AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ವಿರುದ್ಧ ದಾಖಲಾದ ಎಫ್​ಐಆರ್​​ಗಳ ವಿರುದ್ಧ ಸುಪ್ರಿಂಕೋರ್ಟ್​​ ಮೆಟ್ಟಿಲೇರಿದ ಯೋಗ ಗುರು ಬಾಬಾ ರಾಮ್​ದೇವ್​..

ಭಾರತೀಯ ವೈದ್ಯಕೀಯ ಸಂಘ ನೀಡಿದ ದೂರಿನ ಅನ್ವಯ ಬಿಹಾರ ಮತ್ತು ಛತ್ತೀಸ್​ಗಢಗಳಲ್ಲಿ ಬಾಬಾ ರಾಮ್​ದೇವ್​ ವಿರುದ್ಧ ಪ್ರಕರಣ ದಾಖಲಾಗಿದೆ. ಅಲೋಪಥಿಕ್​ ವೈದ್ಯಕೀಯ ಪದ್ಧತಿಗೆ ಬಾಬಾ ರಾಮ್​ ದೇವ್​ ಅಗೌರವ ತೋರಿಸಿದ್ದಾರೆ ಎಂದು ವೈದ್ಯರು ಆರೋಪಿಸಿದ್ದಾರೆ.

ತಮ್ಮ ವಿರುದ್ಧ ದಾಖಲಾದ ಎಫ್​ಐಆರ್​​ಗಳ ವಿರುದ್ಧ ಸುಪ್ರಿಂಕೋರ್ಟ್​​ ಮೆಟ್ಟಿಲೇರಿದ ಯೋಗ ಗುರು ಬಾಬಾ ರಾಮ್​ದೇವ್​..
ಯೋಗ ಗುರು ಬಾಬಾ ರಾಮ್​ದೇವ್​
TV9 Web
| Edited By: |

Updated on: Jun 23, 2021 | 4:30 PM

Share

ಅಲೋಪಥಿ ವೈದ್ಯಕೀಯ ಪದ್ಧತಿಯನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಯೋಗ ಗುರು ಬಾಬಾ ರಾಮ್​ ದೇವ್ ವಿರುದ್ಧ ಹಲವು ಅಲೋಪಥಿಕ್​ ವೈದ್ಯರು, ಸಂಘಟನೆಗಳು ನೀಡಿದ ದೂರಿನ ಅನ್ವಯ ವಿವಿಧ ರಾಜ್ಯಗಳಲ್ಲಿ ಎಫ್​ಐಆರ್ ದಾಖಲಾಗಿದೆ. ಹೀಗೆ ತಮ್ಮ ವಿರುದ್ಧ ದಾಖಲಾದ ಎಫ್​​ಐಆರ್​​ಗಳ ವಿರುದ್ಧ ಬಾಬಾ ರಾಮ್​ದೇವ್​ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾರೆ. ಯೋಗ ಗುರು ಬಾಬಾ ರಾಮ್​ದೇವ್ ಅಲೋಪಥಿಕ್​ ವೈದ್ಯಕೀಯ ಪದ್ಧತಿ ಮೂರ್ಖ ಪದ್ಧತಿ. ಇದರಿಂದ ಕೊವಿಡ್ 19 ಸೋಂಕು ಗುಣಪಡಿಸಲು ಸಾಧ್ಯವಿಲ್ಲ ಎಂದು ಹೇಳಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಅದನ್ನು ನೋಡಿದ ಅಲೋಪಥಿಕ ವೈದ್ಯರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ಬಾಬಾ ರಾಮ್​ದೇವ್​ ವಿರುದ್ಧ ಪ್ರತಿಭಟನೆಯನ್ನೂ ನಡೆಸಿದ್ದವು. ಹಾಗೇ ಪೊಲೀಸರಿಗೆ ದೂರನ್ನೂ ನೀಡಿದ್ದವು.

ಭಾರತೀಯ ವೈದ್ಯಕೀಯ ಸಂಘ ನೀಡಿದ ದೂರಿನ ಅನ್ವಯ ಬಿಹಾರ ಮತ್ತು ಛತ್ತೀಸ್​ಗಢಗಳಲ್ಲಿ ಬಾಬಾ ರಾಮ್​ದೇವ್​ ವಿರುದ್ಧ ಪ್ರಕರಣ ದಾಖಲಾಗಿದೆ. ಅಲೋಪಥಿಕ್​ ವೈದ್ಯಕೀಯ ಪದ್ಧತಿಗೆ ಬಾಬಾ ರಾಮ್​ ದೇವ್​ ಅಗೌರವ ತೋರಿಸಿದ್ದಾರೆ. ಅಲ್ಲದೆ, ಜನರಿಗೆ ತಪ್ಪು ಸಂದೇಶ ರವಾನೆ ಮಾಡುತ್ತಿದ್ದಾರೆ ಎಂದು ಐಎಂಎ ದೂರಿನಲ್ಲಿ ಉಲ್ಲೇಖಿಸಿದೆ.

ಇದೀಗ ಬೇರೆಬೇರೆ ರಾಜ್ಯಗಳಲ್ಲಿ ದಾಖಲಾಗಿರುವ ಎಫ್​ಐಆರ್​ಗಳನ್ನೆಲ್ಲ ಕ್ಲಬ್​ (ಒಂದಾಗಿಸು) ಮಾಡಬೇಕು ಮತ್ತು ಅದನ್ನ ದೆಹಲಿಗೆ ವರ್ಗಾವಣೆ ಮಾಡಬೇಕು ಎಂದು ಸುಪ್ರೀಂಕೋರ್ಟ್​ಗೆ ಮನವಿ ಸಲ್ಲಿಸಿದ್ದಾರೆ. ಹಾಗೇ, ಈ ಎಫ್​ಐಆರ್​ಗಳ ವಿಚಾರಣೆಯಿಂದ ಮಧ್ಯಂತರ ತಡೆ ನೀಡಬೇಕು ಎಂದೂ ಕೇಳಿಕೊಂಡಿದ್ದಾರೆ. ಇನ್ನು ಬಾಬಾ ರಾಮ್​ದೇವ್​ ವಿರುದ್ಧ ಸೆಕ್ಷನ್​ 188, 504, 269 ಇತ್ಯಾದಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Simply Explained : ಏನಿದು ಡೆಲ್ಟಾ.. ಡೆಲ್ಟಾ ಪ್ಲಸ್ ವೈರಸ್, 3rd Wave ಹೇಗಿರುತ್ತೆ: ?

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ