AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೌದು, ನಾವು ಗಾಂಧಿ-ನೆಹರೂ ಕುಟುಂಬದ ಗುಲಾಮರೇ; ವಿಧಾನಸಭೆಯಲ್ಲಿ ಹೆಮ್ಮೆಯಿಂದ ಹೇಳಿಕೊಂಡ ಕಾಂಗ್ರೆಸ್ ಶಾಸಕ

ಈ ದೇಶವನ್ನು ಕಟ್ಟಿದ್ದು ನೆಹರೂ-ಗಾಂಧಿ ಕುಟುಂಬ. ಹಾಗಾಗಿ ನಾವು ಅವರ ಗುಲಾಮರಾಗಿದ್ದೇವೆ ಮತ್ತು ಹಾಗೆಯೇ ಮುಂದುವರಿಯುತ್ತೇವೆ ಎಂದು ಸಂಯಮ್​ ಲೋಧಾ ಹೇಳುತ್ತಿದ್ದಂತೆ ಬಿಜೆಪಿ ತೀವ್ರವಾಗಿ ಟೀಕಿಸಿದೆ. 

ಹೌದು, ನಾವು ಗಾಂಧಿ-ನೆಹರೂ ಕುಟುಂಬದ ಗುಲಾಮರೇ; ವಿಧಾನಸಭೆಯಲ್ಲಿ ಹೆಮ್ಮೆಯಿಂದ ಹೇಳಿಕೊಂಡ ಕಾಂಗ್ರೆಸ್ ಶಾಸಕ
ಸಂಯಮ್ ಲೋಧಾ
TV9 Web
| Edited By: |

Updated on:Mar 23, 2022 | 10:50 AM

Share

‘ಹೌದು.. ನಾವು ನೆಹರು-ಗಾಂಧಿ ಕುಟುಂಬದ ಗುಲಾಮರೇ’ ಹೀಗೆಂದು ಹೆಮ್ಮೆಯಿಂದ ಹೇಳಿಕೊಂಡಿದ್ದು ರಾಜಸ್ಥಾನದ ಸಿರೋಹಿ ಶಾಸಕ ಸಂಯಮ್ ಲೋಧಾ(Sirohi MLA Sanyam Lodha) ರಾಜಸ್ಥಾನ ವಿಧಾನಸಭೆಯಲ್ಲಿ (Rajasthan Assembly) ಬಜೆಟ್​ ಅಧಿವೇಶನವದ ವೇಳೆ ಮಾತನಾಡಿದ ಅವರು ಈ ಮಾತುಗಳನ್ನು ಆಡಿದ್ದಾರೆ. ಅಷ್ಟೇ ಅಲ್ಲ, ಕೊನೇ ಉಸಿರು ಇರುವ ತನಕವೂ ನಾವು ನೆಹರು-ಗಾಂಧಿ ಕುಟುಂಬದ ಗುಲಾಮರಾಗಿಯೇ ಉಳಿಯುತ್ತೇವೆ ಎಂದಿದ್ದಾರೆ. ಅಂದಹಾಗೇ, ಈ ಲೋಧಾ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ಅವರ  ಸಲಹೆಗಾರರೂ ಆಗಿದ್ದಾರೆ. ಹರಿದೇವ್ ಜೋಶ್​ ವಿಶ್ವವಿದ್ಯಾನಿಲಯ ದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ತಿದ್ದುಪಡಿ ಮಸೂದೆ ಸಂಬಂಧ ಮಾತನಾಡುವಾಗ ಹೀಗೆ ಹೇಳಿದ್ದಾರೆ.

ಈ ದೇಶವನ್ನು ಕಟ್ಟಿದ್ದು ನೆಹರೂ-ಗಾಂಧಿ ಕುಟುಂಬ. ಹಾಗಾಗಿ ನಾವು ಅವರ ಗುಲಾಮರಾಗಿದ್ದೇವೆ ಮತ್ತು ಹಾಗೆಯೇ ಮುಂದುವರಿಯುತ್ತೇವೆ ಎಂದು ಸಂಯಮ್​ ಲೋಧಾ ಹೇಳುತ್ತಿದ್ದಂತೆ ಬಿಜೆಪಿ ತೀವ್ರವಾಗಿ ಟೀಕಿಸಿದೆ.  ರಾಜಸ್ಥಾನ ವಿಧಾನಸಭೆ ಪ್ರತಿಪಕ್ಷ ಉಪನಾಯಕ ರಾಜೇಂದ್ರ ರಾಥೋಡ್​, ನಿಮ್ಮ ಗುಲಾಮಗಿರಿಗೆ ಅಭಿನಂದನೆಗಳು. ಈ ಗುಲಾಮರು ಸಮಾಜಕ್ಕೆ ಏನು ಸಂದೇಶ ಕೊಡಲು ಸಾಧ್ಯ. ಯಾರಿಗೇ ಗುಲಾಮನಾದವನು ಅವನ ಸ್ವಂತ ಇಚ್ಛೆಯಿಂದ, ಮನಸಿನಿಂದ, ಬುದ್ಧಿಯಿಂದ ಏನೂ ಮಾತನಾಡುವುದಿಲ್ಲ. ಅವರೇ ಒಪ್ಪಿಕೊಂಡಿದ್ದಾರೆ ತಾವು ಗಾಂಧಿ-ನೆಹರೂ ಕುಟುಂಬದ ಗುಲಾಮರೆಂದು ಎಂದು ವಾಗ್ದಾಳಿ ನಡೆಸಿದ್ದಾರೆ.  ಬಳಿಕ ವಿಧಾನಸಭೆಯಲ್ಲಿ ಇದೇ ವಿಚಾರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ವಾಗ್ವಾದ ಜೋರಾಗಿತ್ತು. ಇಡೀ ಸದನ ಅವ್ಯವಸ್ಥೆಗೊಂಡಿತ್ತು. ಬಳಿಕ ವಿಧಾನಸಭೆ ಸ್ಪೀಕರ್​ ಮಧ್ಯಪ್ರವೇಶ ಮಾಡಿ, ಎರಡೂ ಪಕ್ಷಗಳ ನಾಯಕರನ್ನು ಸಮಾಧಾನ ಮಾಡಿದರು.

ಇದನ್ನೂ ಓದಿ: ‘ದಿ ಕಾಶ್ಮೀರ್​ ಫೈಲ್ಸ್​’ ನಟರಿಗೆ ಸಿಕ್ಕಿದೆ ಕೋಟಿ ರೂ. ಸಂಬಳ; ಅತಿ ಹೆಚ್ಚು ಸಂಭಾವನೆ ಪಡೆದಿದ್ದು ಯಾರು?

Published On - 9:35 am, Wed, 23 March 22

ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!