AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ವಿರುದ್ಧ ದಾಖಲಾದ ಎಫ್​ಐಆರ್​​ಗಳ ವಿರುದ್ಧ ಸುಪ್ರಿಂಕೋರ್ಟ್​​ ಮೆಟ್ಟಿಲೇರಿದ ಯೋಗ ಗುರು ಬಾಬಾ ರಾಮ್​ದೇವ್​..

ಭಾರತೀಯ ವೈದ್ಯಕೀಯ ಸಂಘ ನೀಡಿದ ದೂರಿನ ಅನ್ವಯ ಬಿಹಾರ ಮತ್ತು ಛತ್ತೀಸ್​ಗಢಗಳಲ್ಲಿ ಬಾಬಾ ರಾಮ್​ದೇವ್​ ವಿರುದ್ಧ ಪ್ರಕರಣ ದಾಖಲಾಗಿದೆ. ಅಲೋಪಥಿಕ್​ ವೈದ್ಯಕೀಯ ಪದ್ಧತಿಗೆ ಬಾಬಾ ರಾಮ್​ ದೇವ್​ ಅಗೌರವ ತೋರಿಸಿದ್ದಾರೆ ಎಂದು ವೈದ್ಯರು ಆರೋಪಿಸಿದ್ದಾರೆ.

ತಮ್ಮ ವಿರುದ್ಧ ದಾಖಲಾದ ಎಫ್​ಐಆರ್​​ಗಳ ವಿರುದ್ಧ ಸುಪ್ರಿಂಕೋರ್ಟ್​​ ಮೆಟ್ಟಿಲೇರಿದ ಯೋಗ ಗುರು ಬಾಬಾ ರಾಮ್​ದೇವ್​..
ಯೋಗ ಗುರು ಬಾಬಾ ರಾಮ್​ದೇವ್​
TV9 Web
| Edited By: |

Updated on: Jun 23, 2021 | 4:30 PM

Share

ಅಲೋಪಥಿ ವೈದ್ಯಕೀಯ ಪದ್ಧತಿಯನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಯೋಗ ಗುರು ಬಾಬಾ ರಾಮ್​ ದೇವ್ ವಿರುದ್ಧ ಹಲವು ಅಲೋಪಥಿಕ್​ ವೈದ್ಯರು, ಸಂಘಟನೆಗಳು ನೀಡಿದ ದೂರಿನ ಅನ್ವಯ ವಿವಿಧ ರಾಜ್ಯಗಳಲ್ಲಿ ಎಫ್​ಐಆರ್ ದಾಖಲಾಗಿದೆ. ಹೀಗೆ ತಮ್ಮ ವಿರುದ್ಧ ದಾಖಲಾದ ಎಫ್​​ಐಆರ್​​ಗಳ ವಿರುದ್ಧ ಬಾಬಾ ರಾಮ್​ದೇವ್​ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾರೆ. ಯೋಗ ಗುರು ಬಾಬಾ ರಾಮ್​ದೇವ್ ಅಲೋಪಥಿಕ್​ ವೈದ್ಯಕೀಯ ಪದ್ಧತಿ ಮೂರ್ಖ ಪದ್ಧತಿ. ಇದರಿಂದ ಕೊವಿಡ್ 19 ಸೋಂಕು ಗುಣಪಡಿಸಲು ಸಾಧ್ಯವಿಲ್ಲ ಎಂದು ಹೇಳಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಅದನ್ನು ನೋಡಿದ ಅಲೋಪಥಿಕ ವೈದ್ಯರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ಬಾಬಾ ರಾಮ್​ದೇವ್​ ವಿರುದ್ಧ ಪ್ರತಿಭಟನೆಯನ್ನೂ ನಡೆಸಿದ್ದವು. ಹಾಗೇ ಪೊಲೀಸರಿಗೆ ದೂರನ್ನೂ ನೀಡಿದ್ದವು.

ಭಾರತೀಯ ವೈದ್ಯಕೀಯ ಸಂಘ ನೀಡಿದ ದೂರಿನ ಅನ್ವಯ ಬಿಹಾರ ಮತ್ತು ಛತ್ತೀಸ್​ಗಢಗಳಲ್ಲಿ ಬಾಬಾ ರಾಮ್​ದೇವ್​ ವಿರುದ್ಧ ಪ್ರಕರಣ ದಾಖಲಾಗಿದೆ. ಅಲೋಪಥಿಕ್​ ವೈದ್ಯಕೀಯ ಪದ್ಧತಿಗೆ ಬಾಬಾ ರಾಮ್​ ದೇವ್​ ಅಗೌರವ ತೋರಿಸಿದ್ದಾರೆ. ಅಲ್ಲದೆ, ಜನರಿಗೆ ತಪ್ಪು ಸಂದೇಶ ರವಾನೆ ಮಾಡುತ್ತಿದ್ದಾರೆ ಎಂದು ಐಎಂಎ ದೂರಿನಲ್ಲಿ ಉಲ್ಲೇಖಿಸಿದೆ.

ಇದೀಗ ಬೇರೆಬೇರೆ ರಾಜ್ಯಗಳಲ್ಲಿ ದಾಖಲಾಗಿರುವ ಎಫ್​ಐಆರ್​ಗಳನ್ನೆಲ್ಲ ಕ್ಲಬ್​ (ಒಂದಾಗಿಸು) ಮಾಡಬೇಕು ಮತ್ತು ಅದನ್ನ ದೆಹಲಿಗೆ ವರ್ಗಾವಣೆ ಮಾಡಬೇಕು ಎಂದು ಸುಪ್ರೀಂಕೋರ್ಟ್​ಗೆ ಮನವಿ ಸಲ್ಲಿಸಿದ್ದಾರೆ. ಹಾಗೇ, ಈ ಎಫ್​ಐಆರ್​ಗಳ ವಿಚಾರಣೆಯಿಂದ ಮಧ್ಯಂತರ ತಡೆ ನೀಡಬೇಕು ಎಂದೂ ಕೇಳಿಕೊಂಡಿದ್ದಾರೆ. ಇನ್ನು ಬಾಬಾ ರಾಮ್​ದೇವ್​ ವಿರುದ್ಧ ಸೆಕ್ಷನ್​ 188, 504, 269 ಇತ್ಯಾದಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Simply Explained : ಏನಿದು ಡೆಲ್ಟಾ.. ಡೆಲ್ಟಾ ಪ್ಲಸ್ ವೈರಸ್, 3rd Wave ಹೇಗಿರುತ್ತೆ: ?

Follow Us
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ
ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ
ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯ ಬೀಳಿಸಿ ಸರ ಕದ್ದ ಕಳ್ಳ
ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯ ಬೀಳಿಸಿ ಸರ ಕದ್ದ ಕಳ್ಳ