AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ನಿಯಾ ಶಸ್ತ್ರಚಿಕಿತ್ಸೆ ಮಾಡಿದ್ರೆ ವಿಮೆ ಹಣ ಸಿಗಲ್ಲವೆಂದು ಅಪೆಂಡಿಕ್ಸ್ ಸರ್ಜರಿ ಮಾಡಿದ ವೈದ್ಯ

ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಬರೆ ಹಾಕಿದ್ರು ಅಂದಂಗಾಯ್ತು ಈ ವೈದ್ಯ ಮಾಡಿದ ಎಡವಟ್ಟು. ಹರ್ನಿಯಾ ಶಸ್ತ್ರಚಿಕಿತ್ಸೆ ಮಾಡಿದರೆ ವಿಮೆ ಹಣ ಸಿಗಲ್ಲವೆಂದು ವೈದ್ಯರು ರೋಗಿಗೆ ಅಪೆಂಡಿಕ್ಸ್​ ಸರ್ಜರಿ ಮಾಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಬಿಸ್ವಜಿತ್ ಎಂಬ ವೈದ್ಯರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ರೋಗಿಯ ಹೆಸರೂ ಕೂಡ ಬಿಸ್ವಜಿತ್ ದಾಸ್. ಬಿಸ್ವಜಿತ್ ಅವರ ಕುಟುಂಬ ಹೇಳಿದಂತೆ, ಬಿಸ್ವಜಿತ್ ಹರ್ನಿಯಾ ಶಸ್ತ್ರಚಿಕಿತ್ಸೆಗಾಗಿ ಪಾಣಿಹತಿ ಆಸ್ಪತ್ರೆಗೆ ಹೋಗಿದ್ದರು.

ಹರ್ನಿಯಾ ಶಸ್ತ್ರಚಿಕಿತ್ಸೆ ಮಾಡಿದ್ರೆ ವಿಮೆ ಹಣ ಸಿಗಲ್ಲವೆಂದು ಅಪೆಂಡಿಕ್ಸ್ ಸರ್ಜರಿ ಮಾಡಿದ ವೈದ್ಯ
ಆಪರೇಷನ್
ನಯನಾ ರಾಜೀವ್
|

Updated on: Jul 02, 2025 | 3:03 PM

Share

ಕೋಲ್ಕತ್ತಾ, ಜುಲೈ 02: ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಬರೆ ಹಾಕಿದ್ರು ಅಂದಂಗಾಯ್ತು ಈ ವೈದ್ಯ ಮಾಡಿದ ಎಡವಟ್ಟು. ಹರ್ನಿಯಾ ಶಸ್ತ್ರಚಿಕಿತ್ಸೆ ಮಾಡಿದರೆ ವಿಮೆ ಹಣ ಸಿಗಲ್ಲವೆಂದು ವೈದ್ಯರು ರೋಗಿಗೆ ಅಪೆಂಡಿಕ್ಸ್​ ಸರ್ಜರಿ ಮಾಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಬಿಸ್ವಜಿತ್ ಎಂಬ ವೈದ್ಯರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ರೋಗಿಯ ಹೆಸರೂ ಕೂಡ ಬಿಸ್ವಜಿತ್ ದಾಸ್. ಬಿಸ್ವಜಿತ್ ಅವರ ಕುಟುಂಬ ಹೇಳಿದಂತೆ, ಬಿಸ್ವಜಿತ್ ಹರ್ನಿಯಾ ಶಸ್ತ್ರಚಿಕಿತ್ಸೆಗಾಗಿ ಪಾಣಿಹತಿ ಆಸ್ಪತ್ರೆಗೆ ಹೋಗಿದ್ದರು.

ಆರೋಪಿ ವೈದ್ಯ ಬಿಸ್ವಜಿತ್ ದಾಸ್ ಆ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ವೈದ್ಯ ಅವರಿಗೆ ತಮ್ಮ ನರ್ಸಿಂಗ್ ಹೋಂನಲ್ಲಿ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಿದ್ದಾರೆ. ಇದಕ್ಕೆ ಬಿಸ್ವಜಿತ್ ಒಪ್ಪಿಕೊಂಡಿದ್ದರು. ವೈದ್ಯರು ತಮ್ಮ ಸ್ವಾಸ್ಥ್ಯ ಸಾಥಿ ಕಾರ್ಡ್ ಮೂಲಕ ತಮ್ಮ ನರ್ಸಿಂಗ್ ಹೋಂನಲ್ಲಿ ಶಸ್ತ್ರಚಿಕಿತ್ಸೆ ನೀಡುವುದಾಗಿ ಭರವಸೆ ನೀಡಿದ್ದರು .ಆದರೆ ಹರ್ನಿಯಾ ಶಸ್ತ್ರ ಚಿಕಿತ್ಸೆ ಮಾಡಿದರೆ ವಿಮೆ ಹಣ ಸಿಗುವುದಿಲ್ಲವೆಂದು ಅಪೆಂಡಿಕ್ಸ್​ ಸರ್ಜರಿ ಮಾಡಿದ್ದಾರೆ.

ಶಸ್ತ್ರಚಿಕಿತ್ಸೆಯ ಕೆಲವು ದಿನಗಳ ನಂತರ, ರೋಗಿಯು ತನ್ನ ಹೊಟ್ಟೆಯ ಕೆಳಭಾಗವು ಉಬ್ಬಿರುವುದನ್ನು ನೋಡಿದ್ದಾರೆ.ಬಿಸ್ವಜಿತ್ ತಮ್ಮ ವೈದ್ಯರ ಬಳಿ ಇದನ್ನು ಪದೇ ಪದೇ ಹೇಳುತ್ತಲೇ ಇದ್ದರು. ಆದರೆ ವೈದ್ಯರು ಆ ವಿಚಾರವನ್ನು ಬದಲಿಸಿ ಬೇರೇನೋ ಮಾತನಾಡುತ್ತಿದ್ದರು. ರೋಗಿಗೆ ಹರ್ನಿಯಾ ನೋವು ಹೆಚ್ಚಾಗಿತ್ತು. ನಂತರ ಕುಟುಂಬ ಸದಸ್ಯರು ಅವರನ್ನು ಯುಎಸ್‌ಜಿಗೆ ಕರೆದೊಯ್ದರು. ಅಲ್ಲಿ ನೋಡಿದಾಗ ಹರ್ನಿಯಾ ಶಸ್ತ್ರ ಚಿಕಿತ್ಸೆ ಆಗಿರಲಿಲ್ಲ.ಬದಲಾಗಿ ಅಪೆಂಡಿಕ್ಸ್​ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎಂಬುದು ತಿಳಿದುಬಂದಿದೆ.

ಮತ್ತಷ್ಟು ಓದಿ: ವೈದ್ಯರಿಲ್ಲ, ಫೋನ್​ ನೋಡಿಕೊಂಡು ಗರ್ಭಿಣಿಯ ಹೊಟ್ಟೆ ಕೊಯ್ದ ನರ್ಸ್, ಅವಳಿ ಶಿಶುಗಳ ಸಾವು

ಸ್ವಾಸ್ಥ್ಯ ಸಾಥಿ ಕಾರ್ಡ್‌ನಲ್ಲಿ ಹರ್ನಿಯಾ ಶಸ್ತ್ರಚಿಕಿತ್ಸೆ ಮಾಡಲಾಗುವುದಿಲ್ಲ.ಹರ್ನಿಯಾ ಶಸ್ತ್ರಚಿಕಿತ್ಸೆ ಮಾಡಿದರೆ, ನರ್ಸಿಂಗ್ ಹೋಂಗೆ ಸ್ವಾಸ್ಥ್ಯ ಸತಿಯಿಂದ ಯಾವುದೇ ಹಣ ಸಿಗುವುದಿಲ್ಲ. ಆದ್ದರಿಂದ, ಸ್ವಾಸ್ಥ್ಯ ಸಾಥಿಯಿಂದ ಹಣವನ್ನು ಪಡೆಯಲು ಹರ್ನಿಯಾ ಬದಲಿಗೆ ಅಪೆಂಡಿಕ್ಸ್‌ಗೆ ಶಸ್ತ್ರಚಿಕಿತ್ಸೆ ಮಾಡಲಾಯಿತು ಎಂದು ತಿಳಿದುಬಂದಿದೆ. ಇದನ್ನು ಕೇಳಲು ಕಾಲ್ ಮಾಡಿದರೆ ಕಟ್ ಮಾಡಿದ್ದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಸಮುದ್ರ ಸೇನ್‌ಗುಪ್ತಾ ಮಾತನಾಡಿ, ಡಾ. ಬಿಸ್ವಜಿತ್ ದಾಸ್ ವಿರುದ್ಧ ಹಲವು ದೂರುಗಳಿವೆ. ಈ ವೈದ್ಯರ ವಿರುದ್ಧ ಈ ಹಿಂದೆಯೂ ಹಲವು ದೂರುಗಳು ದಾಖಲಾಗಿವೆ.ದೂರುಗಳು ಸಾಬೀತಾದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ