AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾರಿತಪ್ಪಿಸುವ ಜಾಹೀರಾತು ಪ್ರಕರಣ: ಸುಪ್ರೀಂಕೋರ್ಟ್‌ ಮುಂದೆ ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್

ಮಾರ್ಚ್ 19 ರಂದು, ಪ್ರಕರಣದಲ್ಲಿ ನೀಡಲಾದ ನೋಟಿಸ್‌ಗೆ ಕಂಪನಿಯು ಪ್ರತಿಕ್ರಿಯಿಸಲು ವಿಫಲವಾದ ಕಾರಣಕ್ಕೆ ವಿನಾಯಿತಿ ನೀಡಿದ ನಂತರ ಸುಪ್ರೀಂ ಕೋರ್ಟ್ ರಾಮ್‌ದೇವ್ ಮತ್ತು ಬಾಲಕೃಷ್ಣ ಅವರಿಗೆ ಹಾಜರಾಗುವಂತೆ ಸೂಚಿಸಿತ್ತು. ರೋಗಗಳಿಗೆ ಚಿಕಿತ್ಸೆ ನೀಡುವ ಉತ್ಪನ್ನಗಳ ಜಾಹೀರಾತುಗಳನ್ನು ಪ್ರಕಟಿಸುವುದಿಲ್ಲ ಎಂಬ ತನ್ನ ಒಪ್ಪಂದವನ್ನು ಪಾಲಿಸದ ಕಂಪನಿ ವಿರುದ್ಧ ನ್ಯಾಯಾಲಯವು ತೀವ್ರವಾಗಿ ಟೀಕಿಸಿದೆ.

ದಾರಿತಪ್ಪಿಸುವ ಜಾಹೀರಾತು ಪ್ರಕರಣ: ಸುಪ್ರೀಂಕೋರ್ಟ್‌ ಮುಂದೆ ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್
ಬಾಬಾ ರಾಮ್ ದೇವ್
ರಶ್ಮಿ ಕಲ್ಲಕಟ್ಟ
|

Updated on:Apr 02, 2024 | 12:14 PM

Share

ದೆಹಲಿ ಏಪ್ರಿಲ್  02: ದಾರಿತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ಸುಪ್ರೀಂಕೋರ್ಟ್ (Supreme Court) ಆದೇಶವನ್ನು ಪಾಲಿಸದಿದ್ದಕ್ಕಾಗಿ ಯೋಗ ಗುರು ಬಾಬಾ ರಾಮದೇವ್ (Yoga Guru Baba Ramdev) ಮಂಗಳವಾರ ಬೇಷರತ್ ಕ್ಷಮೆಯಾಚಿಸಿದ್ದಾರೆ. ನಿಮ್ಮ ವಿರುದ್ಧ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆಯನ್ನು ಏಕೆ ಪ್ರಾರಂಭಿಸಬಾರದು ಎಂದು ಕೇಳಿ ಶೋಕಾಸ್ ನೋಟಿಸ್ ಜಾರಿ ಮಾಡಿದ ಕೆಲವು ದಿನಗಳ ನಂತರ ಬಾಬಾ ರಾಮ್‌ದೇವ್ ಮತ್ತು ಪತಂಜಲಿ ಆಯುರ್ವೇದ್‌ನ (Patanjali Ayurved) ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರು ಇಂದು ಸುಪ್ರೀಂಕೋರ್ಟ್‌ಗೆ ಹಾಜರಾಗಿದ್ದಾರೆ.

ಮಾರ್ಚ್ 19 ರಂದು, ಪ್ರಕರಣದಲ್ಲಿ ನೀಡಲಾದ ನೋಟಿಸ್‌ಗೆ ಕಂಪನಿಯು ಪ್ರತಿಕ್ರಿಯಿಸಲು ವಿಫಲವಾದ ಕಾರಣಕ್ಕೆ ವಿನಾಯಿತಿ ನೀಡಿದ ನಂತರ ಸುಪ್ರೀಂ ಕೋರ್ಟ್ ರಾಮ್‌ದೇವ್ ಮತ್ತು ಬಾಲಕೃಷ್ಣ ಅವರಿಗೆ ಹಾಜರಾಗುವಂತೆ ಸೂಚಿಸಿತ್ತು.  ಪತಂಜಲಿ ನೀಡಿದ ಜಾಹೀರಾತುಗಳು ರಾಮ್‌ದೇವ್ ಅವರ ಅನುಮೋದನೆಯನ್ನು ಪ್ರತಿಬಿಂಬಿಸುವುದರಿಂದ ಅವರಿಗೆ ಶೋಕಾಸ್ ನೋಟಿಸ್ ನೀಡುವುದು ಸೂಕ್ತವೆಂದು ಪರಿಗಣಿಸಲಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ರೋಗಗಳಿಗೆ ಚಿಕಿತ್ಸೆ ನೀಡುವ ಉತ್ಪನ್ನಗಳ ಜಾಹೀರಾತುಗಳನ್ನು ಪ್ರಕಟಿಸುವುದಿಲ್ಲ ಎಂಬ ತನ್ನ ಒಪ್ಪಂದವನ್ನು ಪಾಲಿಸದ ಕಂಪನಿಯನ್ನು ನ್ಯಾಯಾಲಯವು ತೀವ್ರವಾಗಿ ಟೀಕಿಸಿದೆ.

ನನ್ನ ಉಪಸ್ಥಿತಿಯನ್ನು ಗಮನಿಸಿ ಬೇಷರತ್ ಕ್ಷಮೆ ಕೇಳುತ್ತಿರುವುದಾಗಿ ರಾಮ್‌ದೇವ್ ವಕೀಲರು ನ್ಯಾಯಾಲಯದಲ್ಲಿ ಹೇಳಿದ್ದಾರೆ.  ಬಾಬಾ ರಾಮ್‌ದೇವ್ ಅವರು ನ್ಯಾಯಾಲಯಕ್ಕೆ ನೀಡಿದ ತಮ್ಮ ಕಂಪನಿಯ ಜವಾಬ್ದಾರಿಯನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಹೇಳಿದ್ದು “ನೀವು ಎಲ್ಲಾ ಆದೇಶಗಳನ್ನು ಉಲ್ಲಂಘಿಸಿದ್ದೀರಿ” ಎಂದು ಹೇಳಿದೆ.

“ಇದು ಸಂಪೂರ್ಣ ಅವಿಧೇಯತೆ. ಕೇವಲ ಸುಪ್ರೀಂಕೋರ್ಟ್ ಮಾತ್ರವಲ್ಲ, ದೇಶಾದ್ಯಂತ ನ್ಯಾಯಾಲಯಗಳು ನೀಡಿದ ಪ್ರತಿಯೊಂದು ಆದೇಶವನ್ನು ಗೌರವಿಸಬೇಕು” ಎಂದು ನ್ಯಾಯಾಲಯವು ಹೇಳಿದೆ.

ಪತಂಜಲಿ ಆಯುರ್ವೇದ್ ಲಿಮಿಟೆಡ್ ಯಾವುದೇ ಕಾನೂನನ್ನು ಉಲ್ಲಂಘಿಸುವುದಿಲ್ಲ ಎಂದು ನವೆಂಬರ್ 21, 2023 ರಂದು ಪ್ರಸ್ತುತ ಕಂಪನಿ ಸುಪ್ರೀಂಕೋರ್ಟ್‌ಗೆ ಭರವಸೆ ನೀಡಿತ್ತು, ಅದರಲ್ಲೂ ವಿಶೇಷವಾಗಿ ತಾನು ತಯಾರಿಸಿದ ಮತ್ತು ಮಾರಾಟ ಮಾಡುವ ಉತ್ಪನ್ನಗಳ ಜಾಹೀರಾತು ಅಥವಾ ಬ್ರ್ಯಾಂಡಿಂಗ್‌ಗೆ ಸಂಬಂಧಿಸಿದ ಕಾನೂನುಗಳನ್ನು ಉಲ್ಲಂಘಿಸುವುದಿಲ್ಲ ಎಂದು ಹೇಳಿತ್ತು.

ಇದನ್ನೂ ಓದಿ: ನಿಮ್ಮ ಹೆಂಡತಿಯರ ಸೀರೆ ಸುಡಬಲ್ಲಿರಾ?: ಬಾಂಗ್ಲಾದಲ್ಲಿ ಬಾಯ್ಕಾಟ್ ಇಂಡಿಯಾ ಅಭಿಯಾನ ವಿರುದ್ಧ ಪ್ರಧಾನಿ ಹಸೀನಾ ಗುಡುಗು

“ಔಷಧೀಯ ಪರಿಣಾಮಕಾರಿತ್ವವನ್ನು ಪ್ರತಿಪಾದಿಸುವ ಅಥವಾ ಯಾವುದೇ ಔಷಧದ ವ್ಯವಸ್ಥೆಯ ವಿರುದ್ಧ ಯಾವುದೇ ಪ್ರಾಸಂಗಿಕ ಹೇಳಿಕೆಗಳನ್ನು ಯಾವುದೇ ರೂಪದಲ್ಲಿ ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗುವುದಿಲ್ಲ” ಎಂದು ನ್ಯಾಯಮೂರ್ತಿ ಹಿಮಾ ಕೊಹ್ಲಿ ನೇತೃತ್ವದ ಪೀಠಕ್ಕೆ ಕಂಪನಿ ಭರವಸೆ ನೀಡಿತ್ತು.

ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಮತ್ತು ಆಧುನಿಕ ಔಷಧ ಪದ್ಧತಿಯ ವಿರುದ್ಧ ರಾಮ್‌ದೇವ್ ಅವರು ಅಭಿಯಾನ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:12 pm, Tue, 2 April 24

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು