AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ್​ನಲ್ಲಿ ಬಿಜೆಪಿಗೆ ಶಾಕ್​ ಕೊಟ್ಟ ಸಾರಿಗೆ ಸಚಿವ; ಪುತ್ರನೊಂದಿಗೆ ಕಾಂಗ್ರೆಸ್​ ಸೇರ್ಪಡೆ

ಉತ್ತರಾಖಂಡ್​​ ಬಿಜೆಪಿ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದ ಯಶ್​ಪಾಲ್​ ಆರ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ಕಾಂಗ್ರೆಸ್​ ಸೇರ್ಪಡೆ, 2022ರ ಉತ್ತರಾಖಂಡ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಖಂಡಿತವಾಗಿಯೂ ಬಿಜೆಪಿಗೆ ಶಾಕ್​ ತರಲಿದೆ.

ಉತ್ತರಾಖಂಡ್​ನಲ್ಲಿ ಬಿಜೆಪಿಗೆ ಶಾಕ್​ ಕೊಟ್ಟ ಸಾರಿಗೆ ಸಚಿವ; ಪುತ್ರನೊಂದಿಗೆ ಕಾಂಗ್ರೆಸ್​ ಸೇರ್ಪಡೆ
ಕಾಂಗ್ರೆಸ್​ ಸೇರ್ಪಡೆಯಾದ ತಂದೆ-ಮಗ
TV9 Web
| Edited By: |

Updated on: Oct 11, 2021 | 5:26 PM

Share

ಡೆಹ್ರಾಡೂನ್​: ಉತ್ತರಾಖಂಡ್​​ನಲ್ಲಿ ಬರುವ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಮಧ್ಯೆ ಉತ್ತರಾಖಂಡ್​​ನಲ್ಲಿ ಒಂದು ಮಹತ್ವದ ಬೆಳವಣಿಗೆಯಾಗಿದ್ದು, ಇದೀಗ ಬಿಜೆಪಿ ನಾಯಕ, ರಾಜ್ಯ ಸಚಿವರಾಗಿದ್ದ ಯಶ್​ಪಾಲ್​ ಆರ್ಯಾ ಮತ್ತು ಅವರ ಪುತ್ರ ಶಾಸಕ ಸಂಜೀವ್​ ಆರ್ಯ ಇಬ್ಬರೂ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇಂದು ದೆಹಲಿಯಲ್ಲಿ ಕಾಂಗ್ರೆಸ್​​ನ ಪ್ರಮುಖ ನಾಯಕರಾದ ವೇಣುಗೋಪಾಲ್​ ಮತ್ತು ಹರೀಶ್​ ರಾವತ್​ ಸಮ್ಮುಖದಲ್ಲಿ ಇವರಿಬ್ಬರೂ ಕಾಂಗ್ರೆಸ್​ಗೆ ಸೇರಿದ್ದಾರೆ.   

ಉತ್ತರಾಖಂಡ್​​ ಬಿಜೆಪಿ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದ ಯಶ್​ಪಾಲ್​ ಆರ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ಕಾಂಗ್ರೆಸ್​ ಸೇರ್ಪಡೆ, 2022ರ ಉತ್ತರಾಖಂಡ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಖಂಡಿತವಾಗಿಯೂ ಬಿಜೆಪಿಗೆ ಶಾಕ್​ ತರಲಿದೆ. ಯಶ್​ಪಾಲ್​ ಆರ್ಯ ಮುಕ್ತೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಅವರ ಪುತ್ರ ಸಂಜೀವ್​ ಆರ್ಯ ನೈನಿತಾಲ್​​ನಿಂದ ಆರಿಸಿಬಂದಿದ್ದಾರೆ. ಉತ್ತರಾಖಂಡ್​​ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಪುಷ್ಕರ್​ ಸಿಂಗ್​ ಧಮಿಯನ್ನು ಆಯ್ಕೆ ಮಾಡಿದಾಗಿನಿಂದಲೂ ಯಶ್​ಪಾಲ್​ ಅಸಮಾಧಾನಗೊಂಡಿದ್ದರು. ಈ ಬಗ್ಗೆ ಬಿಜೆಪಿ ವರಿಷ್ಠರು ಈಗಾಗಲೇ ಹಲವು ಬಾರಿ ಅವರ  ಬಳಿ ಮಾತನಾಡಿದ್ದಾರೆ. ಧಮಿ ಕೂಡ ಸ್ವತಃ ಯಶ್​ಪಾಲ್​ ಮನೆಗೆ ಹೋಗಿ ಮಾತುಕತೆ ನಡೆಸಿದ್ದರು. ಅಂದಹಾಗೆ ಯಶ್​ಪಾಲ್​ ಕಾಂಗ್ರೆಸ್​​ನಿಂದ ಬಿಜೆಪಿಗೆ ಬಂದವರೇ ಆಗಿದ್ದರು. 2007-20014ರವರೆಗೆ ಉತ್ತರಾಖಂಡ್​​ನ ಕಾಂಗ್ರೆಸ್​ ಅಧ್ಯಕ್ಷರಾಗಿದ್ದರು. ಹರೀಶ್​ ರಾವತ್​ ಸರ್ಕಾರದಲ್ಲಿ ಸ್ಪೀಕರ್​ ಆಗಿಯೂ ಕಾರ್ಯನಿರ್ವಹಿಸಿದ್ದರು.

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಭೇಟಿ ಇಂದು ದೆಹಲಿಯಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗುವುದಕ್ಕೂ ಮೊದಲು ಯಶ್​ಪಾಲ್​ ಸಿಂಗ್​ ಮತ್ತು ಅವರ ಪುತ್ರ ಇಬ್ಬರೂ ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿಯನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಈ ಇಬ್ಬರು ನಾಯಕರು ರಾಹುಲ್ ಗಾಂಧಿಯನ್ನು ಭೇಟಿಯಾಗಿರುವ ಫೋಟೋವನ್ನು ಕಾಂಗ್ರೆಸ್​ ಟ್ವಿಟರ್​​ನಲ್ಲಿ ಶೇರ್​ ಮಾಡಿಕೊಂಡಿತ್ತು.

ಇದನ್ನೂ ಓದಿ: Robin Uthappa: ಸಿಎಸ್​ಕೆ ಪರ ಭರ್ಜರಿ ಬ್ಯಾಟಿಂಗ್ ಬಳಿಕ ಕೆಕೆಆರ್ ತಂಡವನ್ನು ನೆನೆದ ಉತ್ತಪ್ಪ

‘ಚರಂಡಿ ಕ್ಲೀನ್​ ಮಾಡುವವನ ಪಾತ್ರ ಮಾಡ್ತೀನಿ’: ದುನಿಯಾ ವಿಜಯ್​ ನಿರ್ದೇಶನದಲ್ಲಿ ಶಿವಣ್ಣನಿಗೆ ನಟಿಸುವ ಆಸೆ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ