AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇಶ ಭಕ್ತರ ದಿನ’ವಾಗಿ ನೇತಾಜಿ ಜನ್ಮದಿನ ಆಚರಿಸೋಣ; ಅಂದು ರಾಷ್ಟ್ರೀಯ ರಜಾನೂ ಘೋಷಿಸಿ: ಕೇಂದ್ರಕ್ಕೆ ಮಮತೆಯ ಪತ್ರ!

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಈ ಬೆನ್ನಲ್ಲೇ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹೆಸರು ಪ್ರಸ್ತಾಪವಾಗಿದೆ.

‘ದೇಶ ಭಕ್ತರ ದಿನ’ವಾಗಿ ನೇತಾಜಿ ಜನ್ಮದಿನ ಆಚರಿಸೋಣ; ಅಂದು ರಾಷ್ಟ್ರೀಯ ರಜಾನೂ ಘೋಷಿಸಿ: ಕೇಂದ್ರಕ್ಕೆ ಮಮತೆಯ ಪತ್ರ!
ಮಮತಾ ಬ್ಯಾನರ್ಜಿ (ಸಂಗ್ರಹ ಚಿತ್ರ)
guruganesh bhat
|

Updated on:Jan 04, 2021 | 5:31 PM

Share

ಕೊಲ್ಕೊತಾ: ಸ್ವಾತಂತ್ರ್ಯಾನಂತರ ಸುಭಾಷ್ ಚಂದ್ರ ಬೋಸ್ ಅವರ ಸ್ಮರಣೆಗಾಗಿ ನಾವು ಏನನ್ನೂ ಮಾಡಿಲ್ಲ.. ಹೀಗಾಗಿ ನೇತಾಜಿಯವರ ನೆನಪಿಗಾಗಿ ಅವರ ಜನ್ಮದಿನವನ್ನು (ಜನವರಿ 23) ರಾಷ್ಟ್ರೀಯ ರಜಾ ದಿನವನ್ನಾಗಿ ಘೋಷಿಸಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ.

ಜನವರಿ 23ರಂದು ಪಶ್ಚಿಮ ಬಂಗಾಳದಲ್ಲಿ ‘ದೇಶ ನಾಯಕ್ ದಿವಸ್’ ಎಂದು ಆಚರಿಸುತ್ತೇವೆ. ಅಂತೆಯೇ, ಇಡೀ ದೇಶದಲ್ಲೂ ನೇತಾಜಿಯವರ ಜನ್ಮ ದಿನವನ್ನು ಆಚರಿಸುವಂತಾಗಬೇಕು. ಹೀಗಾಗಿ, ರಾಷ್ಟ್ರೀಯ ರಜಾ ದಿನ ಎಂದು ಘೋಷಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದೇನೆ ಎಂದು ಅವರು ತಿಳಿಸಿದರು. ವಿದೇಶಗಳಲ್ಲಿ ನೆಲೆಸಿರುವ ಭಾರತೀಯ ಮೂಲದವರ ಬಳಿ ಶಂಖ ಮೊಳಗಿಸಲು ಅವರು ಕರೆ ಕೊಟ್ಟಿದ್ದಾರೆ.

ನೇತಾಜಿ ಸುಭಾಷ್ ಚಂದ್ರ ಬೋಸ್

ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನವನ್ನು ರಾಷ್ಟ್ರೀಯ ದಿನವನ್ನಾಗಿ ಆಚರಿಸುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಲೇ ಇದ್ದಾರೆ. ಈ ಕುರಿತು ಇತ್ತೀಚೆಗಷ್ಟೇ, ಸುಭಾಷ್ ಚಂದ್ರ ಬೋಸ್​​ರವರ ಸಂಬಂಧಿಕ ಚಂದ್ರ ಕುಮಾರ್ ಬೋಸ್, ಜನವರಿ 23ರಂದು ರಾಷ್ಟ್ರೀಯ ರಜಾ ದಿನವೆಂದು ಘೋಷಿಸುವ ಬದಲು, ‘ದೇಶ ಭಕ್ತರ ದಿನ’ವೆಂದು ಆಚರಿಸುವಂತೆ ಮನವಿ ಮಾಡಿದ್ದರು.

ಭೂ ವಿವಾದದಲ್ಲಿ ನೊಬೆಲ್​ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮಾರ್ತ್ಯ ಸೇನ್; ಬೆಂಬಲಕ್ಕೆ ನಿಂತ ಮಮತಾ ಬ್ಯಾನರ್ಜಿಗೆ ಕೃತಜ್ಞತೆ

Published On - 4:58 pm, Mon, 4 January 21

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ