AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ್​ನಲ್ಲಿ ಬಿಜೆಪಿಗೆ ಶಾಕ್​ ಕೊಟ್ಟ ಸಾರಿಗೆ ಸಚಿವ; ಪುತ್ರನೊಂದಿಗೆ ಕಾಂಗ್ರೆಸ್​ ಸೇರ್ಪಡೆ

ಉತ್ತರಾಖಂಡ್​​ ಬಿಜೆಪಿ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದ ಯಶ್​ಪಾಲ್​ ಆರ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ಕಾಂಗ್ರೆಸ್​ ಸೇರ್ಪಡೆ, 2022ರ ಉತ್ತರಾಖಂಡ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಖಂಡಿತವಾಗಿಯೂ ಬಿಜೆಪಿಗೆ ಶಾಕ್​ ತರಲಿದೆ.

ಉತ್ತರಾಖಂಡ್​ನಲ್ಲಿ ಬಿಜೆಪಿಗೆ ಶಾಕ್​ ಕೊಟ್ಟ ಸಾರಿಗೆ ಸಚಿವ; ಪುತ್ರನೊಂದಿಗೆ ಕಾಂಗ್ರೆಸ್​ ಸೇರ್ಪಡೆ
ಕಾಂಗ್ರೆಸ್​ ಸೇರ್ಪಡೆಯಾದ ತಂದೆ-ಮಗ
TV9 Web
| Edited By: |

Updated on: Oct 11, 2021 | 5:26 PM

Share

ಡೆಹ್ರಾಡೂನ್​: ಉತ್ತರಾಖಂಡ್​​ನಲ್ಲಿ ಬರುವ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಮಧ್ಯೆ ಉತ್ತರಾಖಂಡ್​​ನಲ್ಲಿ ಒಂದು ಮಹತ್ವದ ಬೆಳವಣಿಗೆಯಾಗಿದ್ದು, ಇದೀಗ ಬಿಜೆಪಿ ನಾಯಕ, ರಾಜ್ಯ ಸಚಿವರಾಗಿದ್ದ ಯಶ್​ಪಾಲ್​ ಆರ್ಯಾ ಮತ್ತು ಅವರ ಪುತ್ರ ಶಾಸಕ ಸಂಜೀವ್​ ಆರ್ಯ ಇಬ್ಬರೂ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇಂದು ದೆಹಲಿಯಲ್ಲಿ ಕಾಂಗ್ರೆಸ್​​ನ ಪ್ರಮುಖ ನಾಯಕರಾದ ವೇಣುಗೋಪಾಲ್​ ಮತ್ತು ಹರೀಶ್​ ರಾವತ್​ ಸಮ್ಮುಖದಲ್ಲಿ ಇವರಿಬ್ಬರೂ ಕಾಂಗ್ರೆಸ್​ಗೆ ಸೇರಿದ್ದಾರೆ.   

ಉತ್ತರಾಖಂಡ್​​ ಬಿಜೆಪಿ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದ ಯಶ್​ಪಾಲ್​ ಆರ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ಕಾಂಗ್ರೆಸ್​ ಸೇರ್ಪಡೆ, 2022ರ ಉತ್ತರಾಖಂಡ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಖಂಡಿತವಾಗಿಯೂ ಬಿಜೆಪಿಗೆ ಶಾಕ್​ ತರಲಿದೆ. ಯಶ್​ಪಾಲ್​ ಆರ್ಯ ಮುಕ್ತೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಅವರ ಪುತ್ರ ಸಂಜೀವ್​ ಆರ್ಯ ನೈನಿತಾಲ್​​ನಿಂದ ಆರಿಸಿಬಂದಿದ್ದಾರೆ. ಉತ್ತರಾಖಂಡ್​​ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಪುಷ್ಕರ್​ ಸಿಂಗ್​ ಧಮಿಯನ್ನು ಆಯ್ಕೆ ಮಾಡಿದಾಗಿನಿಂದಲೂ ಯಶ್​ಪಾಲ್​ ಅಸಮಾಧಾನಗೊಂಡಿದ್ದರು. ಈ ಬಗ್ಗೆ ಬಿಜೆಪಿ ವರಿಷ್ಠರು ಈಗಾಗಲೇ ಹಲವು ಬಾರಿ ಅವರ  ಬಳಿ ಮಾತನಾಡಿದ್ದಾರೆ. ಧಮಿ ಕೂಡ ಸ್ವತಃ ಯಶ್​ಪಾಲ್​ ಮನೆಗೆ ಹೋಗಿ ಮಾತುಕತೆ ನಡೆಸಿದ್ದರು. ಅಂದಹಾಗೆ ಯಶ್​ಪಾಲ್​ ಕಾಂಗ್ರೆಸ್​​ನಿಂದ ಬಿಜೆಪಿಗೆ ಬಂದವರೇ ಆಗಿದ್ದರು. 2007-20014ರವರೆಗೆ ಉತ್ತರಾಖಂಡ್​​ನ ಕಾಂಗ್ರೆಸ್​ ಅಧ್ಯಕ್ಷರಾಗಿದ್ದರು. ಹರೀಶ್​ ರಾವತ್​ ಸರ್ಕಾರದಲ್ಲಿ ಸ್ಪೀಕರ್​ ಆಗಿಯೂ ಕಾರ್ಯನಿರ್ವಹಿಸಿದ್ದರು.

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಭೇಟಿ ಇಂದು ದೆಹಲಿಯಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗುವುದಕ್ಕೂ ಮೊದಲು ಯಶ್​ಪಾಲ್​ ಸಿಂಗ್​ ಮತ್ತು ಅವರ ಪುತ್ರ ಇಬ್ಬರೂ ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿಯನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಈ ಇಬ್ಬರು ನಾಯಕರು ರಾಹುಲ್ ಗಾಂಧಿಯನ್ನು ಭೇಟಿಯಾಗಿರುವ ಫೋಟೋವನ್ನು ಕಾಂಗ್ರೆಸ್​ ಟ್ವಿಟರ್​​ನಲ್ಲಿ ಶೇರ್​ ಮಾಡಿಕೊಂಡಿತ್ತು.

ಇದನ್ನೂ ಓದಿ: Robin Uthappa: ಸಿಎಸ್​ಕೆ ಪರ ಭರ್ಜರಿ ಬ್ಯಾಟಿಂಗ್ ಬಳಿಕ ಕೆಕೆಆರ್ ತಂಡವನ್ನು ನೆನೆದ ಉತ್ತಪ್ಪ

‘ಚರಂಡಿ ಕ್ಲೀನ್​ ಮಾಡುವವನ ಪಾತ್ರ ಮಾಡ್ತೀನಿ’: ದುನಿಯಾ ವಿಜಯ್​ ನಿರ್ದೇಶನದಲ್ಲಿ ಶಿವಣ್ಣನಿಗೆ ನಟಿಸುವ ಆಸೆ

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು