Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ವಿರುದ್ಧ ದಾಖಲಾದ ಎಫ್​ಐಆರ್​​ಗಳ ವಿರುದ್ಧ ಸುಪ್ರಿಂಕೋರ್ಟ್​​ ಮೆಟ್ಟಿಲೇರಿದ ಯೋಗ ಗುರು ಬಾಬಾ ರಾಮ್​ದೇವ್​..

ಭಾರತೀಯ ವೈದ್ಯಕೀಯ ಸಂಘ ನೀಡಿದ ದೂರಿನ ಅನ್ವಯ ಬಿಹಾರ ಮತ್ತು ಛತ್ತೀಸ್​ಗಢಗಳಲ್ಲಿ ಬಾಬಾ ರಾಮ್​ದೇವ್​ ವಿರುದ್ಧ ಪ್ರಕರಣ ದಾಖಲಾಗಿದೆ. ಅಲೋಪಥಿಕ್​ ವೈದ್ಯಕೀಯ ಪದ್ಧತಿಗೆ ಬಾಬಾ ರಾಮ್​ ದೇವ್​ ಅಗೌರವ ತೋರಿಸಿದ್ದಾರೆ ಎಂದು ವೈದ್ಯರು ಆರೋಪಿಸಿದ್ದಾರೆ.

ತಮ್ಮ ವಿರುದ್ಧ ದಾಖಲಾದ ಎಫ್​ಐಆರ್​​ಗಳ ವಿರುದ್ಧ ಸುಪ್ರಿಂಕೋರ್ಟ್​​ ಮೆಟ್ಟಿಲೇರಿದ ಯೋಗ ಗುರು ಬಾಬಾ ರಾಮ್​ದೇವ್​..
ಯೋಗ ಗುರು ಬಾಬಾ ರಾಮ್​ದೇವ್​
Follow us
TV9 Web
| Updated By: Lakshmi Hegde

Updated on: Jun 23, 2021 | 4:30 PM

ಅಲೋಪಥಿ ವೈದ್ಯಕೀಯ ಪದ್ಧತಿಯನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಯೋಗ ಗುರು ಬಾಬಾ ರಾಮ್​ ದೇವ್ ವಿರುದ್ಧ ಹಲವು ಅಲೋಪಥಿಕ್​ ವೈದ್ಯರು, ಸಂಘಟನೆಗಳು ನೀಡಿದ ದೂರಿನ ಅನ್ವಯ ವಿವಿಧ ರಾಜ್ಯಗಳಲ್ಲಿ ಎಫ್​ಐಆರ್ ದಾಖಲಾಗಿದೆ. ಹೀಗೆ ತಮ್ಮ ವಿರುದ್ಧ ದಾಖಲಾದ ಎಫ್​​ಐಆರ್​​ಗಳ ವಿರುದ್ಧ ಬಾಬಾ ರಾಮ್​ದೇವ್​ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾರೆ. ಯೋಗ ಗುರು ಬಾಬಾ ರಾಮ್​ದೇವ್ ಅಲೋಪಥಿಕ್​ ವೈದ್ಯಕೀಯ ಪದ್ಧತಿ ಮೂರ್ಖ ಪದ್ಧತಿ. ಇದರಿಂದ ಕೊವಿಡ್ 19 ಸೋಂಕು ಗುಣಪಡಿಸಲು ಸಾಧ್ಯವಿಲ್ಲ ಎಂದು ಹೇಳಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಅದನ್ನು ನೋಡಿದ ಅಲೋಪಥಿಕ ವೈದ್ಯರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ಬಾಬಾ ರಾಮ್​ದೇವ್​ ವಿರುದ್ಧ ಪ್ರತಿಭಟನೆಯನ್ನೂ ನಡೆಸಿದ್ದವು. ಹಾಗೇ ಪೊಲೀಸರಿಗೆ ದೂರನ್ನೂ ನೀಡಿದ್ದವು.

ಭಾರತೀಯ ವೈದ್ಯಕೀಯ ಸಂಘ ನೀಡಿದ ದೂರಿನ ಅನ್ವಯ ಬಿಹಾರ ಮತ್ತು ಛತ್ತೀಸ್​ಗಢಗಳಲ್ಲಿ ಬಾಬಾ ರಾಮ್​ದೇವ್​ ವಿರುದ್ಧ ಪ್ರಕರಣ ದಾಖಲಾಗಿದೆ. ಅಲೋಪಥಿಕ್​ ವೈದ್ಯಕೀಯ ಪದ್ಧತಿಗೆ ಬಾಬಾ ರಾಮ್​ ದೇವ್​ ಅಗೌರವ ತೋರಿಸಿದ್ದಾರೆ. ಅಲ್ಲದೆ, ಜನರಿಗೆ ತಪ್ಪು ಸಂದೇಶ ರವಾನೆ ಮಾಡುತ್ತಿದ್ದಾರೆ ಎಂದು ಐಎಂಎ ದೂರಿನಲ್ಲಿ ಉಲ್ಲೇಖಿಸಿದೆ.

ಇದೀಗ ಬೇರೆಬೇರೆ ರಾಜ್ಯಗಳಲ್ಲಿ ದಾಖಲಾಗಿರುವ ಎಫ್​ಐಆರ್​ಗಳನ್ನೆಲ್ಲ ಕ್ಲಬ್​ (ಒಂದಾಗಿಸು) ಮಾಡಬೇಕು ಮತ್ತು ಅದನ್ನ ದೆಹಲಿಗೆ ವರ್ಗಾವಣೆ ಮಾಡಬೇಕು ಎಂದು ಸುಪ್ರೀಂಕೋರ್ಟ್​ಗೆ ಮನವಿ ಸಲ್ಲಿಸಿದ್ದಾರೆ. ಹಾಗೇ, ಈ ಎಫ್​ಐಆರ್​ಗಳ ವಿಚಾರಣೆಯಿಂದ ಮಧ್ಯಂತರ ತಡೆ ನೀಡಬೇಕು ಎಂದೂ ಕೇಳಿಕೊಂಡಿದ್ದಾರೆ. ಇನ್ನು ಬಾಬಾ ರಾಮ್​ದೇವ್​ ವಿರುದ್ಧ ಸೆಕ್ಷನ್​ 188, 504, 269 ಇತ್ಯಾದಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Simply Explained : ಏನಿದು ಡೆಲ್ಟಾ.. ಡೆಲ್ಟಾ ಪ್ಲಸ್ ವೈರಸ್, 3rd Wave ಹೇಗಿರುತ್ತೆ: ?

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ