AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ನಿಯಾ ಶಸ್ತ್ರಚಿಕಿತ್ಸೆ ಮಾಡಿದ್ರೆ ವಿಮೆ ಹಣ ಸಿಗಲ್ಲವೆಂದು ಅಪೆಂಡಿಕ್ಸ್ ಸರ್ಜರಿ ಮಾಡಿದ ವೈದ್ಯ

ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಬರೆ ಹಾಕಿದ್ರು ಅಂದಂಗಾಯ್ತು ಈ ವೈದ್ಯ ಮಾಡಿದ ಎಡವಟ್ಟು. ಹರ್ನಿಯಾ ಶಸ್ತ್ರಚಿಕಿತ್ಸೆ ಮಾಡಿದರೆ ವಿಮೆ ಹಣ ಸಿಗಲ್ಲವೆಂದು ವೈದ್ಯರು ರೋಗಿಗೆ ಅಪೆಂಡಿಕ್ಸ್​ ಸರ್ಜರಿ ಮಾಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಬಿಸ್ವಜಿತ್ ಎಂಬ ವೈದ್ಯರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ರೋಗಿಯ ಹೆಸರೂ ಕೂಡ ಬಿಸ್ವಜಿತ್ ದಾಸ್. ಬಿಸ್ವಜಿತ್ ಅವರ ಕುಟುಂಬ ಹೇಳಿದಂತೆ, ಬಿಸ್ವಜಿತ್ ಹರ್ನಿಯಾ ಶಸ್ತ್ರಚಿಕಿತ್ಸೆಗಾಗಿ ಪಾಣಿಹತಿ ಆಸ್ಪತ್ರೆಗೆ ಹೋಗಿದ್ದರು.

ಹರ್ನಿಯಾ ಶಸ್ತ್ರಚಿಕಿತ್ಸೆ ಮಾಡಿದ್ರೆ ವಿಮೆ ಹಣ ಸಿಗಲ್ಲವೆಂದು ಅಪೆಂಡಿಕ್ಸ್ ಸರ್ಜರಿ ಮಾಡಿದ ವೈದ್ಯ
ಆಪರೇಷನ್
ನಯನಾ ರಾಜೀವ್
|

Updated on: Jul 02, 2025 | 3:03 PM

Share

ಕೋಲ್ಕತ್ತಾ, ಜುಲೈ 02: ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಬರೆ ಹಾಕಿದ್ರು ಅಂದಂಗಾಯ್ತು ಈ ವೈದ್ಯ ಮಾಡಿದ ಎಡವಟ್ಟು. ಹರ್ನಿಯಾ ಶಸ್ತ್ರಚಿಕಿತ್ಸೆ ಮಾಡಿದರೆ ವಿಮೆ ಹಣ ಸಿಗಲ್ಲವೆಂದು ವೈದ್ಯರು ರೋಗಿಗೆ ಅಪೆಂಡಿಕ್ಸ್​ ಸರ್ಜರಿ ಮಾಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಬಿಸ್ವಜಿತ್ ಎಂಬ ವೈದ್ಯರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ರೋಗಿಯ ಹೆಸರೂ ಕೂಡ ಬಿಸ್ವಜಿತ್ ದಾಸ್. ಬಿಸ್ವಜಿತ್ ಅವರ ಕುಟುಂಬ ಹೇಳಿದಂತೆ, ಬಿಸ್ವಜಿತ್ ಹರ್ನಿಯಾ ಶಸ್ತ್ರಚಿಕಿತ್ಸೆಗಾಗಿ ಪಾಣಿಹತಿ ಆಸ್ಪತ್ರೆಗೆ ಹೋಗಿದ್ದರು.

ಆರೋಪಿ ವೈದ್ಯ ಬಿಸ್ವಜಿತ್ ದಾಸ್ ಆ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ವೈದ್ಯ ಅವರಿಗೆ ತಮ್ಮ ನರ್ಸಿಂಗ್ ಹೋಂನಲ್ಲಿ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಿದ್ದಾರೆ. ಇದಕ್ಕೆ ಬಿಸ್ವಜಿತ್ ಒಪ್ಪಿಕೊಂಡಿದ್ದರು. ವೈದ್ಯರು ತಮ್ಮ ಸ್ವಾಸ್ಥ್ಯ ಸಾಥಿ ಕಾರ್ಡ್ ಮೂಲಕ ತಮ್ಮ ನರ್ಸಿಂಗ್ ಹೋಂನಲ್ಲಿ ಶಸ್ತ್ರಚಿಕಿತ್ಸೆ ನೀಡುವುದಾಗಿ ಭರವಸೆ ನೀಡಿದ್ದರು .ಆದರೆ ಹರ್ನಿಯಾ ಶಸ್ತ್ರ ಚಿಕಿತ್ಸೆ ಮಾಡಿದರೆ ವಿಮೆ ಹಣ ಸಿಗುವುದಿಲ್ಲವೆಂದು ಅಪೆಂಡಿಕ್ಸ್​ ಸರ್ಜರಿ ಮಾಡಿದ್ದಾರೆ.

ಶಸ್ತ್ರಚಿಕಿತ್ಸೆಯ ಕೆಲವು ದಿನಗಳ ನಂತರ, ರೋಗಿಯು ತನ್ನ ಹೊಟ್ಟೆಯ ಕೆಳಭಾಗವು ಉಬ್ಬಿರುವುದನ್ನು ನೋಡಿದ್ದಾರೆ.ಬಿಸ್ವಜಿತ್ ತಮ್ಮ ವೈದ್ಯರ ಬಳಿ ಇದನ್ನು ಪದೇ ಪದೇ ಹೇಳುತ್ತಲೇ ಇದ್ದರು. ಆದರೆ ವೈದ್ಯರು ಆ ವಿಚಾರವನ್ನು ಬದಲಿಸಿ ಬೇರೇನೋ ಮಾತನಾಡುತ್ತಿದ್ದರು. ರೋಗಿಗೆ ಹರ್ನಿಯಾ ನೋವು ಹೆಚ್ಚಾಗಿತ್ತು. ನಂತರ ಕುಟುಂಬ ಸದಸ್ಯರು ಅವರನ್ನು ಯುಎಸ್‌ಜಿಗೆ ಕರೆದೊಯ್ದರು. ಅಲ್ಲಿ ನೋಡಿದಾಗ ಹರ್ನಿಯಾ ಶಸ್ತ್ರ ಚಿಕಿತ್ಸೆ ಆಗಿರಲಿಲ್ಲ.ಬದಲಾಗಿ ಅಪೆಂಡಿಕ್ಸ್​ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎಂಬುದು ತಿಳಿದುಬಂದಿದೆ.

ಮತ್ತಷ್ಟು ಓದಿ: ವೈದ್ಯರಿಲ್ಲ, ಫೋನ್​ ನೋಡಿಕೊಂಡು ಗರ್ಭಿಣಿಯ ಹೊಟ್ಟೆ ಕೊಯ್ದ ನರ್ಸ್, ಅವಳಿ ಶಿಶುಗಳ ಸಾವು

ಸ್ವಾಸ್ಥ್ಯ ಸಾಥಿ ಕಾರ್ಡ್‌ನಲ್ಲಿ ಹರ್ನಿಯಾ ಶಸ್ತ್ರಚಿಕಿತ್ಸೆ ಮಾಡಲಾಗುವುದಿಲ್ಲ.ಹರ್ನಿಯಾ ಶಸ್ತ್ರಚಿಕಿತ್ಸೆ ಮಾಡಿದರೆ, ನರ್ಸಿಂಗ್ ಹೋಂಗೆ ಸ್ವಾಸ್ಥ್ಯ ಸತಿಯಿಂದ ಯಾವುದೇ ಹಣ ಸಿಗುವುದಿಲ್ಲ. ಆದ್ದರಿಂದ, ಸ್ವಾಸ್ಥ್ಯ ಸಾಥಿಯಿಂದ ಹಣವನ್ನು ಪಡೆಯಲು ಹರ್ನಿಯಾ ಬದಲಿಗೆ ಅಪೆಂಡಿಕ್ಸ್‌ಗೆ ಶಸ್ತ್ರಚಿಕಿತ್ಸೆ ಮಾಡಲಾಯಿತು ಎಂದು ತಿಳಿದುಬಂದಿದೆ. ಇದನ್ನು ಕೇಳಲು ಕಾಲ್ ಮಾಡಿದರೆ ಕಟ್ ಮಾಡಿದ್ದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಸಮುದ್ರ ಸೇನ್‌ಗುಪ್ತಾ ಮಾತನಾಡಿ, ಡಾ. ಬಿಸ್ವಜಿತ್ ದಾಸ್ ವಿರುದ್ಧ ಹಲವು ದೂರುಗಳಿವೆ. ಈ ವೈದ್ಯರ ವಿರುದ್ಧ ಈ ಹಿಂದೆಯೂ ಹಲವು ದೂರುಗಳು ದಾಖಲಾಗಿವೆ.ದೂರುಗಳು ಸಾಬೀತಾದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ