AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

45 ವರ್ಷಗಳ ನಂತರ ಇದೇ ಮೊದಲ ಬಾರಿಗೆ ತಾಜ್ ಮಹಲ್ ಆವರಣ ತಲುಪಿದ ಯಮುನೆಯ ನೀರು

ಆಗ್ರಾದಲ್ಲಿ ಪ್ರವಾಹದಂತಹ ಪರಿಸ್ಥಿತಿಯ ನಡುವೆ ಅಧಿಕಾರಿಗಳು ಪರಿಹಾರ ಸಿದ್ಧತೆಯನ್ನು ಹೆಚ್ಚಿಸಿದ್ದಾರೆ. ನದಿಯು ಉಕ್ಕಿ ಹರಿಯಲು ಪ್ರಾರಂಭಿಸಿದಾಗ, ಹತ್ತಿರದ ರಸ್ತೆಗಳು ಮತ್ತು ತಾಜ್‌ಗಂಜ್‌ನ ಸ್ಮಶಾನವನ್ನು ಮುಳುಗಿಸಿದ್ದು, ಇತ್ಮದ್-ಉದ್-ದೌಲಾ ಸ್ಮಾರಕದ ಗೋಡೆಯನ್ನು ಮುಟ್ಟಿತು.

45 ವರ್ಷಗಳ ನಂತರ ಇದೇ ಮೊದಲ ಬಾರಿಗೆ ತಾಜ್ ಮಹಲ್ ಆವರಣ ತಲುಪಿದ ಯಮುನೆಯ ನೀರು
ತಾಜ್ ಮಹಲ್ ಆವರಣ ತಲುಪಿದ ಯಮುನಾ ನದಿ ನೀರುImage Credit source: Twitter/@AnilBer75410115
Follow us
ರಶ್ಮಿ ಕಲ್ಲಕಟ್ಟ
|

Updated on: Jul 18, 2023 | 5:28 PM

ದೆಹಲಿ ಜುಲೈ 18: ದೆಹಲಿಯಲ್ಲಿ (Delhi) ವಿನಾಶವನ್ನು ಉಂಟುಮಾಡಿದ ನಂತರ, ಯಮುನಾ ನದಿ (Yamuna River) ನೀರಿನ ಮಟ್ಟ ಆಗ್ರಾದಲ್ಲಿ (Agra) 495.8 ಅಡಿ ಏರಿಕೆ ಆಗಿದೆ. ‘ಕಡಿಮೆ ಪ್ರವಾಹದ ಮಟ್ಟ’ದ ಹಂತವನ್ನು ದಾಟಿದ ಯಮುನೆ 45 ವರ್ಷಗಳ ನಂತರ ಇದೇ ಮೊದಲ ಬಾರಿಗೆ ತಾಜ್ ಮಹಲ್ (Taj mahal)  ಆವರಣ ತಲುಪಿದೆ. ಸಾಮಾಜಿಕ ಮಾಧ್ಯಮದಲ್ಲಿನ ಹರಿದಾಡುತ್ತಿರುವ ವಿಡಿಯೊದಲ್ಲಿ ಯಮುನೆಯ ನೀರು ತಾಜ್ ಮಹಲ್ ಉದ್ಯಾನವನ್ನು ಮುಳುಗಿಸುತ್ತಿರುವುದನ್ನು ಕಾಣಬಹುದು. 1978 ರ ಪ್ರವಾಹದ ಸಮಯದಲ್ಲಿ ಯಮುನಾ ಕೊನೆಯ ಬಾರಿ ತಾಜ್ ಮಹಲ್ ಆವರಣ ತಲುಪಿತ್ತು.  ನೀರಿನ ಮಟ್ಟವು ಅಂದು 495 ಅಡಿಗಳಷ್ಟು ‘ಕಡಿಮೆ-ಪ್ರವಾಹ ಮಟ್ಟವನ್ನು’ ಮೀರಿ 497.9 ಅಡಿಗಳನ್ನು ತಲುಪಿತ್ತು.

ಎಲ್ಲವನ್ನೂ ತಡೆದು ಕೊಳ್ಳುವ ತಾಜ್​​ನ ಈ ವಿನ್ಯಾಸದ ಬಗ್ಗೆ ಎಕನಾಮಿಕ್ ಟೈಮ್ಸ್‌ನೊಂದಿಗೆ ಮಾತನಾಡಿದ ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ASI) ಸಂರಕ್ಷಣಾ ಸಹಾಯಕ ಪ್ರಿನ್ಸ್ ವಾಜಪೇಯಿ ಅವರು ಈ ಸಮಾಧಿಯನ್ನು ಪ್ರವಾಹವನ್ನು ತಡೆದುಕೊಳ್ಳಲು ರಚಿಸಲಾಗಿದೆ. ಹೆಚ್ಚಿನ ಪ್ರವಾಹದ ಸಮಯದಲ್ಲಿಯೂ ಸಹ ನೀರು ಮುಖ್ಯ ರಚನೆಯನ್ನು ಪ್ರವೇಶಿಸದಂತೆ ಖಚಿತಪಡಿಸಿಕೊಳ್ಳಲು ಸ್ಮಾರಕವನ್ನು ನಿಖರವಾಗಿ ಯೋಜಿಸಲಾಗಿದೆ ಎಂದಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಸಿಕಂದ್ರದ ಕೈಲಾಸ ದೇಗುಲದಿಂದ ತಾಜ್ ಮಹಲ್ ಬಳಿಯ ದಸರಾ ಘಾಟ್​​ವರೆಗೆ ನದಿ ಘಾಟ್‌ಗಳಲ್ಲಿ ಪ್ರವಾಹ ತಡೆಯಲು ಅಧಿಕಾರಿಗಳು ಬ್ಯಾರಿಕೇಡ್‌ಗಳನ್ನು ಹಾಕಿದ್ದಾರೆ.

ಆಗ್ರಾದಲ್ಲಿ ಪ್ರವಾಹದಂತಹ ಪರಿಸ್ಥಿತಿಯ ನಡುವೆ ಅಧಿಕಾರಿಗಳು ಪರಿಹಾರ ಸಿದ್ಧತೆಯನ್ನು ಹೆಚ್ಚಿಸಿದ್ದಾರೆ. ನದಿಯು ಉಕ್ಕಿ ಹರಿಯಲು ಪ್ರಾರಂಭಿಸಿದಾಗ, ಹತ್ತಿರದ ರಸ್ತೆಗಳು ಮತ್ತು ತಾಜ್‌ಗಂಜ್‌ನ ಸ್ಮಶಾನವನ್ನು ಮುಳುಗಿಸಿದ್ದು, ಇತ್ಮದ್-ಉದ್-ದೌಲಾ ಸ್ಮಾರಕದ ಗೋಡೆಯನ್ನು ಮುಟ್ಟಿತು. ತಾಜ್ ಮಹಲ್‌ಗೆ ಹೋಗುವ ಯಮುನಾ ಕಿನಾರಾ ರಸ್ತೆ ಕೂಡಾ ಜಲಾವೃತವಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: INDIA: ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ‘ಇಂಡಿಯಾ’ ನಾಮಕರಣ; ಮಲ್ಲಿಕಾರ್ಜುನ ಖರ್ಗೆ ಘೋಷಣೆ

ಭಾನುವಾರ ಸಂಜೆ 4 ಗಂಟೆಗೆ ಯಮುನಾದಲ್ಲಿ ನೀರಿನ ಮಟ್ಟ 495.8 ಅಡಿ ಇತ್ತು. ಆಗ್ರಾದಲ್ಲಿನ ಈ ನದಿಯ ಕಡಿಮೆ-ಪ್ರವಾಹ ಮಟ್ಟ 495 ಅಡಿಗಳು. ಇಲ್ಲಿ ಮಧ್ಯಮ ಪ್ರವಾಹದ ಮಟ್ಟ 499 ಅಡಿ ಮತ್ತು ಹೆಚ್ಚಿನ ಪ್ರವಾಹದ ಮಟ್ಟ 508 ಅಡಿ ಎಂದು ಯಶವರ್ಧನ್ ಶ್ರೀವಾಸ್ತವ್, ಎಡಿಎಂ (ಹಣಕಾಸು ಮತ್ತು ಕಂದಾಯ) ಪಿಟಿಐಗೆ ತಿಳಿಸಿದರು.

ಪ್ರವಾಹದಂತಹ ಪರಿಸ್ಥಿತಿ ಉದ್ಭವಿಸಿದರೆ ಅದನ್ನು ನಿಭಾಯಿಸಲು ನಾವು ಸಿದ್ಧರಿದ್ದೇವೆ. ಪೋಸ್ಟ್‌ಗಳನ್ನು ರಚಿಸಲಾಗಿದೆ. ಬೋಟ್‌ಮೆನ್‌ಗಳು ಮತ್ತು ಡೈವರ್‌ಗಳು ಜಾಗರೂಕರಾಗಿದ್ದಾರೆ. ತಗ್ಗು ಪ್ರದೇಶಗಳಲ್ಲಿರುವ ಸ್ಥಳೀಯರಿಗೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಅಧಿಕಾರಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಎರಡು ಬ್ಯಾರೇಜ್‌ಗಳಿಂದ ನೀರು ಬಿಡುಗಡೆ ಮಾಡಿದ್ದರಿಂದ ಯಮುನಾ ಮಟ್ಟ ಏರಿಕೆಯಾಗಿದೆ. ಅದೇ ವೇಳೆ ಓಖ್ಲಾ ಬ್ಯಾರೇಜ್‌ನಿಂದ 1,06,473 ಕ್ಯೂಸೆಕ್ ಮತ್ತು ಮಥುರಾದ ಗೋಕುಲ್ ಬ್ಯಾರೇಜ್‌ನಿಂದ 1,24,302 ಕ್ಯೂಸೆಕ್ ನೀರು ಹೊರಬಿಡಲಾಗಿದ್ದು, ಎಲ್ಲಾ ಏಳು ಗೇಟ್‌ಗಳನ್ನು ತೆರೆಯಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ