AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ವಿರುದ್ಧ ದಾಖಲಾದ ಎಫ್​ಐಆರ್​​ಗಳ ವಿರುದ್ಧ ಸುಪ್ರಿಂಕೋರ್ಟ್​​ ಮೆಟ್ಟಿಲೇರಿದ ಯೋಗ ಗುರು ಬಾಬಾ ರಾಮ್​ದೇವ್​..

ಭಾರತೀಯ ವೈದ್ಯಕೀಯ ಸಂಘ ನೀಡಿದ ದೂರಿನ ಅನ್ವಯ ಬಿಹಾರ ಮತ್ತು ಛತ್ತೀಸ್​ಗಢಗಳಲ್ಲಿ ಬಾಬಾ ರಾಮ್​ದೇವ್​ ವಿರುದ್ಧ ಪ್ರಕರಣ ದಾಖಲಾಗಿದೆ. ಅಲೋಪಥಿಕ್​ ವೈದ್ಯಕೀಯ ಪದ್ಧತಿಗೆ ಬಾಬಾ ರಾಮ್​ ದೇವ್​ ಅಗೌರವ ತೋರಿಸಿದ್ದಾರೆ ಎಂದು ವೈದ್ಯರು ಆರೋಪಿಸಿದ್ದಾರೆ.

ತಮ್ಮ ವಿರುದ್ಧ ದಾಖಲಾದ ಎಫ್​ಐಆರ್​​ಗಳ ವಿರುದ್ಧ ಸುಪ್ರಿಂಕೋರ್ಟ್​​ ಮೆಟ್ಟಿಲೇರಿದ ಯೋಗ ಗುರು ಬಾಬಾ ರಾಮ್​ದೇವ್​..
ಯೋಗ ಗುರು ಬಾಬಾ ರಾಮ್​ದೇವ್​
TV9 Web
| Edited By: |

Updated on: Jun 23, 2021 | 4:30 PM

Share

ಅಲೋಪಥಿ ವೈದ್ಯಕೀಯ ಪದ್ಧತಿಯನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಯೋಗ ಗುರು ಬಾಬಾ ರಾಮ್​ ದೇವ್ ವಿರುದ್ಧ ಹಲವು ಅಲೋಪಥಿಕ್​ ವೈದ್ಯರು, ಸಂಘಟನೆಗಳು ನೀಡಿದ ದೂರಿನ ಅನ್ವಯ ವಿವಿಧ ರಾಜ್ಯಗಳಲ್ಲಿ ಎಫ್​ಐಆರ್ ದಾಖಲಾಗಿದೆ. ಹೀಗೆ ತಮ್ಮ ವಿರುದ್ಧ ದಾಖಲಾದ ಎಫ್​​ಐಆರ್​​ಗಳ ವಿರುದ್ಧ ಬಾಬಾ ರಾಮ್​ದೇವ್​ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾರೆ. ಯೋಗ ಗುರು ಬಾಬಾ ರಾಮ್​ದೇವ್ ಅಲೋಪಥಿಕ್​ ವೈದ್ಯಕೀಯ ಪದ್ಧತಿ ಮೂರ್ಖ ಪದ್ಧತಿ. ಇದರಿಂದ ಕೊವಿಡ್ 19 ಸೋಂಕು ಗುಣಪಡಿಸಲು ಸಾಧ್ಯವಿಲ್ಲ ಎಂದು ಹೇಳಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಅದನ್ನು ನೋಡಿದ ಅಲೋಪಥಿಕ ವೈದ್ಯರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ಬಾಬಾ ರಾಮ್​ದೇವ್​ ವಿರುದ್ಧ ಪ್ರತಿಭಟನೆಯನ್ನೂ ನಡೆಸಿದ್ದವು. ಹಾಗೇ ಪೊಲೀಸರಿಗೆ ದೂರನ್ನೂ ನೀಡಿದ್ದವು.

ಭಾರತೀಯ ವೈದ್ಯಕೀಯ ಸಂಘ ನೀಡಿದ ದೂರಿನ ಅನ್ವಯ ಬಿಹಾರ ಮತ್ತು ಛತ್ತೀಸ್​ಗಢಗಳಲ್ಲಿ ಬಾಬಾ ರಾಮ್​ದೇವ್​ ವಿರುದ್ಧ ಪ್ರಕರಣ ದಾಖಲಾಗಿದೆ. ಅಲೋಪಥಿಕ್​ ವೈದ್ಯಕೀಯ ಪದ್ಧತಿಗೆ ಬಾಬಾ ರಾಮ್​ ದೇವ್​ ಅಗೌರವ ತೋರಿಸಿದ್ದಾರೆ. ಅಲ್ಲದೆ, ಜನರಿಗೆ ತಪ್ಪು ಸಂದೇಶ ರವಾನೆ ಮಾಡುತ್ತಿದ್ದಾರೆ ಎಂದು ಐಎಂಎ ದೂರಿನಲ್ಲಿ ಉಲ್ಲೇಖಿಸಿದೆ.

ಇದೀಗ ಬೇರೆಬೇರೆ ರಾಜ್ಯಗಳಲ್ಲಿ ದಾಖಲಾಗಿರುವ ಎಫ್​ಐಆರ್​ಗಳನ್ನೆಲ್ಲ ಕ್ಲಬ್​ (ಒಂದಾಗಿಸು) ಮಾಡಬೇಕು ಮತ್ತು ಅದನ್ನ ದೆಹಲಿಗೆ ವರ್ಗಾವಣೆ ಮಾಡಬೇಕು ಎಂದು ಸುಪ್ರೀಂಕೋರ್ಟ್​ಗೆ ಮನವಿ ಸಲ್ಲಿಸಿದ್ದಾರೆ. ಹಾಗೇ, ಈ ಎಫ್​ಐಆರ್​ಗಳ ವಿಚಾರಣೆಯಿಂದ ಮಧ್ಯಂತರ ತಡೆ ನೀಡಬೇಕು ಎಂದೂ ಕೇಳಿಕೊಂಡಿದ್ದಾರೆ. ಇನ್ನು ಬಾಬಾ ರಾಮ್​ದೇವ್​ ವಿರುದ್ಧ ಸೆಕ್ಷನ್​ 188, 504, 269 ಇತ್ಯಾದಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Simply Explained : ಏನಿದು ಡೆಲ್ಟಾ.. ಡೆಲ್ಟಾ ಪ್ಲಸ್ ವೈರಸ್, 3rd Wave ಹೇಗಿರುತ್ತೆ: ?

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ