AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain Updates: ಮುಂದಿನ 4 ದಿನ ಕರ್ನಾಟಕ, ಉತ್ತರಾಖಂಡಕ್ಕೆ ಯೆಲ್ಲೋ ಅಲರ್ಟ್​, ಗುಜರಾತ್, ಒಡಿಶಾದಲ್ಲೂ ಭಾರಿ ಮಳೆಯ ಮುನ್ಸೂಚನೆ

ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ಮಳೆ ಮುಂದುವರೆದಿದೆ. ಉತ್ತರಾಖಂಡ್​ನ 5 ಜಿಲ್ಲೆಗಳು ಹಾಗೂ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಒಡಿಶಾ, ಗುಜರಾತ್, ಪಶ್ಚಿಮ ಬಂಗಾಳದಲ್ಲೂ ಅಧಿಕ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Karnataka Rain Updates: ಮುಂದಿನ 4 ದಿನ ಕರ್ನಾಟಕ, ಉತ್ತರಾಖಂಡಕ್ಕೆ ಯೆಲ್ಲೋ ಅಲರ್ಟ್​, ಗುಜರಾತ್, ಒಡಿಶಾದಲ್ಲೂ ಭಾರಿ ಮಳೆಯ ಮುನ್ಸೂಚನೆ
Rain
TV9 Web
| Updated By: ನಯನಾ ರಾಜೀವ್|

Updated on:Sep 11, 2022 | 11:12 AM

Share

ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ಮಳೆ ಮುಂದುವರೆದಿದೆ. ಉತ್ತರಾಖಂಡ್​ನ 5 ಜಿಲ್ಲೆಗಳು ಹಾಗೂ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಒಡಿಶಾ, ಗುಜರಾತ್, ಪಶ್ಚಿಮ ಬಂಗಾಳದಲ್ಲೂ ಅಧಿಕ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸಾಮಾನ್ಯವಾಗಿ ಚೌತಿ ಕಳೆದ ಬಳಿಕ ಕ್ರಮೇಣವಾಗಿ ಮಳೆ ಕಡಿಮೆಯಾಗುತ್ತಿತ್ತು, ಆದರೆ ಈ ಬಾರಿ ಮಳೆ ನಿಲ್ಲುವ ಲಕ್ಷಣವೇ ಕಾಣುತ್ತಿಲ್ಲ. ಮಳೆಗಾಲ ಆರಂಭದಲ್ಲಿ ಗುಡುಗು, ಸಿಡಿಲು ಮಳೆಯನ್ನು ನಾವು ನೋಡುತ್ತೇವೆ, ಆದರೆ ಈ ಬಾರಿ ಮಳೆಗಾದಲ್ಲೂ ಗುಡುಗು, ಸಿಡಿಲಿನ ಆರ್ಭಟದ ಜತೆಗೆ ಮಳೆಯಾಗಿದೆ.

ಉತ್ತರಾಖಂಡದ ಪಿಥೋರಾಗಢ, ಡೆಹ್ರಾಡೂನ್ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ನೇಪಾಳದ ಛಪ್ಲಿ ಪ್ರದೇಶದಲ್ಲಿ ಮೇಘಸ್ಫೋಟ ಉಂಟಾಗಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಹಾಗೆಯೇ ಅಲ್ಲಿ ಮಳೆಯಾದ ಕಾರಣ ಉತ್ತರಾಖಂಡದ ಧಾರ್​ಚೂಲಾದಲ್ಲೂ ಹೆಚ್ಚು ಪ್ರಮಾಣದ ಮಳೆ ಸುರಿದಿತ್ತು.

ಇನ್ನು ರುದ್ರ ಪ್ರಯಾಗದಲ್ಲಿ ಮಳೆ ಕಡಿಮೆಯಾಗಿದ್ದು, ಭಕ್ತರು ಅಧಿಕ ಪ್ರಮಾಣದಲ್ಲಿ ಆಗಮಿಸುತ್ತಿದ್ದಾರೆ.

ಒಡಿಶಾ, ಪಶ್ಚಿಮ ಬಂಗಾಳದಲ್ಲೂ ಮಳೆ

ಆಂಧ್ರ ಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳದಲ್ಲಿಯೂ ಮುಂದಿನ ನಾಲ್ಕು ದಿನ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ತಮಿಳುನಾಡಿನಲ್ಲೂ ವರುಣನ ಆರ್ಭಟ ಭಾರತೀಯ ಹವಾಮಾನ ಇಲಾಖೆಯು ಸೆ.11ರಿಂದ ನಾಲ್ಕು ದಿನಗಳ ಕಾಲ ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ತಮಿಳುನಾಡಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಗುಜರಾತ್​ನಲ್ಲಿ ಸೆ.13ರವರೆಗೆ ಮಳೆ ಬರಲಿದೆ.

ಕರ್ನಾಟಕದಲ್ಲಿ ಎಲ್ಲೆಲ್ಲಿ ಮಳೆ: ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಸೆ.13ರವರೆಗೆ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕೊಟ್ಟಿಗೆಹಾರ, ಅಂಕೋಲಾ, ಲೋಂಡಾ, ಬನವಾಸಿ, ಭಾಲ್ಕಿ, ಯಲ್ಲಾಪುರ, ಕದ್ರಾ, ಸಿದ್ದಾಪುರ, ಬ್ರಹ್ಮಾವರ, ಭಾಗಮಂಡಲ, ಕೊಲ್ಲೂರು, ವಿಮಾನ ನಿಲ್ದಾಣ, ಔರಾದ್, ಕುಂದಾಪುರ, ಹಳಿಯಾಳ, ಸಿದ್ದಾಪುರ, ಕಾರವಾರ, ಶಿರಾಲಿ, ಪುತ್ತೂರು, ಉಪ್ಪಿನಂಗಡಿ, ರೋಣ, ಕುಮಟಾ, ಕಮ್ಮರಡಿ, ಶೃಂಗೇರಿ, ಕೊಪ್ಪ, ಕಳಸದಲ್ಲಿ ಮಳೆಯಾಗಲಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:11 am, Sun, 11 September 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ