AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಏರಿಕೆಯಾಗುತ್ತಿರುವ ಕೊವಿಡ್​ 19; ಹಳದಿ ಅಲರ್ಟ್ ಘೋಷಣೆ, ಶಾಲೆ-ಕಾಲೇಜು ಬಂದ್​

ನಿರ್ಮಾಣ ಕಾಮಗಾರಿ ನಡೆಯುತ್ತದೆ. ಪಬ್ಲಿಕ್​ ಪಾರ್ಕ್​ಗಳು, ಹೊರವಲಯದಲ್ಲಿ ನಡೆಯುವ ಯೋಗ, ಸಲೂನ್​ ಮತ್ತು ಬ್ಯೂಟಿಪಾರ್ಲರ್​ಗಳು ಒಪನ್​ ಇರುತ್ತವೆ.

ದೆಹಲಿಯಲ್ಲಿ ಏರಿಕೆಯಾಗುತ್ತಿರುವ ಕೊವಿಡ್​ 19; ಹಳದಿ ಅಲರ್ಟ್ ಘೋಷಣೆ, ಶಾಲೆ-ಕಾಲೇಜು ಬಂದ್​
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 28, 2021 | 5:25 PM

Share

ದೆಹಲಿಯಲ್ಲಿ ಕೊವಿಡ್​ 19 ಮತ್ತು ಒಮಿಕ್ರಾನ್ ವೈರಾಣುಗಳ ಸೋಂಕಿತರ ಸಂಖ್ಯೆ ಏರುತ್ತಿರುವ ಬೆನ್ನಲ್ಲೇ, ನಗರದಲ್ಲಿ ಶ್ರೇಣೀಕೃತ ಪ್ರತಿಕ್ರಿಯೆ ಕ್ರಿಯಾ ಯೋಜನೆ(Graded Response Action Plan)ಯಲ್ಲಿ ಹಳದಿ ಅಲರ್ಟ್​ ಘೋಷಣೆ ಮಾಡಲಾಗಿದೆ. ಬುಧವಾರದಿಂದ ಈ ಹಳದಿ ಅಲರ್ಟ್​ ಘೋಷಣೆಯಾಗಲಿದ್ದು, ಶಾಲೆ, ಕಾಲೇಜುಗಳು, ಜಿಲ್​, ಸ್ಪಾಗಳು ಬಂದ್ ಆಗಲಿವೆ. ಹಾಗೇ, ಮೆಟ್ರೋ, ಬಸ್​ಗಳೆಲ್ಲ ಶೇ.50ರಷ್ಟು ಸಾಮರ್ಥ್ಯದಲ್ಲಿ ಸಂಚರಿಸಲಿವೆ. ದೆಹಲಿಯಲ್ಲಿ 24 ಗಂಟೆಯಲ್ಲಿ 331 ಹೊಸ ಕೊರೊನಾ ಕೇಸ್​ಗಳು ದಾಖಲಾಗಿವೆ. ಹೀಗಾಗಿ ದೆಹಲಿ ಸರ್ಕಾರ ಎಚ್ಚೆತ್ತುಕೊಂಡಿದೆ. 

ನಾಳೆಯಿಂದ ದೆಹಲಿಯಲ್ಲಿ ಯಾವುದೆಲ್ಲ ಕ್ಲೋಸ್? 1. ಸಿನಿಮಾ ಹಾಲ್​, ಮಲ್ಟಿಪ್ಲೆಕ್ಸ್​ಗಳು, ಅಡಿಟೋರಿಯಂಗಳು ಬಂದ್​ 2. ಸ್ಪಾಗಳು, ಜಿಮ್​, ಯೋಗಾ ಸಂಸ್ಥೆಗಳು, ಮನರಂಜನಾ ಪಾರ್ಕ್​ಗಳೂ ಕ್ಲೋಸ್​. 3. ಶಾಲೆ-ಕಾಲೇಜುಗಳು, ತರಬೇತಿ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳೂ ಕಾರ್ಯನಿರ್ವಹಿಸುವುದಿಲ್ಲ 4. ಸಾಮಾಜಿಕ, ರಾಜಕೀಯ, ಧಾರ್ಮಿಕ ಕಾರ್ಯಕ್ರಮಗಳು, ಮನರಂಜನಾ ಕಾರ್ಯಕ್ರಮಗಳು, ಸಾರ್ವಜನಿಕ ಹಬ್ಬ ಆಚರಣೆಗಳು ನಿಷಿದ್ಧ.

ಯಾವುದೆಲ್ಲ ಕಾರ್ಯ ನಿರ್ವಹಿಸುತ್ತವೆ? 1.ಹೋಟೆಲ್​ಗಳು ಕಾರ್ಯನಿರ್ವಹಿಸುತ್ತವೆ. ಆದರೆ ಹೋಟೆಲ್​ ಒಳಗೆ ಔತಣಕೂಟದ ಹಾಲ್​, ಕಾನ್ಫರೆನ್ಸ್ ಹಾಲ್​ಗಳು ಕ್ಲೋಸ್ ಇರುತ್ತವೆ. 2. ರೆಸ್ಟೋರೆಂಟ್​ಗಳು ಬೆಳಗ್ಗೆ 8ಗಂಟೆಯಿಂದ ರಾತ್ರಿ 10ರವರೆಗೆ ಕಾರ್ಯನಿರ್ವಹಿಸುತ್ತವೆ. ಆದರೆ ಶೇ.50ರಷ್ಟು ಸಾಮರ್ಥ್ಯಕ್ಕೆ ಅವಕಾಶ. ಹಾಗೇ, ಬಾರ್​ಗೂ ಇದೇ ಅನ್ವಯ ಆಗುತ್ತವೆ. ಆದರೆ ಬಾರ್​ಗಳು ಮಧ್ಯಾಹ್ನ 12ರಿಂದ ರಾತ್ರಿ 10ರವರೆಗೆ ಮಾತ್ರ ತೆರೆದಿರುತ್ತವೆ. 3. ದೆಹಲಿ ಮೆಟ್ರೋ ಕೂಡ ಶೇ.50ರಷ್ಟು ಸೀಟ್​ಗಳ ಸಾಮರ್ಥ್ಯದಲ್ಲಿ ಸಂಚಾರ ಮಾಡುತ್ತದೆ. ಇನ್ನು ದೆಹಲಿಯಿಂದ ಬೇರೆ ರಾಜ್ಯಗಳಿಗೆ ಸಂಚರಿಸುವ ಬಸ್​ಗಳಿಗೂ ಇದೇ ನಿಯಮ ಅನ್ವಯ ಆಗುತ್ತದೆ. 4. ಆಟೋ, ಇ ರಿಕ್ಷಾ, ಟ್ಯಾಕ್ಸಿ, ಸೈಕಲ್​ ರಿಕ್ಷಾಗಳಲ್ಲಿ ಇಬ್ಬರು ಮಾತ್ರ ಪ್ರಯಾಣ ಮಾಡಬಹುದು. 5. ಕ್ರೀಡಾ ಸಂಕೀರ್ಣಗಳು, ಕ್ರೀಡಾಂಗಣಗಳು, ಈಜುಕೊಳಗಳು ಬಂದ್ ಇರುತ್ತವೆ. ಆದರೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಗಳನ್ನು ಆಯೋಜಿಸಬಹುದು. 6. ಖಾಸಗಿ ಕಚೇರಿಗಳು ಬೆಳಗ್ಗೆ 9 ರಿಂದ ಸಂಜೆ 5ವರೆಗೆ ಕೆಲಸ ಮಾಡಬಹುದು. ಆದರೆ ಅರ್ಧದಷ್ಟು ಮಾತ್ರ ಉದ್ಯೋಗಿಗಳು ಆಫೀಸ್​ಗೆ ಬರಬೇಕು.

ಇನ್ನುಳಿದಂತೆ ನಿರ್ಮಾಣ ಕಾಮಗಾರಿ ನಡೆಯುತ್ತದೆ. ಪಬ್ಲಿಕ್​ ಪಾರ್ಕ್​ಗಳು, ಹೊರವಲಯದಲ್ಲಿ ನಡೆಯುವ ಯೋಗ, ಸಲೂನ್​ ಮತ್ತು ಬ್ಯೂಟಿಪಾರ್ಲರ್​ಗಳು ಒಪನ್​ ಇರುತ್ತವೆ. ದೆಹಲಿಯಲ್ಲಿ ಇತ್ತೀಚೆಗಷ್ಟೇ ನೈಟ್​ ಕರ್ಫ್ಯೂ ಹೇರಲಾಗಿದೆ. ಹಿಂದೊಮ್ಮೆ ಕರೊನಾ ಭೀಕರತೆ ಕಂಡಿದ್ದ ದೆಹಲಿ ಈಗಾಗಲೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ನಮ್ಮಲ್ಲಿ ಆಕ್ಸಿಜನ್​, ಬೆಡ್​ ವ್ಯವಸ್ಥೆ ಮಾಡಿಡಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ತಿಳಿಸಿದ್ದಾರೆ.

ಇದನ್ನೂ ಓದಿ: Konkani : ಅಚ್ಚಿಗೂ ಮೊದಲು ; ಮಹಾಬಳೇಶ್ವರ ಸೈಲ್ ಅವರ ‘ಅದೃಷ್ಟ’ ಕಾದಂಬರಿ ಇಂದಿನಿಂದ ಲಭ್ಯ

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?