AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಮುನಾ ಎಕ್ಸ್​ಪ್ರೆಸ್​ ವೇ ಮರುನಾಮಕರಣಕ್ಕೆ ಸಿದ್ಧವಾಗಿರುವ ಯೋಗಿ ಸರ್ಕಾರ; ಮಾಜಿ ಪ್ರಧಾನಿಯ ಹೆಸರಿಡಲು ನಿರ್ಧಾರ !

Yamuna Expressway: ನೊಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಡಿಗಲ್ಲು ಸ್ಥಾಪನೆ ಮಾಡುವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಸಿಎಂ ಯೋಗಿ ಆದಿತ್ಯನಾಥ್​ ಸೇರಿ ಹಲವು ಬಿಜೆಪಿ ನಾಯಕರು ಪಾಲ್ಗೊಳ್ಳಲಿದ್ದಾರೆ.

ಯಮುನಾ ಎಕ್ಸ್​ಪ್ರೆಸ್​ ವೇ ಮರುನಾಮಕರಣಕ್ಕೆ ಸಿದ್ಧವಾಗಿರುವ ಯೋಗಿ ಸರ್ಕಾರ; ಮಾಜಿ ಪ್ರಧಾನಿಯ ಹೆಸರಿಡಲು ನಿರ್ಧಾರ !
ಯಮುನಾ ಎಕ್ಸ್​ಪ್ರೆಸ್​ ವೇ
TV9 Web
| Updated By: Lakshmi Hegde|

Updated on: Nov 23, 2021 | 9:18 AM

Share

ಉತ್ತರಪ್ರದೇಶ ಅದೆಷ್ಟೋ ಪ್ರದೇಶಗಳಿಗೆ ಮರುನಾಮಕರಣ ಮಾಡಿದೆ. ನದಿಗಳ, ಜಿಲ್ಲೆಗಳ ಹೆಸರನ್ನು ಬದಲು ಮಾಡಿದೆ. ಹಾಗೇ ಇದೀಗ ಯಮುನಾ ಎಕ್ಸ್​​ಪ್ರೆಸ್​ ವೇ(Yamuna Expressway) ಗೂ ಕೂಡ ಮರುನಾಮಕರಣವಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಎಕ್ಸ್​ಪ್ರೆಸ್​ ವೇಗೆ ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಹೆಸರನ್ನು ಇಡಲು ಸರ್ಕಾರ ಮುಂದಾಗಿದೆ. ಅದೂ ಕೂಡ ನವೆಂಬರ್​ 25ರಂದು ಗೌತಮ ಬುದ್ಧ ನಗರದ ಜೇವಾರ್​​ನಲ್ಲಿ ನಡೆಯಲಿರುವ ನೊಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಡಿಗಲ್ಲು ಸ್ಥಾಪನೆ ಕಾರ್ಯದಲ್ಲಿ ಈ ಘೋಷಣೆಯಾಗಲಿದೆ ಎಂದೂ ತಿಳಿದುಬಂದಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. 

ನೊಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಡಿಗಲ್ಲು ಸ್ಥಾಪನೆ ಮಾಡುವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಸಿಎಂ ಯೋಗಿ ಆದಿತ್ಯನಾಥ್​ ಸೇರಿ ಹಲವು ಬಿಜೆಪಿ ನಾಯಕರು ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ಯಮುನಾ ಎಕ್ಸ್​ಪ್ರೆಸ್​ ವೇ ಹೆಸರನ್ನು ಅಟಲ್​ ಬಿಹಾರಿ ವಾಜಪೇಯಿ ಎಕ್ಸ್​ಪ್ರೆಸ್ ವೇ ಎಂದು ಬದಲಿಸಿ, ಅಧಿಕೃತವಾಗಿ ಘೋಷಿಸಲು ಸಿದ್ಧತೆ ನಡೆದಿದೆ ಎನ್ನಲಾಗಿದೆ.

ಈ ಬಗ್ಗೆ ಹೆಸರು ಹೇಳಲು ಇಚ್ಛಿಸದ ಬಿಜೆಪಿ ನಾಯಕರೊಬ್ಬರು ಮಾಹಿತಿ ನೀಡಿದ್ದಾರೆಂದು ಇಂಡಿಯಾ ಟುಡೆ ಹೇಳಿದೆ. ಭಾರತದಲ್ಲಿ ಅತ್ಯಂತ ಪ್ರೀತಿಸಲ್ಪಟ್ಟ ರಾಜಕಾರಣಿ ಅಟಲ್​ ಬಿಹಾರಿ ವಾಜಪೇಯಿ. ಅವರನ್ನು ಪಕ್ಷಾತೀತವಾಗಿ ಎಲ್ಲರೂ ಗೌರವಿಸುತ್ತಾರೆ. ಆದರಿಸುತ್ತಾರೆ. ಮುಂದಿನ ಪೀಳಿಗೆಗೆ ವಾಜಪೇಯಿಯ ಸಾಧನೆ, ಮೌಲ್ಯಗಳನ್ನು ಅರ್ಥ ಮಾಡಿಸುವ ಸದುದ್ದೇಶದಿಂದ ಎಕ್ಸ್​ಪ್ರೆಸ್ ವೇಗೆ ಅವರ ಹೆಸರು ಇಡಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ ಎನ್ನಲಾಗಿದೆ.

ಉತ್ತರಪ್ರದೇಶದಲ್ಲಿ ಚುನಾವಣೆ ಉತ್ತರಪ್ರದೇಶದಲ್ಲಿ 2022ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಬಿಜೆಪಿಗೆ ಹೇಗಾದರೂ ಸರಿ ಮತ್ತೆ ಅಧಿಕಾರ ಹಿಡಿಯುವ ತವಕ. ಅದರಲ್ಲೂ ಬಿಜೆಪಿ ಸೇರಿ ಬಹುತೇಕ ಪ್ರತಿಪಕ್ಷಗಳು ಬ್ರಾಹ್ಮಣ ಮತವನ್ನು ಬಹುಮುಖ್ಯವೆಂದು ಪರಿಗಣಿಸಿವೆ. ಇದೀಗ ಅಟಲ್​ ಬಿಹಾರಿ ವಾಜಪೇಯಿ ಹೆಸರನ್ನು ಯಮುನಾ ಎಕ್ಸ್​ಪ್ರೆಸ್​ ವೇಗೆ ಇಟ್ಟರೆ ಅವರನ್ನು ಪ್ರೀತಿಸುವ ಅಭಿಮಾನಿಗಳು, ಅದರಲ್ಲೂ ಮುಖ್ಯವಾಗಿ ಬ್ರಾಹ್ಮಣ ಸಮುದಾಯದವರು ತುಂಬ ಖುಷಿಯಾಗುತ್ತಾರೆ ಎಂಬ ಲೆಕ್ಕಾಚಾರವೂ ಇರಬಹುದು. ಇನ್ನೊಂದು ಬದಿ ಯೋಚಿಸುವುದಾರೆ, ಬಿಜೆಪಿಯಲ್ಲಿ ವಾಜಪೇಯಿ ಅವರಿಗೆ ಅಪಾರ ಗೌರವ ಇದೆ. ಅವರ ಹೆಸರನ್ನು ಈಗಾಗಲೇ ಸ್ಥಳಗಳಿಗೆ ಮತ್ತು ಯೋಜನೆಗಳಿಗೆ ಇಟ್ಟಿದೆ.

ಇದನ್ನೂ ಓದಿ: ಜವಹರಲಾಲ್ ನೆಹರು ಸಂಶೋಧನಾ ಕೇಂದ್ರಕ್ಕೆ ನೀರು ನುಗ್ಗಿ ಕೋಟ್ಯಾಂತರ ರೂ. ಬೆಲೆ ಬಾಳುವ ಲ್ಯಾಬ್ ಮಷಿನ್​ ಹಾಳು

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ