AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yashwant Sinha: ಪ್ರಜಾಪ್ರಭುತ್ವ ಉಳಿಸಲು ನನಗೆ ಮತ ನೀಡಿ; ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಮನವಿ

Presidential Election 2022: ನನ್ನ ವಿರುದ್ಧ ಹಣ ಬಲದ ಬಳಕೆಯಾಗಿದೆ. ದೇಶದಲ್ಲಿ ಪ್ರತಿಪಕ್ಷಗಳನ್ನು ಮಟ್ಟ ಹಾಕಲು ಸರ್ಕಾರಿ ಸಂಸ್ಥೆಗಳನ್ನು ಬಳಸಲಾಗುತ್ತಿದೆ ಎಂದು ಯಶವಂತ್ ಸಿನ್ಹಾ ನೇರ ಆರೋಪ ಮಾಡಿದ್ದಾರೆ.

Yashwant Sinha: ಪ್ರಜಾಪ್ರಭುತ್ವ ಉಳಿಸಲು ನನಗೆ ಮತ ನೀಡಿ; ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಮನವಿ
ಯಶವಂತ್ ಸಿನ್ಹಾImage Credit source: Hindustan Times
TV9 Web
| Edited By: |

Updated on:Jul 18, 2022 | 12:00 PM

Share

ನವದೆಹಲಿ: ಸದ್ಯದಲ್ಲೇ ರಾಷ್ಟ್ರಪತಿ ರಾಮನಾಥ್ ಕೋವಿಂದ್ (Ramnath Kovind) ಅವರ ಅಧಿಕಾರಾವಧಿ ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ (President Election 2022)  ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ರಾಷ್ಟ್ರಪತಿ ಸ್ಥಾನಕ್ಕೆ ವಿಪಕ್ಷಗಳ ಜಂಟಿ ಅಭ್ಯರ್ಥಿಯಾಗಿರುವ ಯಶವಂತ್ ಸಿನ್ಹಾ (Yashwant Sinha) ಈ ವೇಳೆ ಮಾತನಾಡಿದ್ದು, ಪ್ರಜಾಪ್ರಭುತ್ವವನ್ನು ಉಳಿಸಬೇಕಾದರೆ ನನಗೆ ಮತ ನೀಡಿ. ಪ್ರಜಾಪ್ರಭುತ್ವವನ್ನು ಉಳಿಸಲು ಈ ಚುನಾವಣೆ ಬಹಳ ಮಹತ್ವದ್ದಾಗಿದೆ. ಎಲ್ಲ ಸಂಸದರು, ಶಾಸಕರು ಪ್ರಜಾಪ್ರಭುತ್ವದ ಉಳಿವಿಗಾಗಿ ಮತ ಚಲಾಯಿಸುತ್ತಾರೆ ಎಂಬ ನಂಬಿಕೆ ನನಗಿದೆ ಎಂದು ಹೇಳಿದ್ದಾರೆ.

ಇದು ಮಹತ್ವಪೂರ್ಣ ಚುನಾವಣೆ. ಮುಂದಿನ ದಿನಗಳಲ್ಲಿ ಪ್ರಜಾತಂತ್ರದ ಉಳಿವಿನ ದೃಷ್ಟಿಯಿಂದ ಇಂದಿನ ರಾಷ್ಟ್ರಪತಿ ಚುನಾವಣೆ ಪ್ರಾಮುಖ್ಯತೆ ಪಡೆದಿದೆ. ಇದೇ ಕಾರಣಕ್ಕೆ ನಾನು ಇಡೀ ದೇಶ ಸುತ್ತಿ, ಈ ಸಂದೇಶ ನೀಡಲು ಯತ್ನಿಸಿದ್ದೇನೆ. ಈಗ ಮತದಾನ ನಡೆಯುತ್ತಿದೆ. ಎಲ್ಲ ಮತದಾರರು ತಮ್ಮ ಅಂತರಾತ್ಮದ ಕರೆಗೆ ಓಗೊಟ್ಟು ಮತದಾನ ಮಾಡಿ. ಇದು ಗೌಪ್ಯ ಮತದಾನವಾಗಿದೆ. ದೇಶದ ಎಲ್ಲ ಮತದಾರರು ತಮ್ಮ ವಿವೇಕದ ಕರೆಗೆ ಓಗೊಟ್ಟು ನನಗೆ ಮತ ನೀಡಬೇಕು ಎಂದು ಕೋರುತ್ತೇನೆ ಎಂದು ಯಶವಂತ್ ಸಿನ್ಹಾ ಮನವಿ ಮಾಡಿದ್ದಾರೆ.

ಇದನ್ನೂ ಓದಿ
Image
ರಾಷ್ಟ್ರಪತಿ ಚುನಾವಣೆಯ ಮತದಾನಕ್ಕೆ ಇಂದಿಗೂ ಮತಪೆಟ್ಟಿಗೆಗಳೇ ಬಳಕೆಯಾಗುತ್ತಿವೆ, ಮತಯಂತ್ರ ಬಳಸುವುದಿಲ್ಲ ಏಕೆ?
Image
Monsoon Session 2022: ಇಂದಿನಿಂದ ಸಂಸತ್​​ ಮುಂಗಾರು ಅಧಿವೇಶನ ಆರಂಭ; 32 ಮಸೂದೆಗಳ ಮಂಡನೆ ಸಾಧ್ಯತೆ
Image
Presidential Election 2022 : ನನ್ನ ಆತ್ಮಸಾಕ್ಷಿ ಹೇಳಿದವರಿಗೆ ಮತ ಹಾಕಿದ್ದೇನೆ; ಕಾಂಗ್ರೆಸ್ ಶಾಸಕ ಕುಲ್​ದೀಪ್ ಬಿಷ್ಣೋಯ್

ಇದನ್ನೂ ಓದಿ: Presidential Election: ಭಾರತದ 15ನೇ ರಾಷ್ಟ್ರಪತಿ ಆಯ್ಕೆಗೆ ಇಂದು ಮತದಾನ; ಚುನಾವಣಾ ಕಣದಲ್ಲಿ ದ್ರೌಪದಿ ಮುರ್ಮು, ಯಶವಂತ ಸಿನ್ಹಾ

ನನ್ನ ವಿರುದ್ಧ ಹಣ ಬಲದ ಬಳಕೆಯಾಗಿದೆ. ದೇಶದಲ್ಲಿ ಪ್ರತಿಪಕ್ಷಗಳನ್ನು ಮಟ್ಟ ಹಾಕಲು ಸರ್ಕಾರಿ ಸಂಸ್ಥೆಗಳನ್ನು ಬಳಸಲಾಗುತ್ತಿದೆ. ನಾನು ಕೇವಲ ರಾಜಕೀಯ ಹೋರಾಟವನ್ನಷ್ಟೇ ಅಲ್ಲದೆ ಸರ್ಕಾರಿ ಸಂಸ್ಥೆಗಳ ವಿರುದ್ಧವೂ ಹೋರಾಟ ಮಾಡುತ್ತಿದ್ದೇನೆ ಎಂದು ಯಶವಂತ್ ಸಿನ್ಹಾ ನೇರ ಆರೋಪ ಮಾಡಿದ್ದಾರೆ. ಇದು ರಹಸ್ಯ ಮತದಾನವಾಗಿದ್ದು, ಎಲ್ಲಾ ಸಂಸದರು ಮತ್ತು ಶಾಸಕರು ತಮ್ಮ ವಿವೇಚನೆಯನ್ನು ಬಳಸಿ ನನ್ನನ್ನು ಆಯ್ಕೆ ಮಾಡುವಂತೆ ನಾನು ಮನವಿ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.

ನಾನು ಜಾತ್ಯತೀತತೆಯನ್ನು ರಕ್ಷಿಸಲು ಚುನಾವಣೆಗೆ ನಿಂತಿದ್ದೇನೆ. ಆದರೆ, ನನ್ನ ಪ್ರತಿಸ್ಪರ್ಧಿ ದ್ರೌಪದಿ ಮುರ್ಮು ಜಾತ್ಯತೀತತೆಯ ವಿರುದ್ಧ ಸ್ಪರ್ಧೆಗಿಳಿದಿದ್ದಾರೆ ಎಂದು ಯಶವಂತ್ ಸಿನ್ಹಾ ಟೀಕಿಸಿದ್ದಾರೆ.

ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಧ್ಯಕ್ಷೀಯ ಆಯ್ಕೆಯಾಗಿರುವ ದ್ರೌಪದಿ ಮುರ್ಮು ವಿರುದ್ಧ ಸಿನ್ಹಾ ಕಣಕ್ಕಿಳಿದಿದ್ದಾರೆ. ಜುಲೈ 21ರಂದು ಮತ ಎಣಿಕೆ ನಡೆಯಲಿದ್ದು, ಜುಲೈ 25 ರಂದು ನೂತನ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ದ್ರೌಪದಿ ಮುರ್ಮು ಅವರಿಗೆ ಬಹುಮತ ಸಿಗುವುದು ಪಕ್ಕಾ ಆಗಿದೆ.

Published On - 11:55 am, Mon, 18 July 22

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!