AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದಲ್ಲ ಎರಡಲ್ಲ, ಬರೋಬ್ಬರಿ 167 ಕೋಟಿ ರೂ. ಕೊಟ್ಟು ರಾಜಾ ರವಿ ವರ್ಮನ ಚಿತ್ರ ಖರೀದಿಸಿದ ಔಷಧಿ ಕಿಂಗ್​ ಸೈರಸ್ ಪೂನಾವಾಲಾ

ರಾಜಾ ರವಿ ವರ್ಮನ(Raja Ravi Verma) ಕುಂಚದಲ್ಲಿ ಮೂಡಿ ಬಂದಿರುವ ಯಶೋಧ ಮತ್ತು ಕೃಷ್ಣ ಇರುವ ಚಿತ್ರವನ್ನು ಔಷಧಿ ಕಿಂಗ್ ಸೈರಸ್ ಪೂನಾವಾಲಾ ಬರೋಬ್ಬರಿ 167 ಕೋಟಿ ರೂ. ಕೊಟ್ಟು ಖರೀದಿಸಿದ್ದಾರೆ. ಚಿತ್ರಕಲೆ ಹರಾಜಿನಲ್ಲಿ ಮಾರಾಟವಾದ ಅತ್ಯಂತ ದುಬಾರಿ  ಭಾರತೀಯ ಕಲಾಕೃತಿಯಾಗಿದೆ. ಕೈಗಾರಿಕೋದ್ಯಮಿ ಮತ್ತು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥಾಪಕ ಸೈರಸ್ ಎಸ್ ಪೂನವಲ್ಲಾ ಈ ಆಯಿಲ್ ಪೇಂಟಿಂಗ್ ಖರೀದಿಸಿದ್ದಾರೆ.

ಒಂದಲ್ಲ ಎರಡಲ್ಲ, ಬರೋಬ್ಬರಿ 167 ಕೋಟಿ ರೂ. ಕೊಟ್ಟು ರಾಜಾ ರವಿ ವರ್ಮನ ಚಿತ್ರ ಖರೀದಿಸಿದ ಔಷಧಿ ಕಿಂಗ್​ ಸೈರಸ್ ಪೂನಾವಾಲಾ
ಚಿತ್ರImage Credit source: News 9
ನಯನಾ ರಾಜೀವ್
|

Updated on: Apr 02, 2026 | 11:36 AM

Share

ನವದೆಹಲಿ, ಏಪ್ರಿಲ್ 02: ರಾಜಾ ರವಿ ವರ್ಮನ(Raja Ravi Verma) ಕುಂಚದಲ್ಲಿ ಮೂಡಿ ಬಂದಿರುವ ಯಶೋಧ ಮತ್ತು ಕೃಷ್ಣ ಇರುವ ಚಿತ್ರವನ್ನು ಔಷಧಿ ಕಿಂಗ್ ಸೈರಸ್ ಪೂನಾವಾಲಾ ಬರೋಬ್ಬರಿ 167 ಕೋಟಿ ರೂ. ಕೊಟ್ಟು ಖರೀದಿಸಿದ್ದಾರೆ. ಚಿತ್ರಕಲೆ ಹರಾಜಿನಲ್ಲಿ ಮಾರಾಟವಾದ ಅತ್ಯಂತ ದುಬಾರಿ  ಭಾರತೀಯ ಕಲಾಕೃತಿಯಾಗಿದೆ. ಕೈಗಾರಿಕೋದ್ಯಮಿ ಮತ್ತು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥಾಪಕ ಸೈರಸ್ ಎಸ್ ಪೂನವಲ್ಲಾ ಈ ಆಯಿಲ್ ಪೇಂಟಿಂಗ್ ಖರೀದಿಸಿದ್ದಾರೆ.

ಯುರೋಪಿಯನ್ ತಂತ್ರ ಮತ್ತು ಭಾರತೀಯ ಸಂವೇದನೆಯನ್ನು ತಮ್ಮ ಚಿತ್ರಕಲೆಯಲ್ಲಿ ಮಿಶ್ರಣ ಮಾಡಿದ್ದಕ್ಕಾಗಿ ಹೆಸರುವಾಸಿಯಾದ ವರ್ಮಾ, 1890 ರ ದಶಕದಲ್ಲಿ ‘ಯಶೋದ ಮತ್ತು ಕೃಷ್ಣ’ ಎಂಬ ಶೀರ್ಷಿಕೆಯ ಈ ವರ್ಣಚಿತ್ರವನ್ನು ರಚಿಸಿದ್ದರು ಅದರಲ್ಲಿ ಅವರ ಸಹಿ ಕೂಡ ಇದೆ.

ಈ ವರ್ಣಚಿತ್ರವು 80 ಕೋಟಿ ರೂ.ನಿಂದ 120 ಕೋಟಿ ರೂ.ವರೆಗೆ ಮಾರಾಟವಾಗಲಿದೆ ಎಂದು ಅಂದಾಜಿಸಲಾಗಿತ್ತು, ಆದರೆ ಅದು ಅಂದಾಜು ಬೆಲೆಗಿಂತ ಎರಡು ಪಟ್ಟು ಹೆಚ್ಚು ಬೆಲೆಗೆ ಮಾರಾಟವಾಗಿದೆ. ತಿರುವಾಂಕೂರಿನ ಶ್ರೀಮಂತ ಕುಟುಂಬದಲ್ಲಿ ಜನಿಸಿದ ವರ್ಮಾ ಆಧುನಿಕ ಭಾರತೀಯ ಕಲೆಯ ಪಿತಾಮಹ ಎಂದೇ ಕರೆಯುತ್ತಾರೆ, ಹಿಂದೂ ದೇವರು ಮತ್ತು ದೇವತೆಗಳ ಚಿತ್ರಗಳನ್ನು ಕ್ಯಾನ್ವಾಸ್‌ನಲ್ಲಿ ಎಷ್ಟು ಕೌಶಲ್ಯದಿಂದ ಬಿಡಿಸುತ್ತಾರೆಂದರೆ ಅದು ಪೇಂಟಿಂಗ್ ಎಂದೇ ಗೊತ್ತಾಗುವುದಿಲ್ಲ.

ಮತ್ತಷ್ಟು ಓದಿ: ಬೆಂಗಳೂರಿನ ಗೋಡೆಗಳ ಮೇಲೆ ಕಲಾವಿದರ ಕೈಚಳಕ: ಕತೆ ಹೇಳುತ್ತವೆ ಒಂದೊಂದು ಚಿತ್ರಗಳು

ದೆಹಲಿ ಮೂಲದ ಸ್ಯಾಫ್ರನ್‌ಆರ್ಟ್ ಹರಾಜು ಸಂಸ್ಥೆಯು ತನ್ನ ಸ್ಪ್ರಿಂಗ್ ಲೈವ್ ಸೇಲ್ನ ಭಾಗವಾಗಿ ಏಪ್ರಿಲ್ 1 ರಂದು ಈ ವರ್ಣಚಿತ್ರವನ್ನು ಹರಾಜಿಗೆ ಹಾಕಿತ್ತು. ಕಳೆದ ವರ್ಷ ಸೆಪ್ಟೆಂಬರ್ 27 ರಂದು, ಭಾರತೀಯ ಕಲಾವಿದ ವಾಸುದೇವ್ ಎಸ್. ಗೈತೊಂಡೆ ಅವರ ಅಮೂರ್ತ ಚಿತ್ರಕಲೆ ಅಂದಾಜು ಬೆಲೆಗಿಂತ ಮೂರು ಪಟ್ಟು ಹೆಚ್ಚು ಮಾರಾಟವಾಗಿತ್ತು. ಅದು 67 ಕೋಟಿ ರೂ.ಗೆ ಮಾರಾಟವಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!