AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾಯಮಟ್ಟ ಮೀರಿ ಹರಿಯುತ್ತಿರುವ ಯಮುನಾ ನದಿ; ಮನೆ, ಗುಡಿಸಲುಗಳಿಗೆಲ್ಲ ನೀರು

Yamuna River: ಯಮುನಾ ಮತ್ತು ಚಂಬಲ್​ ನದಿಗಳು ತುಂಬಿ ಹರಿಯುತ್ತಿದ್ದು, ಕೆಳಪಾತ್ರದ ಜನರೀಗ ಅಪಾಯದಲ್ಲಿದ್ದಾರೆ. ಮನೆಗಳಿಗೆ ನೀರು ನುಗ್ಗುತ್ತಿರುವ ಕಾರಣ, ಅಲ್ಲಿಂದ ಅವರನ್ನು ಸಾಮೂಹಿಕವಾಗಿ ಸ್ಥಳಾಂತರ ಮಾಡುವ ಕೆಲಸ ಭರದಿಂದ ಸಾಗುತ್ತಿದೆ.

ಅಪಾಯಮಟ್ಟ ಮೀರಿ ಹರಿಯುತ್ತಿರುವ ಯಮುನಾ ನದಿ; ಮನೆ, ಗುಡಿಸಲುಗಳಿಗೆಲ್ಲ ನೀರು
ಜನರನ್ನು ರಕ್ಷಿಸುತ್ತಿರುವ ದೃಶ್ಯ (ಚಿತ್ರ-ಪಿಟಿಐಓ
TV9 Web
| Updated By: Lakshmi Hegde|

Updated on:Aug 06, 2021 | 10:17 AM

Share

ಹಮೀರ್​ಪುರ: ಯಮುನಾ ನದಿ (Yamuna River) ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ನದಿಯ ಕೆಳ ಪಾತ್ರದಲ್ಲಿರುವ ಜನರೆಲ್ಲ ಅಲ್ಲಿಂದ ಬೇರೆಡೆಗೆ ಹೋಗುವಂತೆ, ಹಿಮಾಚಲ ಪ್ರದೇಶದ ಹಮೀರ್​ಪುರ ಜಿಲ್ಲಾಡಳಿತ (Hamirpur District Administration) ಸೂಚನೆ ನೀಡಿದೆ. ಚಂಬಲ್​​ ನದಿಗೆ (Chambal River) ನೀರು ಜಾಸ್ತಿ ಹರಿಬಿಟ್ಟ ಪರಿಣಾಮ ಯಮುನಾ ನದಿಯಲ್ಲೂ ನೀರಿನ ಮಟ್ಟ ಏರಿದೆ. ಈಗಾಗಲೇ ನದಿ ನೀರು ಕೆಳಪಾತ್ರದಲ್ಲಿರುವ ಮನೆಗಳು, ಗುಡಿಸಲುಗಳಿಗೆ ನುಗ್ಗುತ್ತಿದ್ದು, ಜಿಲ್ಲಾಡಳಿತದಿಂದಲೇ ಜನರನ್ನು ಸಾಮೂಹಿಕವಾಗಿ ಸ್ಥಳಾಂತರ ಮಾಡುವ ಕಾರ್ಯ ನಡೆಯುತ್ತಿದೆ. ಹಾಗೇ, ಇನ್ನೂ ಕೆಲವು ಮನೆಗಳಿಗೆ ಅಪಾಯ ಎದುರಾಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ.

ಸದ್ಯ ಯಮುನಾ ನದಿಯ ಕೆಳಪಾತ್ರದಲ್ಲಿರುವ 10 ಹಳ್ಳಿಗಳಿಂದ ಜನರನ್ನ ಬೇರೆಡೆಗೆ ಸ್ಥಳಾಂತರ ಮಾಡುವ ಕೆಲಸ ಭರದಿಂದ ಸಾಗುತ್ತಿದೆ. ಧೌಲ್​ಪುರ ಬ್ಯಾರೇಜ್​​ನಿಂದ ಅತ್ಯಂತ ಹೆಚ್ಚಿನ ನೀರು ಹರಿಯುತ್ತಿರುವುದರಿಂದಲೂ ಯಮುನಾ ನದಿ ಮಟ್ಟ ಏರುತ್ತಿದೆ. ನೀರಿನ ಮಟ್ಟ ಪ್ರತಿ ಗಂಟೆಗೆ 65 ಸಿಎಂ ಏರಿಕೆಯಾಗುತ್ತಿದೆ. ಇದೇ ಪ್ರಮಾಣದಲ್ಲಿ ಹೋದರೆ, ಸ್ಥಳೀಯ ನಿವಾಸಿಗಳಿಗೆ ತುಂಬ ಅಪಾಯವಾಗಲಿದೆ ಎಂದು ಸ್ಥಳೀಯ ಆಡಳಿತ ಎಚ್ಚರಿಕೆ ನೀಡಿದೆ.

ಚಂಬಲ್​ ನದಿಗೆ 18 ಲಕ್ಷ ಕ್ಯೂಸೆಕ್​ ನೀರು ಬಿಡುಗಡೆ ಇನ್ನು ಚಂಬಲ್​ ನದಿಗೆ ಸುಮಾರು ಅಣೆಕಟ್ಟುಗಳಿಂದ 18 ಲಕ್ಷ ಕ್ಯೂಸೆಕ್​ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಯಮುನಾ ನದಿಯಲ್ಲಿ ಅಗಸ್ಟ್​ 7ರ ಹೊತ್ತಿಗೆ ಭರ್ಜರಿ ನೀರು ಹರಿಯಲಿದೆ. ಸದ್ಯ ಯಮುನಾ ನದಿ ಉತ್ತರ ಪ್ರದೇಶದ ಇಟವಾ, ಔರಾಯ, ಜಲೌನ್ ಮತ್ತು ಹಮೀರ್‌ಪುರ ಜಿಲ್ಲೆಗಳಲ್ಲಿ ಯಮುನಾ ನದಿ ಅಪಾಯಮಟ್ಟವನ್ನೂ ಮೀರಿ ಹರಿಯುತ್ತಿದೆ. ಜನರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Corona Vaccine Shortage: ಕೊವಿಡ್ ಲಸಿಕೆ ಸಿಗದೆ ರೊಚ್ಚಿಗೆದ್ದ ಸಾರ್ವಜನಿಕರು, ಹಾಸನ ಡಿಸಿ ಮನೆಗೆ ಮುತ್ತಿಗೆ

ಸಹೋದರನೊಂದಿಗೆ ವ್ಯಾಯಾಮ ಮಾಡುತ್ತಿದ್ದ ಯುವತಿ 10ನೇ ಮಹಡಿಯಿಂದ ನೆಲಕ್ಕೆ ಜಾರಿಬಿದ್ದು ಸಾವು

Yamuna River flows above danger mark after release water into Chambal

Published On - 9:40 am, Fri, 6 August 21

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ