AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ವಿರುದ್ಧ ದಾಖಲಾದ ಎಫ್​ಐಆರ್​​ಗಳ ವಿರುದ್ಧ ಸುಪ್ರಿಂಕೋರ್ಟ್​​ ಮೆಟ್ಟಿಲೇರಿದ ಯೋಗ ಗುರು ಬಾಬಾ ರಾಮ್​ದೇವ್​..

ಭಾರತೀಯ ವೈದ್ಯಕೀಯ ಸಂಘ ನೀಡಿದ ದೂರಿನ ಅನ್ವಯ ಬಿಹಾರ ಮತ್ತು ಛತ್ತೀಸ್​ಗಢಗಳಲ್ಲಿ ಬಾಬಾ ರಾಮ್​ದೇವ್​ ವಿರುದ್ಧ ಪ್ರಕರಣ ದಾಖಲಾಗಿದೆ. ಅಲೋಪಥಿಕ್​ ವೈದ್ಯಕೀಯ ಪದ್ಧತಿಗೆ ಬಾಬಾ ರಾಮ್​ ದೇವ್​ ಅಗೌರವ ತೋರಿಸಿದ್ದಾರೆ ಎಂದು ವೈದ್ಯರು ಆರೋಪಿಸಿದ್ದಾರೆ.

ತಮ್ಮ ವಿರುದ್ಧ ದಾಖಲಾದ ಎಫ್​ಐಆರ್​​ಗಳ ವಿರುದ್ಧ ಸುಪ್ರಿಂಕೋರ್ಟ್​​ ಮೆಟ್ಟಿಲೇರಿದ ಯೋಗ ಗುರು ಬಾಬಾ ರಾಮ್​ದೇವ್​..
ಯೋಗ ಗುರು ಬಾಬಾ ರಾಮ್​ದೇವ್​
Follow us
TV9 Web
| Updated By: Lakshmi Hegde

Updated on: Jun 23, 2021 | 4:30 PM

ಅಲೋಪಥಿ ವೈದ್ಯಕೀಯ ಪದ್ಧತಿಯನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಯೋಗ ಗುರು ಬಾಬಾ ರಾಮ್​ ದೇವ್ ವಿರುದ್ಧ ಹಲವು ಅಲೋಪಥಿಕ್​ ವೈದ್ಯರು, ಸಂಘಟನೆಗಳು ನೀಡಿದ ದೂರಿನ ಅನ್ವಯ ವಿವಿಧ ರಾಜ್ಯಗಳಲ್ಲಿ ಎಫ್​ಐಆರ್ ದಾಖಲಾಗಿದೆ. ಹೀಗೆ ತಮ್ಮ ವಿರುದ್ಧ ದಾಖಲಾದ ಎಫ್​​ಐಆರ್​​ಗಳ ವಿರುದ್ಧ ಬಾಬಾ ರಾಮ್​ದೇವ್​ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾರೆ. ಯೋಗ ಗುರು ಬಾಬಾ ರಾಮ್​ದೇವ್ ಅಲೋಪಥಿಕ್​ ವೈದ್ಯಕೀಯ ಪದ್ಧತಿ ಮೂರ್ಖ ಪದ್ಧತಿ. ಇದರಿಂದ ಕೊವಿಡ್ 19 ಸೋಂಕು ಗುಣಪಡಿಸಲು ಸಾಧ್ಯವಿಲ್ಲ ಎಂದು ಹೇಳಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಅದನ್ನು ನೋಡಿದ ಅಲೋಪಥಿಕ ವೈದ್ಯರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ಬಾಬಾ ರಾಮ್​ದೇವ್​ ವಿರುದ್ಧ ಪ್ರತಿಭಟನೆಯನ್ನೂ ನಡೆಸಿದ್ದವು. ಹಾಗೇ ಪೊಲೀಸರಿಗೆ ದೂರನ್ನೂ ನೀಡಿದ್ದವು.

ಭಾರತೀಯ ವೈದ್ಯಕೀಯ ಸಂಘ ನೀಡಿದ ದೂರಿನ ಅನ್ವಯ ಬಿಹಾರ ಮತ್ತು ಛತ್ತೀಸ್​ಗಢಗಳಲ್ಲಿ ಬಾಬಾ ರಾಮ್​ದೇವ್​ ವಿರುದ್ಧ ಪ್ರಕರಣ ದಾಖಲಾಗಿದೆ. ಅಲೋಪಥಿಕ್​ ವೈದ್ಯಕೀಯ ಪದ್ಧತಿಗೆ ಬಾಬಾ ರಾಮ್​ ದೇವ್​ ಅಗೌರವ ತೋರಿಸಿದ್ದಾರೆ. ಅಲ್ಲದೆ, ಜನರಿಗೆ ತಪ್ಪು ಸಂದೇಶ ರವಾನೆ ಮಾಡುತ್ತಿದ್ದಾರೆ ಎಂದು ಐಎಂಎ ದೂರಿನಲ್ಲಿ ಉಲ್ಲೇಖಿಸಿದೆ.

ಇದೀಗ ಬೇರೆಬೇರೆ ರಾಜ್ಯಗಳಲ್ಲಿ ದಾಖಲಾಗಿರುವ ಎಫ್​ಐಆರ್​ಗಳನ್ನೆಲ್ಲ ಕ್ಲಬ್​ (ಒಂದಾಗಿಸು) ಮಾಡಬೇಕು ಮತ್ತು ಅದನ್ನ ದೆಹಲಿಗೆ ವರ್ಗಾವಣೆ ಮಾಡಬೇಕು ಎಂದು ಸುಪ್ರೀಂಕೋರ್ಟ್​ಗೆ ಮನವಿ ಸಲ್ಲಿಸಿದ್ದಾರೆ. ಹಾಗೇ, ಈ ಎಫ್​ಐಆರ್​ಗಳ ವಿಚಾರಣೆಯಿಂದ ಮಧ್ಯಂತರ ತಡೆ ನೀಡಬೇಕು ಎಂದೂ ಕೇಳಿಕೊಂಡಿದ್ದಾರೆ. ಇನ್ನು ಬಾಬಾ ರಾಮ್​ದೇವ್​ ವಿರುದ್ಧ ಸೆಕ್ಷನ್​ 188, 504, 269 ಇತ್ಯಾದಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Simply Explained : ಏನಿದು ಡೆಲ್ಟಾ.. ಡೆಲ್ಟಾ ಪ್ಲಸ್ ವೈರಸ್, 3rd Wave ಹೇಗಿರುತ್ತೆ: ?

ಮಿಥುನ ರಾಶಿಗೆ ಈ ವರ್ಷ ಗುರುಬಲ ಇರಲ್ಲ!
ಮಿಥುನ ರಾಶಿಗೆ ಈ ವರ್ಷ ಗುರುಬಲ ಇರಲ್ಲ!
ಗುರು ಸಂಚಾರದಿಂದ ವೃಷಭ ರಾಶಿಯ ಲಕ್​​​ ಬದಲಾಗಲಿದೆಯೇ?
ಗುರು ಸಂಚಾರದಿಂದ ವೃಷಭ ರಾಶಿಯ ಲಕ್​​​ ಬದಲಾಗಲಿದೆಯೇ?
ಸರ್ಕಾರದ ಸಾಧನಾ ಸಮಾವೇಶ ನನಗೆ ಸಂಬಂಧಿಸಿದ ವಿಷಯವಲ್ಲ: ಯಡಿಯೂರಪ್ಪ
ಸರ್ಕಾರದ ಸಾಧನಾ ಸಮಾವೇಶ ನನಗೆ ಸಂಬಂಧಿಸಿದ ವಿಷಯವಲ್ಲ: ಯಡಿಯೂರಪ್ಪ
ಗೃಹಲಕ್ಷ್ಮಿ ಹಣ ವರ್ಗಾವಣೆ ಯಾವಾಗ? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಗೃಹಲಕ್ಷ್ಮಿ ಹಣ ವರ್ಗಾವಣೆ ಯಾವಾಗ? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಮಿಥುನ ರಾಶಿಗೆ ಗುರು ಸಂಚಾರ; ಮೇಷ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಿಥುನ ರಾಶಿಗೆ ಗುರು ಸಂಚಾರ; ಮೇಷ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ‘10000 ಗವಾಸ್ಕರ್’ ಬೋರ್ಡ್ ರೂಂ ಉದ್ಘಾಟನೆ
ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ‘10000 ಗವಾಸ್ಕರ್’ ಬೋರ್ಡ್ ರೂಂ ಉದ್ಘಾಟನೆ
ತಿರಂಗ ಯಾತ್ರೆಯಲ್ಲಿ ಅಸಂಖ್ಯಾತ ಬಿಜೆಪಿ ಕಾರ್ಯಕರ್ತರು, ಮತ್ತು ಶಾಲಾಮಕ್ಕಳು
ತಿರಂಗ ಯಾತ್ರೆಯಲ್ಲಿ ಅಸಂಖ್ಯಾತ ಬಿಜೆಪಿ ಕಾರ್ಯಕರ್ತರು, ಮತ್ತು ಶಾಲಾಮಕ್ಕಳು
ಕಲಬುರಗಿಯಿಂದ ಕೇದಾರನಾಥಕ್ಕೆ 70 ರ ವ್ಯಕ್ತಿಯ ಪಾದಯಾತ್ರೆ: ವಿಡಿಯೋ ವೈರಲ್
ಕಲಬುರಗಿಯಿಂದ ಕೇದಾರನಾಥಕ್ಕೆ 70 ರ ವ್ಯಕ್ತಿಯ ಪಾದಯಾತ್ರೆ: ವಿಡಿಯೋ ವೈರಲ್
ದಕ್ಷಿಣ ಕನ್ನಡ ಜಿಲ್ಲಿಗೆ ಹೆಚ್ಚು ಸಮಯ ನೀಡಲಾಗುತ್ತಿಲ್ಲ: ದಿನೇಶ್ ಗುಂಡೂರಾವ್
ದಕ್ಷಿಣ ಕನ್ನಡ ಜಿಲ್ಲಿಗೆ ಹೆಚ್ಚು ಸಮಯ ನೀಡಲಾಗುತ್ತಿಲ್ಲ: ದಿನೇಶ್ ಗುಂಡೂರಾವ್
ಸರ್ವಪಕ್ಷ ಸಭೆ ಕರೆಯಲಿದ್ದೇನೆ, ಪಾಲಿಕೆ ಎಲ್ಲರಿಗೂ ಸೇರಿದ್ದು: ಶಿವಕುಮಾರ್
ಸರ್ವಪಕ್ಷ ಸಭೆ ಕರೆಯಲಿದ್ದೇನೆ, ಪಾಲಿಕೆ ಎಲ್ಲರಿಗೂ ಸೇರಿದ್ದು: ಶಿವಕುಮಾರ್