 PM

Share

ದೆಹಲಿ ಪೊಲೀಸರು ತನಿಖೆಯನ್ನು ಮುಗಿಸುವವರೆಗೆ ಕುಸ್ತಿಪಟುಗಳು (Wrestlers Protest)ಕಾಯಬೇಕು. ಅದೇ ವೇಳೆ ಅವರಿಗೇ ಹಾನಿಯುಂಟು ಮಾಡುವ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್(Anurag Thakur) ಬುಧವಾರ ಹೇಳಿದ್ದಾರೆ. ಕುಸ್ತಿಪಟುಗಳು ದೆಹಲಿ ಪೊಲೀಸರು (Delhi Police) ತಮ್ಮ ತನಿಖೆಯನ್ನು ಮುಗಿಸುವವರೆಗೆ ಕಾಯಬೇಕು. ಕ್ರೀಡೆ ಅಥವಾ ಮಹತ್ವಾಕಾಂಕ್ಷಿ ಕುಸ್ತಿಪಟುಗಳಿಗೆ ಹಾನಿಯನ್ನುಂಟುಮಾಡುವ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಬಾರದು. ನಾವೆಲ್ಲರೂ ಕ್ರೀಡೆ ಮತ್ತು ಕ್ರೀಡಾಪಟುಗಳ ಪರವಾಗಿದ್ದೇವೆ ಎಂದು ಸಚಿವರು ಹೇಳಿದ್ದಾರೆ.

ಮೋದಿ ಸರ್ಕಾರದ ಅಡಿಯಲ್ಲಿ ಕ್ರೀಡಾ ಬಜೆಟ್ ಅನ್ನು ₹ 874 ಕೋಟಿಯಿಂದ ₹ 2782 ಕೋಟಿಗೆ ಹೆಚ್ಚಿಸಲಾಗಿದೆ. ಖೇಲೋ ಇಂಡಿಯಾ ಮತ್ತು ಟಾರ್ಗೆಟ್ ಒಲಿಂಪಿಕ್ಸ್ ಪೋಡಿಯಂ ಸ್ಕೀಮ್ (TOPS) ನಂತಹ ಯೋಜನೆಗಳನ್ನು ಪರಿಚಯಿಸಿ ಅದನ್ನು ತಲುಪುವ ಅವಕಾಶವನ್ನು ಒದಗಿಸಲಾಯಿತು. ಕ್ರೀಡಾಪಟುಗಳಿಗೆ ತರಬೇತಿ ನೀಡಲು ಕೋಟಿಗಟ್ಟಲೆ ಹಣವನ್ನು ಖರ್ಚು ಮಾಡಲಾಗಿದೆ. ರಾಷ್ಟ್ರದಲ್ಲಿ ಸುಮಾರು ₹ 2700 ಕೋಟಿ ವೆಚ್ಚದಲ್ಲಿ 300 ಮಹತ್ವದ ಕ್ರೀಡಾ ಮೂಲಸೌಕರ್ಯಗಳನ್ನು ನಿರ್ಮಿಸಲಾಗುತ್ತಿದೆ ಎಂದು ಠಾಕೂರ್ ಹೇಳಿದ್ದಾರೆ.

ನಾವು ಕ್ರೀಡಾಪಟುಗಳ ನಿರೀಕ್ಷೆಗಿಂತ ಹೆಚ್ಚಿನದನ್ನು ಮಾಡಲು ಪ್ರಯತ್ನಿಸಿದ್ದೇವೆ, ನಾವು ಹೆಚ್ಚಿನದನ್ನು ಮಾಡಲು ಬಯಸುತ್ತೇವೆ. ಪ್ರತಿಯೊಂದು ಕ್ರೀಡೆಯಲ್ಲೂ ಭಾರತ ಬಲಿಷ್ಠವಾಗಲಿ ಎಂದು ಹಾರೈಸುತ್ತೇವೆ. ಕುಸ್ತಿಪಟುಗಳ ಬೇಡಿಕೆಗಳ ಮೇಲೆ, ಅವರು ತಮಗೆ ಅನ್ಯಾಯವಾಗಿದೆ ಎಂದು ಹೇಳಿಕೊಂಡ ನಂತರ ನಾವು ಸಮಿತಿಯನ್ನು ರಚಿಸಿದ್ದೇವೆ.ಅವರು ಕೆಲವೊಂದನ್ನು ಸೇರಿಸಲು ಹೇಳಿದರು, ನಾವು ಸೇರಿಸಿದ್ದೇವೆ. ಸಮಿತಿಯು ತಮ್ಮ ವರದಿಯನ್ನು ಸಲ್ಲಿಸಿತು, ನಂತರ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದರು. ಅವರು ಒತ್ತಾಯಿಸಿದ್ದಕ್ಕೆಲ್ಲ ನಾವು ಒಪ್ಪಿದ್ದೇವೆ .

ನಾವು ಕುಸ್ತಿಪಟುಗಳನ್ನು ಮುಕ್ತ ಹೃದಯ ಮತ್ತು ಮನಸ್ಸಿನಿಂದ ಕೇಳಿದ್ದೇವೆ. ಪೊಲೀಸರು ಈ ವಿಷಯವನ್ನು ತನಿಖೆ ಮಾಡುತ್ತಿದ್ದಾರೆ. ನೀವು ಕಳೆದ 75 ವರ್ಷಗಳ ದಾಖಲೆಗಳನ್ನು ನೋಡಬಹುದು, ಆರೋಪಗಳಿದ್ದರೆ, ಅವುಗಳನ್ನು ತನಿಖೆ ಮಾಡಲಾಗಿದೆ. ತನಿಖೆಯ ಫಲಿತಾಂಶದಿಂದ ಕುಸ್ತಿಪಟುಗಳು ತೃಪ್ತರಾಗದಿದ್ದರೆ ಪ್ರತಿಭಟಿಸಬಹುದು. ನೀವು ಸುಪ್ರೀಂ ಕೋರ್ಟ್, ಕುಸ್ತಿ ಸಂಘ, ಪೊಲೀಸರನ್ನು ನಂಬಬೇಕು. ನಾವು ಈ ವಿಷಯದ ಬಗ್ಗೆ ನ್ಯಾಯಯುತ ತನಿಖೆಯನ್ನು ಬಯಸುತ್ತೇವೆ ಎಂದು ಠಾಕೂರ್ ಹೇಳಿದರು.

ಇದನ್ನೂ ಓದಿ: Wrestlers Protest: ಕುಸ್ತಿಪಟುಗಳ ಪ್ರತಿಭಟನೆಗೆ ರೈತರ ಬೆಂಬಲ, ಜೂನ್​ 1 ರಂದು ಸಂಯುಕ್ತ ಕಿಸಾನ್ ಮೋರ್ಚಾದಿಂದ ದೇಶವ್ಯಾಪಿ ಪ್ರತಿಭಟನೆ

ಶೀಘ್ರದಲ್ಲೇ ಡಬ್ಲ್ಯುಎಫ್‌ಐ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಬ್ರಿಜ್ ಭೂಷಣ್ ಅವರು ಅಧ್ಯಕ್ಷ ಸ್ಥಾನದಿಂದ ಹಿಂದೆ ಸರಿದಿದ್ದಾರೆ. ಎಲ್ಲವೂ ನಡೆಯುತ್ತಿದೆ ಆದರೆ ದೇಶದ ಕಾನೂನು ಮತ್ತು ನಿಯಮಗಳ ಪ್ರಕಾರ ತನಿಖೆ ನಡೆಯುತ್ತದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು