AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೌದು, ನಾವು ಗಾಂಧಿ-ನೆಹರೂ ಕುಟುಂಬದ ಗುಲಾಮರೇ; ವಿಧಾನಸಭೆಯಲ್ಲಿ ಹೆಮ್ಮೆಯಿಂದ ಹೇಳಿಕೊಂಡ ಕಾಂಗ್ರೆಸ್ ಶಾಸಕ

ಈ ದೇಶವನ್ನು ಕಟ್ಟಿದ್ದು ನೆಹರೂ-ಗಾಂಧಿ ಕುಟುಂಬ. ಹಾಗಾಗಿ ನಾವು ಅವರ ಗುಲಾಮರಾಗಿದ್ದೇವೆ ಮತ್ತು ಹಾಗೆಯೇ ಮುಂದುವರಿಯುತ್ತೇವೆ ಎಂದು ಸಂಯಮ್​ ಲೋಧಾ ಹೇಳುತ್ತಿದ್ದಂತೆ ಬಿಜೆಪಿ ತೀವ್ರವಾಗಿ ಟೀಕಿಸಿದೆ. 

ಹೌದು, ನಾವು ಗಾಂಧಿ-ನೆಹರೂ ಕುಟುಂಬದ ಗುಲಾಮರೇ; ವಿಧಾನಸಭೆಯಲ್ಲಿ ಹೆಮ್ಮೆಯಿಂದ ಹೇಳಿಕೊಂಡ ಕಾಂಗ್ರೆಸ್ ಶಾಸಕ
ಸಂಯಮ್ ಲೋಧಾ
TV9 Web
| Edited By: |

Updated on:Mar 23, 2022 | 10:50 AM

Share

‘ಹೌದು.. ನಾವು ನೆಹರು-ಗಾಂಧಿ ಕುಟುಂಬದ ಗುಲಾಮರೇ’ ಹೀಗೆಂದು ಹೆಮ್ಮೆಯಿಂದ ಹೇಳಿಕೊಂಡಿದ್ದು ರಾಜಸ್ಥಾನದ ಸಿರೋಹಿ ಶಾಸಕ ಸಂಯಮ್ ಲೋಧಾ(Sirohi MLA Sanyam Lodha) ರಾಜಸ್ಥಾನ ವಿಧಾನಸಭೆಯಲ್ಲಿ (Rajasthan Assembly) ಬಜೆಟ್​ ಅಧಿವೇಶನವದ ವೇಳೆ ಮಾತನಾಡಿದ ಅವರು ಈ ಮಾತುಗಳನ್ನು ಆಡಿದ್ದಾರೆ. ಅಷ್ಟೇ ಅಲ್ಲ, ಕೊನೇ ಉಸಿರು ಇರುವ ತನಕವೂ ನಾವು ನೆಹರು-ಗಾಂಧಿ ಕುಟುಂಬದ ಗುಲಾಮರಾಗಿಯೇ ಉಳಿಯುತ್ತೇವೆ ಎಂದಿದ್ದಾರೆ. ಅಂದಹಾಗೇ, ಈ ಲೋಧಾ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ಅವರ  ಸಲಹೆಗಾರರೂ ಆಗಿದ್ದಾರೆ. ಹರಿದೇವ್ ಜೋಶ್​ ವಿಶ್ವವಿದ್ಯಾನಿಲಯ ದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ತಿದ್ದುಪಡಿ ಮಸೂದೆ ಸಂಬಂಧ ಮಾತನಾಡುವಾಗ ಹೀಗೆ ಹೇಳಿದ್ದಾರೆ.

ಈ ದೇಶವನ್ನು ಕಟ್ಟಿದ್ದು ನೆಹರೂ-ಗಾಂಧಿ ಕುಟುಂಬ. ಹಾಗಾಗಿ ನಾವು ಅವರ ಗುಲಾಮರಾಗಿದ್ದೇವೆ ಮತ್ತು ಹಾಗೆಯೇ ಮುಂದುವರಿಯುತ್ತೇವೆ ಎಂದು ಸಂಯಮ್​ ಲೋಧಾ ಹೇಳುತ್ತಿದ್ದಂತೆ ಬಿಜೆಪಿ ತೀವ್ರವಾಗಿ ಟೀಕಿಸಿದೆ.  ರಾಜಸ್ಥಾನ ವಿಧಾನಸಭೆ ಪ್ರತಿಪಕ್ಷ ಉಪನಾಯಕ ರಾಜೇಂದ್ರ ರಾಥೋಡ್​, ನಿಮ್ಮ ಗುಲಾಮಗಿರಿಗೆ ಅಭಿನಂದನೆಗಳು. ಈ ಗುಲಾಮರು ಸಮಾಜಕ್ಕೆ ಏನು ಸಂದೇಶ ಕೊಡಲು ಸಾಧ್ಯ. ಯಾರಿಗೇ ಗುಲಾಮನಾದವನು ಅವನ ಸ್ವಂತ ಇಚ್ಛೆಯಿಂದ, ಮನಸಿನಿಂದ, ಬುದ್ಧಿಯಿಂದ ಏನೂ ಮಾತನಾಡುವುದಿಲ್ಲ. ಅವರೇ ಒಪ್ಪಿಕೊಂಡಿದ್ದಾರೆ ತಾವು ಗಾಂಧಿ-ನೆಹರೂ ಕುಟುಂಬದ ಗುಲಾಮರೆಂದು ಎಂದು ವಾಗ್ದಾಳಿ ನಡೆಸಿದ್ದಾರೆ.  ಬಳಿಕ ವಿಧಾನಸಭೆಯಲ್ಲಿ ಇದೇ ವಿಚಾರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ವಾಗ್ವಾದ ಜೋರಾಗಿತ್ತು. ಇಡೀ ಸದನ ಅವ್ಯವಸ್ಥೆಗೊಂಡಿತ್ತು. ಬಳಿಕ ವಿಧಾನಸಭೆ ಸ್ಪೀಕರ್​ ಮಧ್ಯಪ್ರವೇಶ ಮಾಡಿ, ಎರಡೂ ಪಕ್ಷಗಳ ನಾಯಕರನ್ನು ಸಮಾಧಾನ ಮಾಡಿದರು.

ಇದನ್ನೂ ಓದಿ: ‘ದಿ ಕಾಶ್ಮೀರ್​ ಫೈಲ್ಸ್​’ ನಟರಿಗೆ ಸಿಕ್ಕಿದೆ ಕೋಟಿ ರೂ. ಸಂಬಳ; ಅತಿ ಹೆಚ್ಚು ಸಂಭಾವನೆ ಪಡೆದಿದ್ದು ಯಾರು?

Published On - 9:35 am, Wed, 23 March 22

Follow Us
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
4 ಪಂದ್ಯಗಳ ಬಳಿಕ ವಿಕೆಟ್ ಖಾತೆ ತೆರೆದ ಅರ್ಷದೀಪ್
4 ಪಂದ್ಯಗಳ ಬಳಿಕ ವಿಕೆಟ್ ಖಾತೆ ತೆರೆದ ಅರ್ಷದೀಪ್
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು