ತಿರುಪತಿ: ತಿರುಮಲ ಬೆಟ್ಟದಲ್ಲಿ ಮತ್ತೆ ಚಿರತೆ-ಕರಡಿ ಪ್ರತ್ಯಕ್ಷ, ಅಲಿಪಿರಿ ಕಾಲ್ನಡಿಗೆ ಮೆಟ್ಟಿಲುಗಳ ಮೇಲೆ ಚಿರತೆ ಹಾವಳಿ

Leopard in TTD: ಬುಧವಾರ ಬೆಳಗ್ಗೆ ಪಾದಚಾರಿ ಮಾರ್ಗದ ಬಳಿ ಚಿರತೆಯೊಂದು ಸಂಚರಿಸಿದೆ ಎಂದು ಭಕ್ತರು ಹೇಳುತ್ತಾರೆ. ಕೆಲ ಭಕ್ತರು ಗುಂಪು ಗುಂಪಾಗಿ ಹೋಗುತ್ತಿದ್ದಾಗ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದ ಬಳಿಯ ನಾಮಲಗಣಿ ಬಳಿ ಮರಗಳ ನಡುವೆ ಚಿರತೆ ಕಂಡ ಭಕ್ತರು ಭಯಭೀತರಾಗಿ ಓಡಿದರು. ಸ್ವಲ್ಪ ಸಮಯದ ನಂತರ ಕರಡಿಯೂ ಕಾಣಿಸಿಕೊಂಡಿದೆ. ಗಾಬರಿಗೊಂಡ ಭಕ್ತರು ಈ ವಿಷಯವನ್ನು ಟಿಟಿಡಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಟಿಟಿಡಿ ಹಾಗೂ ಅರಣ್ಯಾಧಿಕಾರಿಗಳ ತಂಡ ಕೂಡಲೇ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸುತ್ತಿದೆ.

ತಿರುಪತಿ, ಆಗಸ್ಟ್​ 17: ತಮ್ಮ ಆರಾಧ್ಯದೈವ ತಿಮ್ಮಪ್ಪನ (tirupati) ದರ್ಶನಕ್ಕಾಗಿ ತಿರುಮಲ ಬೆಟ್ಟದಲ್ಲಿ ಕಾಲ್ನಡಿಗೆಯಲ್ಲಿ ತೆರಳಲು ಭಕ್ತರು ಗಡಗಡ ನಡುಗುತ್ತಿದ್ದಾರೆ. ಚಿರತೆಗಳ ಭಯ ಭಕ್ತರನ್ನು ಕಾಡುತ್ತಿದೆ. ಮೆಟ್ಟಿಲು ಹತ್ತಿ ಮಗುವನ್ನು ಕೊಂದ ಚಿರತೆ ಕೊನೆಗೂ ಸಿಕ್ಕಿಬಿದ್ದಿದ್ದು, ಇದೀಗ ಮತ್ತೊಂದು ಚಿರತೆ (leopard) ಹಾಗೂ ಕರಡಿ (bear) ಕಾಣಿಸಿಕೊಂಡಿರುವುದರಿಂದ ತಿರುಮಲದಲ್ಲಿ ಆತಂಕ ಮೂಡಿದೆ. ನಿನ್ನೆ ಬುಧವಾರ ಬೆಳಗ್ಗೆ ಪಾದಚಾರಿ ಮಾರ್ಗದ ಬಳಿ ಚಿರತೆಯೊಂದು ಸಂಚರಿಸಿದೆ ಎಂದು ಭಕ್ತರು ಹೇಳುತ್ತಾರೆ. ಕೆಲ ಭಕ್ತರು ಗುಂಪು ಗುಂಪಾಗಿ ಹೋಗುತ್ತಿದ್ದಾಗ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದ ಬಳಿಯ ನಾಮಲಗಣಿ ಬಳಿ (alipiri steps) ಮರಗಳ ನಡುವೆ ಚಿರತೆ ಕಂಡ ಭಕ್ತರು ಭಯಭೀತರಾಗಿ ಓಡಿದರು.

ಸ್ವಲ್ಪ ಸಮಯದ ನಂತರ ಕರಡಿಯೂ ಕಾಣಿಸಿಕೊಂಡಿದೆ. ಗಾಬರಿಗೊಂಡ ಭಕ್ತರು ಈ ವಿಷಯವನ್ನು ಟಿಟಿಡಿ (ttd) ಅಧಿಕಾರಿಗಳಿಗೆ ತಿಳಿಸಿದ್ದಾರೆ. ಟಿಟಿಡಿ ಹಾಗೂ ಅರಣ್ಯಾಧಿಕಾರಿಗಳ ತಂಡ ಕೂಡಲೇ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ತಿರುಮಲ ಅಲಿಪಿರಿ ಮಾರ್ಗದಲ್ಲಿ ಮತ್ತೆ ತೀವ್ರ ಆತಂಕ ಮತ್ತು ಉದ್ವಿಗ್ನತೆ ಉಂಟಾಗಿದೆ. ಕಾಡು ಪ್ರಾಣಿಗಳ ದಾಂಗುಡಿಯಿಟ್ಟಿ ಸರಣಿ ಘಟನೆಗಳಿಂದ ಭಕ್ತರು ಆತಂಕಗೊಂಡಿದ್ದಾರೆ.

ಇದನ್ನೂ ಓದಿ: ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು, ಮೊದಲು ಮುಸ್ಲಿಮರು ಹಿಂದೂಗಳಾಗಿದ್ದರು: ಗುಲಾಂ ನಬಿ ಆಜಾದ್

ಈ ನಡುವೆ ತಿರುಮಲ ಮೆಟ್ಟಿಲುಗಳ ಆಸುಪಾಸಿನಲ್ಲಿ ಮೂರು ಚಿರತೆಗಳು ಓಡಾಡುತ್ತಿರುವುದನ್ನು ಟಿಟಿಡಿ ಬಹಿರಂಗಪಡಿಸಿದೆ. ಅವನ್ನು ಹಿಡಿಯಲು ಅರಣ್ಯಾಧಿಕಾರಿಗಳು ಹಾಗೂ ಟಿಟಿಡಿ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ ಎಂದು ಸಿಇಒ ಧರ್ಮಾ ರೆಡ್ಡಿ ತಿಳಿಸಿದ್ದಾರೆ.

ತಿರುಮಲ ಮೆಟ್ಟಿಲುಗಳ ಮೇಲೆ ನಿರ್ಬಂಧಗಳು ಮುಂದುವರಿದಿದ್ದು, ಎಲ್ಲಾ ಭಕ್ತರು ಸಹಕರಿಸುವಂತೆ ಕೋರಲಾಗಿದೆ. ಚಿರತೆ ಹಿಡಿಯಲು ಕ್ರಮ ಕೈಗೊಂಡಿದ್ದು, ಅರಣ್ಯಾಧಿಕಾರಿಗಳಿಗೆ ಸಹಕಾರ ನೀಡುವುದಾಗಿ ಟಿಟಿಡಿ ತಿಳಿಸಿದೆ. ಮೂರು ದಿನಗಳ ಹಿಂದೆ ತಿರುಮಲ ಮೆಟ್ಟಿಲುಗಳ ಮೇಲಿರುವ ಶ್ರೀಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ಬಳಿ ನೆಲ್ಲೂರು ಜಿಲ್ಲೆಯ ಲಕ್ಷಿತಾ ಎಂಬ ಬಾಲಕಿಯನ್ನು ಚಿರತೆಯೊಂದು ಕೊಂದು ಹಾಕಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us