AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ವಿರುದ್ಧ ದಾಖಲಾದ ಎಫ್​ಐಆರ್​​ಗಳ ವಿರುದ್ಧ ಸುಪ್ರಿಂಕೋರ್ಟ್​​ ಮೆಟ್ಟಿಲೇರಿದ ಯೋಗ ಗುರು ಬಾಬಾ ರಾಮ್​ದೇವ್​..

ಭಾರತೀಯ ವೈದ್ಯಕೀಯ ಸಂಘ ನೀಡಿದ ದೂರಿನ ಅನ್ವಯ ಬಿಹಾರ ಮತ್ತು ಛತ್ತೀಸ್​ಗಢಗಳಲ್ಲಿ ಬಾಬಾ ರಾಮ್​ದೇವ್​ ವಿರುದ್ಧ ಪ್ರಕರಣ ದಾಖಲಾಗಿದೆ. ಅಲೋಪಥಿಕ್​ ವೈದ್ಯಕೀಯ ಪದ್ಧತಿಗೆ ಬಾಬಾ ರಾಮ್​ ದೇವ್​ ಅಗೌರವ ತೋರಿಸಿದ್ದಾರೆ ಎಂದು ವೈದ್ಯರು ಆರೋಪಿಸಿದ್ದಾರೆ.

ತಮ್ಮ ವಿರುದ್ಧ ದಾಖಲಾದ ಎಫ್​ಐಆರ್​​ಗಳ ವಿರುದ್ಧ ಸುಪ್ರಿಂಕೋರ್ಟ್​​ ಮೆಟ್ಟಿಲೇರಿದ ಯೋಗ ಗುರು ಬಾಬಾ ರಾಮ್​ದೇವ್​..
ಯೋಗ ಗುರು ಬಾಬಾ ರಾಮ್​ದೇವ್​
TV9 Web
| Edited By: |

Updated on: Jun 23, 2021 | 4:30 PM

Share

ಅಲೋಪಥಿ ವೈದ್ಯಕೀಯ ಪದ್ಧತಿಯನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಯೋಗ ಗುರು ಬಾಬಾ ರಾಮ್​ ದೇವ್ ವಿರುದ್ಧ ಹಲವು ಅಲೋಪಥಿಕ್​ ವೈದ್ಯರು, ಸಂಘಟನೆಗಳು ನೀಡಿದ ದೂರಿನ ಅನ್ವಯ ವಿವಿಧ ರಾಜ್ಯಗಳಲ್ಲಿ ಎಫ್​ಐಆರ್ ದಾಖಲಾಗಿದೆ. ಹೀಗೆ ತಮ್ಮ ವಿರುದ್ಧ ದಾಖಲಾದ ಎಫ್​​ಐಆರ್​​ಗಳ ವಿರುದ್ಧ ಬಾಬಾ ರಾಮ್​ದೇವ್​ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾರೆ. ಯೋಗ ಗುರು ಬಾಬಾ ರಾಮ್​ದೇವ್ ಅಲೋಪಥಿಕ್​ ವೈದ್ಯಕೀಯ ಪದ್ಧತಿ ಮೂರ್ಖ ಪದ್ಧತಿ. ಇದರಿಂದ ಕೊವಿಡ್ 19 ಸೋಂಕು ಗುಣಪಡಿಸಲು ಸಾಧ್ಯವಿಲ್ಲ ಎಂದು ಹೇಳಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಅದನ್ನು ನೋಡಿದ ಅಲೋಪಥಿಕ ವೈದ್ಯರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ಬಾಬಾ ರಾಮ್​ದೇವ್​ ವಿರುದ್ಧ ಪ್ರತಿಭಟನೆಯನ್ನೂ ನಡೆಸಿದ್ದವು. ಹಾಗೇ ಪೊಲೀಸರಿಗೆ ದೂರನ್ನೂ ನೀಡಿದ್ದವು.

ಭಾರತೀಯ ವೈದ್ಯಕೀಯ ಸಂಘ ನೀಡಿದ ದೂರಿನ ಅನ್ವಯ ಬಿಹಾರ ಮತ್ತು ಛತ್ತೀಸ್​ಗಢಗಳಲ್ಲಿ ಬಾಬಾ ರಾಮ್​ದೇವ್​ ವಿರುದ್ಧ ಪ್ರಕರಣ ದಾಖಲಾಗಿದೆ. ಅಲೋಪಥಿಕ್​ ವೈದ್ಯಕೀಯ ಪದ್ಧತಿಗೆ ಬಾಬಾ ರಾಮ್​ ದೇವ್​ ಅಗೌರವ ತೋರಿಸಿದ್ದಾರೆ. ಅಲ್ಲದೆ, ಜನರಿಗೆ ತಪ್ಪು ಸಂದೇಶ ರವಾನೆ ಮಾಡುತ್ತಿದ್ದಾರೆ ಎಂದು ಐಎಂಎ ದೂರಿನಲ್ಲಿ ಉಲ್ಲೇಖಿಸಿದೆ.

ಇದೀಗ ಬೇರೆಬೇರೆ ರಾಜ್ಯಗಳಲ್ಲಿ ದಾಖಲಾಗಿರುವ ಎಫ್​ಐಆರ್​ಗಳನ್ನೆಲ್ಲ ಕ್ಲಬ್​ (ಒಂದಾಗಿಸು) ಮಾಡಬೇಕು ಮತ್ತು ಅದನ್ನ ದೆಹಲಿಗೆ ವರ್ಗಾವಣೆ ಮಾಡಬೇಕು ಎಂದು ಸುಪ್ರೀಂಕೋರ್ಟ್​ಗೆ ಮನವಿ ಸಲ್ಲಿಸಿದ್ದಾರೆ. ಹಾಗೇ, ಈ ಎಫ್​ಐಆರ್​ಗಳ ವಿಚಾರಣೆಯಿಂದ ಮಧ್ಯಂತರ ತಡೆ ನೀಡಬೇಕು ಎಂದೂ ಕೇಳಿಕೊಂಡಿದ್ದಾರೆ. ಇನ್ನು ಬಾಬಾ ರಾಮ್​ದೇವ್​ ವಿರುದ್ಧ ಸೆಕ್ಷನ್​ 188, 504, 269 ಇತ್ಯಾದಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Simply Explained : ಏನಿದು ಡೆಲ್ಟಾ.. ಡೆಲ್ಟಾ ಪ್ಲಸ್ ವೈರಸ್, 3rd Wave ಹೇಗಿರುತ್ತೆ: ?

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!