AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Rain: ಮಳೆ ಕಡಿಮೆ ಇದ್ದರೂ ದೆಹಲಿಯಲ್ಲಿ ಯಮುನೆ‌ ಉಕ್ಕಿ ಹರಿದಿದ್ದಾದರು ಯಾಕೆ?

ಯಮುನಾ ನದಿ ನೀರಿನ ಮಟ್ಟ 208 ಮೀಟರ್ ದಾಟಿ 45 ವರ್ಷಗಳ ಹಿಂದಿನ ದಾಖಲೆಯನ್ನು ಮುರಿದಿದೆ. ಪ್ರತಿ ಮಾನ್ಸೂನ್‌ನಲ್ಲಿ ಇದೇ ಪ್ರಮಾಣದ ಮಳೆ ದಾಖಲಾಗಿರುವಾಗ ಈ ವರ್ಷ ದೆಹಲಿಯಲ್ಲಿ ಏಕೆ ಪ್ರವಾಹ ಉಂಟಾಗಿದೆ ಎಂಬ ಪ್ರಶ್ನೆ ಈಗ ಉದ್ಭವಿಸಿದೆ.

Delhi Rain: ಮಳೆ ಕಡಿಮೆ ಇದ್ದರೂ ದೆಹಲಿಯಲ್ಲಿ ಯಮುನೆ‌ ಉಕ್ಕಿ ಹರಿದಿದ್ದಾದರು ಯಾಕೆ?
ಉಕ್ಕಿ ಹರಿಯುತ್ತಿರುವ ದೆಹಲಿಯ ಯಮುನಾ ನದಿ
Follow us
ಹರೀಶ್ ಜಿ.ಆರ್​. ನವದೆಹಲಿ
| Updated By: Rakesh Nayak Manchi

Updated on: Jul 13, 2023 | 5:57 PM

ನವದೆಹಲಿ: ಉತ್ತರ ಭಾರತದಲ್ಲಿ ಸುರಿಯುತ್ತಿರುವ ಮಳೆಗೆ ನದಿಗಳು ಉಕ್ಕಿ ಹರಿಯುತ್ತಿವೆ.‌ ಯಮುನಾ ನದಿಯ (Yamuna River) ಪ್ರವಾಹ ದೆಹಲಿಗೆ ದಿಗ್ಭಂಧನ ಹೇರಿದೆ. ಯಮುನಾ ನದಿಯು ಸಾರ್ವಕಾಲಿಕ ಗರಿಷ್ಠ 208.46 ಮೀಟರ್‌ಗೆ ಏರಿದ್ದು ತಗ್ಗು ಪ್ರದೇಶಗಳು ಜಲಾವೃತವಾಗಿವೆ. ದೆಹಲಿ (Delhi) ಸಚಿವಾಲಯದ ವಸತಿ ಕಚೇರಿಗಳು ಜಲಾವೃತಗೊಂಡಿವೆ. ರಾಜ್‌ಘಾಟ್‌ನಿಂದ ದೆಹಲಿ ಸೆಕ್ರೆಟರಿಯೇಟ್‌ವರೆಗಿನ ರಸ್ತೆಯೂ ಜಲಾವೃತವಾಗಿದೆ. ಕಾಶ್ಮೀರ್ ಗೇಟ್ ಮತ್ತು ರೆಡ್ ಫೋರ್ಟ್ ರಿಂಗ್ ರೋಡ್ ಜಲಾವೃತವಾಗಿದ್ದು, ಸಂಚಾರ ಮುಚ್ಚಲಾಗಿದೆ. ಪ್ರಸ್ತುತ ಯುಮನಾ ನದಿಯ ನೀರಿನ ಮಟ್ಟ ಅಪಾಯದ ಮಟ್ಟಕ್ಕಿಂತ ಮೂರು ಮೀಟರ್‌ಗಳಷ್ಟು ಹೆಚ್ಚಿದೆ.

ಯಮುನಾ ನದಿ ಪಾತ್ರದಲ್ಲಿರುವ ವಜೀರಾಬಾದ್, ಚಂದ್ರವಾಲ್ ಮತ್ತು ಓಖ್ಲಾದಲ್ಲಿ ಮೂರು ಜಲ ಸಂಸ್ಕರಣಾ ಘಟಕಗಳು ಪ್ರವಾಹದಿಂದಾಗಿ ಸ್ಥಗಿತಗೊಂಡಿವೆ. ಇನ್ನು ಎರಡು ದಿನಗಳು ದೆಹಲಿ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸಲಿದೆ. ಯುಮನಾ‌ ನದಿಯ ಭೀಕರ ಪ್ರವಾಹದ ಕಾರಣಕ್ಕೆ ಅಧಿಕಾರಿಗಳ ತುರ್ತು ಸಭೆ ಕರೆದ ಸಿಎಂ ಅರವಿಂದ ಕೇಜ್ರೀವಾಲ್, ವಜೀರಾಬಾದ್ ಜಲ ಸಂಸ್ಕರಣಾ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಯುಮನಾ ನದಿ ಉಕ್ಕಿ ಹರಿಯುತ್ತಿರುವುದೇಕೆ?

ಯಮುನಾ ನದಿ ನೀರಿನ ಮಟ್ಟ 208 ಮೀಟರ್ ದಾಟಿ 45 ವರ್ಷಗಳ ಹಿಂದಿನ ದಾಖಲೆಯನ್ನು ಮುರಿದಿದೆ. ಪ್ರತಿ ಮಾನ್ಸೂನ್‌ನಲ್ಲಿ ಇದೇ ಪ್ರಮಾಣದ ಮಳೆ ದಾಖಲಾಗಿರುವಾಗ ಈ ವರ್ಷ ದೆಹಲಿಯಲ್ಲಿ ಏಕೆ ಪ್ರವಾಹ ಉಂಟಾಗಿದೆ ಎಂಬ ಪ್ರಶ್ನೆ ಈಗ ಉದ್ಭವಿಸಿದೆ.

ಇದನ್ನೂ ಓದಿ: ಉಕ್ಕಿ ಹರಿದ ಯಮುನಾ ನದಿ; ದೆಹಲಿಯ ತಗ್ಗುಪ್ರದೇಶದಲ್ಲಿನ ಜನರ ಸ್ಥಳಾಂತರಕ್ಕೆ ಆದೇಶಿಸಿದ ಕೇಜ್ರಿವಾಲ್

ಹರಿಯಾಣದ ಹಥಿನಿಕುಂಡ್ ಬ್ಯಾರೇಜ್‌ನಿಂದ ಬಿಡುಗಡೆಯಾದ ನೀರು ಹಿಂದಿನ ವರ್ಷಗಳಿಗೆ ಹೋಲಿಸಿದರೆ ದೆಹಲಿಗೆ ತಲುಪಲು ಕಡಿಮೆ ಸಮಯ ತೆಗೆದುಕೊಳ್ಳುತ್ತಿತ್ತು. ದೆಹಲಿಯಿಂದ 180 ಕಿಮೀ ದೂರದಲ್ಲಿರುವ ಹಥಿನಿ ಕುಂಡ್ ಬ್ಯಾರೇಜ್‌ನಿಂದ ರಾಜಧಾನಿಗೆ ನೀರು ಬರಲು ಸುಮಾರು ಎರಡು ಮೂರು ದಿನಗಳು ಬೇಕಾಗುತ್ತಿತ್ತು, ಆದರೆ ಈ ಬಾರಿ ಅದು ಕೇವಲ ಒಂದು ದಿನದಲ್ಲಿ ನೀರು ತಲುಪುತ್ತಿದೆ.

ಯಮುನಾ ನದಿಯ ಪ್ರವಾಹ ಪ್ರದೇಶದಲ್ಲಿ ಒತ್ತುವರಿ, ಅತಿಕ್ರಮಣ ನಡೆದಿದೆ. ಹಾಗಾಗಿ ಹಥಿನಿ ಕುಂಡ್ ಬ್ಯಾರೇಜ್‌ನಿಂದ ಬಿಡುಗಡೆಯಾದ ನೀರು ಹಾದುಹೋಗಲು ಕಿರಿದಾದ ಪ್ರದೇಶ ಸೃಷ್ಟಿಯಾಗಿದೆ. ನದಿಯ ತಳದಲ್ಲಿ ಹೂಳು ತುಂಬಿಕೊಂಡಿದೆ ಹೀಗಾಗಿ ಕಡಿಮೆ‌ ಮಳೆ ಇದ್ದರೂ ಕೂಡ ಯುಮುನೆ ಮುನಿಸಿಕೊಂಡು ದೆಹಲಿಗೆ ಜಲದಿಗ್ಬಂಧನ ಹೇರಿದೆ.

ಯಮುನಾ ನದಿಗೆ ಅಡ್ಡಲಾಗಿ ಎರಡು ಪ್ರಮುಖ ಬ್ಯಾರೇಜ್‌ಗಳಿವೆ. ಉತ್ತರಾಖಂಡದ ದಕ್‌ಪಥರ್ ಮತ್ತು ಹರ್ಯಾಣದ ಹಥಿನಿಕುಂಡ್, ದೆಹಲಿಯ ಅಪ್‌ಸ್ಟ್ರೀಮ್​ನಲ್ಲಿ ನದಿಯ ಮೇಲೆ ಯಾವುದೇ ಅಣೆಕಟ್ಟುಗಳಿಲ್ಲ ಆದ್ದರಿಂದ ದೆಹಲಿಯಲ್ಲಿ ನೀರಿನ ವೇಗವನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ದೆಹಲಿಯಲ್ಲಿ‌ ಪ್ರವಾಹ ಸೃಷ್ಟಿಯಾಗಿದೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ