AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಷದ ಬಳಿಕ ವುಹಾನ್​ನಲ್ಲಿ ಮತ್ತೆ ಕಾಣಿಸಿಕೊಂಡ ಕೊರೊನಾ; ಪ್ರತಿಯೊಬ್ಬರಿಗೂ ಎನ್​​ಎಟಿ ಮಾಡುವುದಾಗಿ ಹೇಳಿದ ಸ್ಥಳೀಯ ಆಡಳಿತ

ವುಹಾನ್​​ನಲ್ಲಿಯೇ ಮೊದಲು ಕೊರೊನಾ ವೈರಸ್​ ಹುಟ್ಟಿದ್ದಾದರೂ, ನಂತರ ಅಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವ ಮೂಲಕ ಸೋಂಕನ್ನು ತೊಡೆದುಹಾಕಲಾಗಿತ್ತು. ಇದೀಗ ಮತ್ತೆ ಏಳು ವಲಸೆ ಕಾರ್ಮಿಕರಲ್ಲಿ ಸೋಂಕು ಪತ್ತೆಯಾಗಿದೆ.

ವರ್ಷದ ಬಳಿಕ ವುಹಾನ್​ನಲ್ಲಿ ಮತ್ತೆ ಕಾಣಿಸಿಕೊಂಡ ಕೊರೊನಾ; ಪ್ರತಿಯೊಬ್ಬರಿಗೂ ಎನ್​​ಎಟಿ ಮಾಡುವುದಾಗಿ ಹೇಳಿದ ಸ್ಥಳೀಯ ಆಡಳಿತ
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on: Aug 03, 2021 | 2:57 PM

Share

ಬೀಜಿಂಗ್​: ಮಧ್ಯ ಚೀನಾದ ವುಹಾನ್(Wuhan)​ನಲ್ಲಿ ಒಂದು ವರ್ಷದ ನಂತರ ಮತ್ತೆ ಕೊರೊನಾ ವೈರಸ್ ಪ್ರಕರಣ ದಾಖಲಾಗಿದೆ. ಅದರಲ್ಲೂ ಈಗ ಕೊರೊನಾ (Coronavirus) ಪತ್ತೆಯಾದವರಿಗೆ ಯಾವುದೇ ಟ್ರಾವೆಲ್​ ಹಿಸ್ಟರಿ ಇಲ್ಲ. ಸ್ಥಳೀಯವಾಗಿಯೇ ಪತ್ತೆಯಾದ ಪ್ರಕರಣ ಎಂದು ಅಲ್ಲಿನ ಆಡಳಿತ ಹೇಳಿದೆ. ಹಾಗೇ, ಇದೀಗ ಕೊರೊನಾ ಪತ್ತೆಯಾದ ಬೆನ್ನಲ್ಲೇ, ಇಡೀ ವುಹಾನ್​ನಲ್ಲಿ ಪ್ರತಿಯೊಬ್ಬರಿಗೂ ಕೊರೊನಾ ತಪಾಸಣೆ ಮಾಡುವುದಾಗಿ ಸ್ಥಳೀಯ ಸರ್ಕಾರ ತಿಳಿಸಿದೆ.

ವುಹಾನ್​​ನಲ್ಲಿ ಸುಮಾರು 11 ಮಿಲಿಯನ್​ ಜನರಿದ್ದಾರೆ. ಇಲ್ಲೀಗ 1 ವರ್ಷಕ್ಕಿಂತಲೂ ಹೆಚ್ಚು ಸಮಯವಾದ ಬಳಿಕ ಈಗ ಸ್ಥಳೀಯವಾಗಿಯೇ ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಹಾಗಾಗಿ, ಕೂಡಲೇ ಸಮಗ್ರ ನ್ಯೂಕ್ಲಿಯರ್​ ಆ್ಯಸಿಡ್​ ಟೆಸ್ಟಿಂಗ್​ (NAT)ನ್ನು ಪ್ರಾರಂಭಿಸುತ್ತೇವೆ. ಇಲ್ಲಿನ ಪ್ರತಿಯೊಬ್ಬರಿಗೂ ಈ ಟೆಸ್ಟ್ ಮಾಡಲಾಗುವುದು ಎಂದು ವುಹಾನ್​ ಹಿರಿಯ ಅಧಿಕಾರಿ ಲಿ ತಾವೋ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ​

ವುಹಾನ್​​ನಲ್ಲಿಯೇ ಮೊದಲು ಕೊರೊನಾ ವೈರಸ್​ ಹುಟ್ಟಿದ್ದಾದರೂ, ನಂತರ ಅಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವ ಮೂಲಕ ಸೋಂಕನ್ನು ತೊಡೆದುಹಾಕಲಾಗಿತ್ತು. ಇದೀಗ ಮತ್ತೆ ಏಳು ವಲಸೆ ಕಾರ್ಮಿಕರಲ್ಲಿ ಸೋಂಕು ಪತ್ತೆಯಾಗಿದೆ. ಇನ್ನು ಚೀನಾಕ್ಕೆ ಡೆಲ್ಟಾ ರೂಪಾಂತರಿ ವೈರಾಣುವಿನ ಕಾಟವೂ ಅಧಿಕವಾಗಿದೆ. ಸುಮಾರು 300 ಡೆಲ್ಟಾ ರೂಪಾಂತರಿ ಪ್ರಕರಣಗಳು ಪತ್ತೆಯಾಗಿದ್ದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪರಿಸ್ಥಿತಿ ನೋಡಿಕೊಂಡು ಕರ್ಫ್ಯೂ ಅವಧಿ ವಿಸ್ತರಣೆ; ದಾವಣಗೆರೆಯಲ್ಲಿ ವಾರಾಂತ್ಯಕ್ಕೆ ದೇಗುಲಗಳಿಗೆ ಪ್ರವೇಶವಿಲ್ಲ

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ