AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೌದು, ನಾವು ಗಾಂಧಿ-ನೆಹರೂ ಕುಟುಂಬದ ಗುಲಾಮರೇ; ವಿಧಾನಸಭೆಯಲ್ಲಿ ಹೆಮ್ಮೆಯಿಂದ ಹೇಳಿಕೊಂಡ ಕಾಂಗ್ರೆಸ್ ಶಾಸಕ

ಈ ದೇಶವನ್ನು ಕಟ್ಟಿದ್ದು ನೆಹರೂ-ಗಾಂಧಿ ಕುಟುಂಬ. ಹಾಗಾಗಿ ನಾವು ಅವರ ಗುಲಾಮರಾಗಿದ್ದೇವೆ ಮತ್ತು ಹಾಗೆಯೇ ಮುಂದುವರಿಯುತ್ತೇವೆ ಎಂದು ಸಂಯಮ್​ ಲೋಧಾ ಹೇಳುತ್ತಿದ್ದಂತೆ ಬಿಜೆಪಿ ತೀವ್ರವಾಗಿ ಟೀಕಿಸಿದೆ. 

ಹೌದು, ನಾವು ಗಾಂಧಿ-ನೆಹರೂ ಕುಟುಂಬದ ಗುಲಾಮರೇ; ವಿಧಾನಸಭೆಯಲ್ಲಿ ಹೆಮ್ಮೆಯಿಂದ ಹೇಳಿಕೊಂಡ ಕಾಂಗ್ರೆಸ್ ಶಾಸಕ
ಸಂಯಮ್ ಲೋಧಾ
TV9 Web
| Edited By: |

Updated on:Mar 23, 2022 | 10:50 AM

Share

‘ಹೌದು.. ನಾವು ನೆಹರು-ಗಾಂಧಿ ಕುಟುಂಬದ ಗುಲಾಮರೇ’ ಹೀಗೆಂದು ಹೆಮ್ಮೆಯಿಂದ ಹೇಳಿಕೊಂಡಿದ್ದು ರಾಜಸ್ಥಾನದ ಸಿರೋಹಿ ಶಾಸಕ ಸಂಯಮ್ ಲೋಧಾ(Sirohi MLA Sanyam Lodha) ರಾಜಸ್ಥಾನ ವಿಧಾನಸಭೆಯಲ್ಲಿ (Rajasthan Assembly) ಬಜೆಟ್​ ಅಧಿವೇಶನವದ ವೇಳೆ ಮಾತನಾಡಿದ ಅವರು ಈ ಮಾತುಗಳನ್ನು ಆಡಿದ್ದಾರೆ. ಅಷ್ಟೇ ಅಲ್ಲ, ಕೊನೇ ಉಸಿರು ಇರುವ ತನಕವೂ ನಾವು ನೆಹರು-ಗಾಂಧಿ ಕುಟುಂಬದ ಗುಲಾಮರಾಗಿಯೇ ಉಳಿಯುತ್ತೇವೆ ಎಂದಿದ್ದಾರೆ. ಅಂದಹಾಗೇ, ಈ ಲೋಧಾ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ಅವರ  ಸಲಹೆಗಾರರೂ ಆಗಿದ್ದಾರೆ. ಹರಿದೇವ್ ಜೋಶ್​ ವಿಶ್ವವಿದ್ಯಾನಿಲಯ ದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ತಿದ್ದುಪಡಿ ಮಸೂದೆ ಸಂಬಂಧ ಮಾತನಾಡುವಾಗ ಹೀಗೆ ಹೇಳಿದ್ದಾರೆ.

ಈ ದೇಶವನ್ನು ಕಟ್ಟಿದ್ದು ನೆಹರೂ-ಗಾಂಧಿ ಕುಟುಂಬ. ಹಾಗಾಗಿ ನಾವು ಅವರ ಗುಲಾಮರಾಗಿದ್ದೇವೆ ಮತ್ತು ಹಾಗೆಯೇ ಮುಂದುವರಿಯುತ್ತೇವೆ ಎಂದು ಸಂಯಮ್​ ಲೋಧಾ ಹೇಳುತ್ತಿದ್ದಂತೆ ಬಿಜೆಪಿ ತೀವ್ರವಾಗಿ ಟೀಕಿಸಿದೆ.  ರಾಜಸ್ಥಾನ ವಿಧಾನಸಭೆ ಪ್ರತಿಪಕ್ಷ ಉಪನಾಯಕ ರಾಜೇಂದ್ರ ರಾಥೋಡ್​, ನಿಮ್ಮ ಗುಲಾಮಗಿರಿಗೆ ಅಭಿನಂದನೆಗಳು. ಈ ಗುಲಾಮರು ಸಮಾಜಕ್ಕೆ ಏನು ಸಂದೇಶ ಕೊಡಲು ಸಾಧ್ಯ. ಯಾರಿಗೇ ಗುಲಾಮನಾದವನು ಅವನ ಸ್ವಂತ ಇಚ್ಛೆಯಿಂದ, ಮನಸಿನಿಂದ, ಬುದ್ಧಿಯಿಂದ ಏನೂ ಮಾತನಾಡುವುದಿಲ್ಲ. ಅವರೇ ಒಪ್ಪಿಕೊಂಡಿದ್ದಾರೆ ತಾವು ಗಾಂಧಿ-ನೆಹರೂ ಕುಟುಂಬದ ಗುಲಾಮರೆಂದು ಎಂದು ವಾಗ್ದಾಳಿ ನಡೆಸಿದ್ದಾರೆ.  ಬಳಿಕ ವಿಧಾನಸಭೆಯಲ್ಲಿ ಇದೇ ವಿಚಾರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ವಾಗ್ವಾದ ಜೋರಾಗಿತ್ತು. ಇಡೀ ಸದನ ಅವ್ಯವಸ್ಥೆಗೊಂಡಿತ್ತು. ಬಳಿಕ ವಿಧಾನಸಭೆ ಸ್ಪೀಕರ್​ ಮಧ್ಯಪ್ರವೇಶ ಮಾಡಿ, ಎರಡೂ ಪಕ್ಷಗಳ ನಾಯಕರನ್ನು ಸಮಾಧಾನ ಮಾಡಿದರು.

ಇದನ್ನೂ ಓದಿ: ‘ದಿ ಕಾಶ್ಮೀರ್​ ಫೈಲ್ಸ್​’ ನಟರಿಗೆ ಸಿಕ್ಕಿದೆ ಕೋಟಿ ರೂ. ಸಂಬಳ; ಅತಿ ಹೆಚ್ಚು ಸಂಭಾವನೆ ಪಡೆದಿದ್ದು ಯಾರು?

Published On - 9:35 am, Wed, 23 March 22

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!