AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೌದು, ನಾವು ಗಾಂಧಿ-ನೆಹರೂ ಕುಟುಂಬದ ಗುಲಾಮರೇ; ವಿಧಾನಸಭೆಯಲ್ಲಿ ಹೆಮ್ಮೆಯಿಂದ ಹೇಳಿಕೊಂಡ ಕಾಂಗ್ರೆಸ್ ಶಾಸಕ

ಈ ದೇಶವನ್ನು ಕಟ್ಟಿದ್ದು ನೆಹರೂ-ಗಾಂಧಿ ಕುಟುಂಬ. ಹಾಗಾಗಿ ನಾವು ಅವರ ಗುಲಾಮರಾಗಿದ್ದೇವೆ ಮತ್ತು ಹಾಗೆಯೇ ಮುಂದುವರಿಯುತ್ತೇವೆ ಎಂದು ಸಂಯಮ್​ ಲೋಧಾ ಹೇಳುತ್ತಿದ್ದಂತೆ ಬಿಜೆಪಿ ತೀವ್ರವಾಗಿ ಟೀಕಿಸಿದೆ. 

ಹೌದು, ನಾವು ಗಾಂಧಿ-ನೆಹರೂ ಕುಟುಂಬದ ಗುಲಾಮರೇ; ವಿಧಾನಸಭೆಯಲ್ಲಿ ಹೆಮ್ಮೆಯಿಂದ ಹೇಳಿಕೊಂಡ ಕಾಂಗ್ರೆಸ್ ಶಾಸಕ
ಸಂಯಮ್ ಲೋಧಾ
TV9 Web
| Edited By: |

Updated on:Mar 23, 2022 | 10:50 AM

Share

‘ಹೌದು.. ನಾವು ನೆಹರು-ಗಾಂಧಿ ಕುಟುಂಬದ ಗುಲಾಮರೇ’ ಹೀಗೆಂದು ಹೆಮ್ಮೆಯಿಂದ ಹೇಳಿಕೊಂಡಿದ್ದು ರಾಜಸ್ಥಾನದ ಸಿರೋಹಿ ಶಾಸಕ ಸಂಯಮ್ ಲೋಧಾ(Sirohi MLA Sanyam Lodha) ರಾಜಸ್ಥಾನ ವಿಧಾನಸಭೆಯಲ್ಲಿ (Rajasthan Assembly) ಬಜೆಟ್​ ಅಧಿವೇಶನವದ ವೇಳೆ ಮಾತನಾಡಿದ ಅವರು ಈ ಮಾತುಗಳನ್ನು ಆಡಿದ್ದಾರೆ. ಅಷ್ಟೇ ಅಲ್ಲ, ಕೊನೇ ಉಸಿರು ಇರುವ ತನಕವೂ ನಾವು ನೆಹರು-ಗಾಂಧಿ ಕುಟುಂಬದ ಗುಲಾಮರಾಗಿಯೇ ಉಳಿಯುತ್ತೇವೆ ಎಂದಿದ್ದಾರೆ. ಅಂದಹಾಗೇ, ಈ ಲೋಧಾ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ಅವರ  ಸಲಹೆಗಾರರೂ ಆಗಿದ್ದಾರೆ. ಹರಿದೇವ್ ಜೋಶ್​ ವಿಶ್ವವಿದ್ಯಾನಿಲಯ ದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ತಿದ್ದುಪಡಿ ಮಸೂದೆ ಸಂಬಂಧ ಮಾತನಾಡುವಾಗ ಹೀಗೆ ಹೇಳಿದ್ದಾರೆ.

ಈ ದೇಶವನ್ನು ಕಟ್ಟಿದ್ದು ನೆಹರೂ-ಗಾಂಧಿ ಕುಟುಂಬ. ಹಾಗಾಗಿ ನಾವು ಅವರ ಗುಲಾಮರಾಗಿದ್ದೇವೆ ಮತ್ತು ಹಾಗೆಯೇ ಮುಂದುವರಿಯುತ್ತೇವೆ ಎಂದು ಸಂಯಮ್​ ಲೋಧಾ ಹೇಳುತ್ತಿದ್ದಂತೆ ಬಿಜೆಪಿ ತೀವ್ರವಾಗಿ ಟೀಕಿಸಿದೆ.  ರಾಜಸ್ಥಾನ ವಿಧಾನಸಭೆ ಪ್ರತಿಪಕ್ಷ ಉಪನಾಯಕ ರಾಜೇಂದ್ರ ರಾಥೋಡ್​, ನಿಮ್ಮ ಗುಲಾಮಗಿರಿಗೆ ಅಭಿನಂದನೆಗಳು. ಈ ಗುಲಾಮರು ಸಮಾಜಕ್ಕೆ ಏನು ಸಂದೇಶ ಕೊಡಲು ಸಾಧ್ಯ. ಯಾರಿಗೇ ಗುಲಾಮನಾದವನು ಅವನ ಸ್ವಂತ ಇಚ್ಛೆಯಿಂದ, ಮನಸಿನಿಂದ, ಬುದ್ಧಿಯಿಂದ ಏನೂ ಮಾತನಾಡುವುದಿಲ್ಲ. ಅವರೇ ಒಪ್ಪಿಕೊಂಡಿದ್ದಾರೆ ತಾವು ಗಾಂಧಿ-ನೆಹರೂ ಕುಟುಂಬದ ಗುಲಾಮರೆಂದು ಎಂದು ವಾಗ್ದಾಳಿ ನಡೆಸಿದ್ದಾರೆ.  ಬಳಿಕ ವಿಧಾನಸಭೆಯಲ್ಲಿ ಇದೇ ವಿಚಾರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ವಾಗ್ವಾದ ಜೋರಾಗಿತ್ತು. ಇಡೀ ಸದನ ಅವ್ಯವಸ್ಥೆಗೊಂಡಿತ್ತು. ಬಳಿಕ ವಿಧಾನಸಭೆ ಸ್ಪೀಕರ್​ ಮಧ್ಯಪ್ರವೇಶ ಮಾಡಿ, ಎರಡೂ ಪಕ್ಷಗಳ ನಾಯಕರನ್ನು ಸಮಾಧಾನ ಮಾಡಿದರು.

ಇದನ್ನೂ ಓದಿ: ‘ದಿ ಕಾಶ್ಮೀರ್​ ಫೈಲ್ಸ್​’ ನಟರಿಗೆ ಸಿಕ್ಕಿದೆ ಕೋಟಿ ರೂ. ಸಂಬಳ; ಅತಿ ಹೆಚ್ಚು ಸಂಭಾವನೆ ಪಡೆದಿದ್ದು ಯಾರು?

Published On - 9:35 am, Wed, 23 March 22

Follow Us
Web contact
Web contact

TV9 Kannada

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ