AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Yaas: ಮಲ್ಲಿಗೆ ಚಂಡಮಾರುತ ಯಾಸ್​ ನಾಳೆಗೆ ತೀವ್ರ ಸ್ವರೂಪ, ಕೊರೊನಾ ವೈದ್ಯಕೀಯ ಪರಿಕರಗಳ ಸಾಗಣೆಗೆ ಅಡ್ಡಿ

Cyclone Yaas Updates: ಮಲ್ಲಿಗೆ ಹೆಸರಿನ ಚಂಡಮಾರುತ ಯಾಸ್​ ಸ್ವಲ್ಪ ಮುಂಚಿತವಾಗಿಯೇ ನಾಳೆಗೆ ತೀವ್ರ ಸ್ವರೂಪ ಪಡೆಯಲಿದೆ. ಅದು ಎಲ್ಲೆಲ್ಲಿ ಹಾದುಹೋಗಲಿದೆ? ಎಲ್ಲೆಲ್ಲಿ ಅವಾಂತರ ಸೃಷ್ಟಿಸಲಿದೆ ಎಂಬುದರ ವಿವರ ಇಲ್ಲಿದೆ. ಅಂತರ ರಾಜ್ಯ ಮಟ್ಟದಲ್ಲಿ ಕೊರೊನಾ ವೈದ್ಯಕೀಯ ಪರಿಕರಗಳ ಸಾಗಣೆಗೆ ಅಡ್ಡಿಯಾಗಲಿದೆ ಎಂದು ತಿಳಿದುಬಂದಿದೆ. ಆದರೆ ಅದು ದಕ್ಷಿಣ ರಾಜ್ಯಗಳಿಗೆ ಹೆಚ್ಚು ಬಾಧೆಯನ್ನುಂಟು ಮಾಡುವುದಿಲ್ಲ ಎಂದು ವಿಶ್ಲೇಷಿಸಲಾಗಿದೆ.

Cyclone Yaas: ಮಲ್ಲಿಗೆ ಚಂಡಮಾರುತ ಯಾಸ್​ ನಾಳೆಗೆ ತೀವ್ರ ಸ್ವರೂಪ, ಕೊರೊನಾ ವೈದ್ಯಕೀಯ ಪರಿಕರಗಳ ಸಾಗಣೆಗೆ ಅಡ್ಡಿ
Cyclone Yaas: ಮಲ್ಲಿಗೆ ಚಂಡಮಾರುತ ಯಾಸ್​ ನಾಳೆಗೆ ತೀವ್ರ ಸ್ವರೂಪ ಪಡೆಯಲಿದೆ: ಕೊರೊನಾ ವೈದ್ಯಕೀಯ ಪರಿಕರಗಳ ಸಾಗಣೆಗೆ ಅಡ್ಡಿ
Follow us
ಸಾಧು ಶ್ರೀನಾಥ್​
|

Updated on:May 25, 2021 | 11:49 AM

ಮಲ್ಲಿಗೆ ಹೆಸರಿನ ಚಂಡಮಾರುತ ಯಾಸ್​ ಸ್ವಲ್ಪ ಮುಂಚಿತವಾಗಿಯೇ ನಾಳೆಗೆ ತೀವ್ರ ಸ್ವರೂಪ ಪಡೆಯಲಿದೆ. ಅದು ಎಲ್ಲೆಲ್ಲಿ ಹಾದುಹೋಗಲಿದೆ? ಎಲ್ಲೆಲ್ಲಿ ಅವಾಂತರ ಸೃಷ್ಟಿಸಲಿದೆ ಎಂಬುದರ ವಿವರ ಇಲ್ಲಿದೆ. ಅಂತರ ರಾಜ್ಯ ಮಟ್ಟದಲ್ಲಿ ಕೊರೊನಾ ವೈದ್ಯಕೀಯ ಪರಿಕರಗಳ ಸಾಗಣೆಗೆ ಅಡ್ಡಿಯಾಗಲಿದೆ ಎಂದು ತಿಳಿದುಬಂದಿದೆ.ಪಶ್ಚಿಮ ಬಂಗಾಳದ ಪೂರ್ವ ಕೇಂದ್ರದಲ್ಲಿ ಯಾಸ್​ ಚಂಡಮಾರುತಗಳು (Cyclone Yaas) ಸೋಮವಾರ ರಾತ್ರಿಯೇ ತೀವ್ರ ಸ್ವರೂಪ ಪಡೆದಿವೆ. ಒಡಿಶಾದ ಬಾಲಾಸೋರ್, ಪಶ್ಚಿಮ ಬಂಗಾಳದ ದಿಘಾ ಮತ್ತು ಬಾಂಗ್ಲಾದೇಶದ ಖೇಪುಪಾಡದಲ್ಲಿ ಕೇಂದ್ರೀಕೃತವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (India Meteorological Department) ತಿಳಿಸಿದೆ.

ಯಾಸ್​ ಚಂಡಮಾರುತಗಳು ವಾಯವ್ಯದತ್ತ ಚಲಿಸುತ್ತಿದ್ದು, ಉತ್ತರ-ವಾಯುವ್ಯದತ್ತ ಮುಂದುವರಿಯಲಿದೆ. ಬುಧವಾರ ಬೆಳಗ್ಗೆ ವೇಳೆಗೆ ತೀವ್ರ ಸ್ವರೂಪ ಪಡೆಯಲಿದೆ. ಅಲ್ಲಿಂದ ಮುಂದಕ್ಕೆ ಒಡಿಶಾ ಮತ್ತು ಪಶ್ಚಿಮ ಬಂಗಾಳ ಕರಾವಳಿಗಳನ್ನು ದಾಟಿ ಮುನ್ನುಗ್ಗಲಿದೆ. ಇದೇ ವೇಳೆ ಉತ್ತರಪ್ರದೇಶದ 27 ಜಿಲ್ಲೆಗಳಲ್ಲಿ ಮಳೆ ಆರ್ಭಟ ಕಂಡುಬರಲಿದೆ. ಅಸ್ಸಾಂ, ಮೇಘಾಲಯ ಮತ್ತು ಜಾರ್ಖಂಡ್​ ರಾಜ್ಯಗಳಲ್ಲಿ ಮಳೆ ಸುರಿಯಲಿದೆ. ಒಟ್ಟು ಬುಧವಾರದ ವೇಳೆಗೆ ಯಾಸ್​ ಮಾರುತಗಳಿಂದ ಭಾರಿ ನಷ್ಟವುಂಟಾಗಲಿದೆ ಎಂದು ತಿಳಿದುಬಂದಿದೆ. ಈ ರಾಜ್ಯಗಳಲ್ಲಿ ಕೊರೊನಾ ಚಿಕಿತ್ಸೆಗೆ ಬಾಧಕವುಂಟಾಗಲಿದೆ ಎಂದು ತಿಳಿದುಬಂದಿದೆ. ಆಕ್ಸಿಜನ್ ಮತ್ತಿತರ ವೈದ್ಯಕೀಯ ಸಕರಣೆಗಳ ಸಾಗಣೆಗೆ ಅಡಚಣೆಯುಂಟಾಗಲಿದೆ ಎಂದು ತಿಳಿದುಬಂದಿದೆ.​ ಆದರೆ ಅದು ದಕ್ಷಿಣ ರಾಜ್ಯಗಳಿಗೆ ಹೆಚ್ಚು ಬಾಧೆಯನ್ನುಂಟು ಮಾಡುವುದಿಲ್ಲ ಎಂದು ವಿಶ್ಲೇಷಿಸಲಾಗಿದೆ.

(Yaas Is not like jasmine is very severe cyclone to cross Odisha and Bengal coasts on May 26 may disrupt medical facilities supply)

Cyclone Yaas ಯಾಸ್ ಚಂಡಮಾರುತದಿಂದಾಗಿ 25 ರೈಲು ರದ್ದುಗೊಳಿಸಿದ ಪೂರ್ವ ರೈಲ್ವೆ

Published On - 11:46 am, Tue, 25 May 21

‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್