Ramdev ವೈದ್ಯರು ಭೂಮಿಯ ಮೇಲಿನ ದೇವದೂತರು, ಕೊವಿಡ್ ಲಸಿಕೆ ತೆಗೆದುಕೊಳ್ಳುವೆ: ಬಾಬಾ ರಾಮ್‌ದೇವ್

Yoga guru Ramdev: ಯಾವಾಗ ಲಸಿಕೆ ಪಡೆಯುತ್ತೀರಿ ಎಂದು ಕೇಳಿದಾಗ, "ಶೀಘ್ರದಲ್ಲೇ" ಎಂದು ಹೇಳಿದ ರಾಮ್‌ದೇವ್ ಉತ್ತಮ ಅಲೋಪತಿ ವೈದ್ಯರ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಅವರನ್ನು "ಭೂಮಿಯ ಮೇಲಿನ ದೇವದೂತರು" ಎಂದು ಬಣ್ಣಿಸಿದರು.

Ramdev ವೈದ್ಯರು ಭೂಮಿಯ ಮೇಲಿನ ದೇವದೂತರು, ಕೊವಿಡ್ ಲಸಿಕೆ ತೆಗೆದುಕೊಳ್ಳುವೆ: ಬಾಬಾ ರಾಮ್‌ದೇವ್
ಬಾಬ ರಾಮ್ ದೇವ್
Follow us
| Updated By: ರಶ್ಮಿ ಕಲ್ಲಕಟ್ಟ

Updated on:Jun 11, 2021 | 10:57 AM

ಡೆಹ್ರಾಡೂನ್: ಯೋಗ ಮತ್ತು ಆಯುರ್ವೇದದ ರಕ್ಷಣೆ ಇರುವುದರಿಂದ ತನಗೆ ಕೊವಿಡ್ ಲಸಿಕೆ ಅಗತ್ಯವಿಲ್ಲ ಎಂದು ಹೇಳಿದ್ದ ಯೋಗ ಗುರು ರಾಮ್‌ದೇವ್ ಈಗ ಯೂಟರ್ನ್ ಹೊಡೆದಿದ್ದಾರೆ. ಶೀಘ್ರದಲ್ಲೇ ಲಸಿಕೆ ಪಡೆಯುವುದಾಗಿ ಹೇಳಿದ ಬಾಬಾ ರಾಮ್‌ದೇವ್ ವೈದ್ಯರನ್ನು “ಭೂಮಿಯ ಮೇಲಿನ ದೇವರ ದೂತರು” ಎಂದು ಬಣ್ಣಿಸಿದರು.  ಕೊವಿಡ್ ವಿರುದ್ಧ ಅಲೋಪಥಿ ಔಷಧಿಗಳ ಪರಿಣಾಮಕಾರಿತ್ವದ ಕುರಿತು ಹೇಳಿಕೆ ನೀಡಿ ರಾಮ್‌ದೇವ್ ವಿವಾದವನ್ನು ಹುಟ್ಟುಹಾಕಿದ್ದರು .ಇದನ್ನು ವೈದ್ಯರ ಸಂಘಟನೆ ತೀವ್ರವಾಗಿ ಖಂಡಿಸಿತ್ತು.

ಈಗ, ಜೂನ್ 21 ರಿಂದ ಎಲ್ಲರಿಗೂ ಉಚಿತ ಲಸಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ಘೋಷಣೆಯನ್ನು ಸ್ವಾಗತಿಸಿದ ಮ್‌ದೇವ್ ಇದನ್ನು “ಐತಿಹಾಸಿಕ” ಹೆಜ್ಜೆ ಎಂದು ಬಣ್ಣಿಸಿದರು ಮತ್ತು ಲಸಿಕೆ ಪಡೆಯುವಂತೆ ಎಲ್ಲರಿಗೂ ಮನವಿ ಮಾಡಿದರು.

ಲಸಿಕೆಯ ಎರಡೂ ಡೋಸ್, ಯೋಗ ಮತ್ತು ಆಯುರ್ವೇದದ ರಕ್ಷಣೆ ಪಡೆಯಿರಿ. ಕೊವಿಡ್‌ನಿಂದ ಒಬ್ಬ ವ್ಯಕ್ತಿಯೂ ಸಾಯಬಾರದು ಎಂದು ಅವರು ನಿಮಗೆ ಅಂತಹ ರಕ್ಷಣೆಯ ಗುರಾಣಿಯನ್ನು ನೀಡುತ್ತಾರೆ” ಎಂದು ಅವರು ಹರಿದ್ವಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಾಮ್‌ದೇವ್ ಹೇಳಿದ್ದಾರೆ.

ಯಾವಾಗ ಲಸಿಕೆ ಪಡೆಯುತ್ತೀರಿ ಎಂದು ಕೇಳಿದಾಗ, “ಶೀಘ್ರದಲ್ಲೇ” ಎಂದು ಹೇಳಿದ ರಾಮ್‌ದೇವ್ ಉತ್ತಮ ಅಲೋಪತಿ ವೈದ್ಯರ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಅವರನ್ನು “ಭೂಮಿಯ ಮೇಲಿನ ದೇವದೂತರು” ಎಂದು ಬಣ್ಣಿಸಿದರು.

ಭಾರತೀಯ ವೈದ್ಯಕೀಯ ಸಂಘಟನೆ (ಐಎಂಎ) ಯೊಂದಿಗೆ ನಡೆಯುತ್ತಿರುವ ಜಟಾಪಟಿ ಬಗ್ಗೆ ಪ್ರತಿಕ್ರಿಯಿಸಿದ ಅವರು ನನಗೆ ಯಾವುದೇ ಸಂಘಟನೆಯೊಂದಿಗೆ ಯಾವುದೇ ದ್ವೇಷ ಇಲ್ಲ ಎಂದು ಹೇಳಿದರು. ಔಷಧಿಗಳ ಹೆಸರಿನಲ್ಲಿ ಜನರ ಶೋಷಣೆಗೆ ನಾನು ವಿರೋಧ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ ಯೋಗಗುರು.

ಅನೇಕ ವೈದ್ಯರು ಜೆನೆರಿಕ್ ಔಷಧಿಗಳ ಬದಲಿಗೆ ದುಬಾರಿ ಔಷಧಿಗಳನ್ನು ಶಿಫಾರಸು ಮಾಡುವ ಪ್ರವೃತ್ತಿಯಿಂದಾಗಿ ಪ್ರಧಾನ್ ಮಂತ್ರಿ ಔಷಧಿ ಕೇಂದ್ರಗಳನ್ನು ತೆರೆಯಬೇಕಾಗಿ ಬಂತು . ಈ ಔಷಧಿಗಳು ಹೆಚ್ಚು ಅಗ್ಗವಾಗಿದೆ ಎಂದು ಬಾಬಾ ರಾಮ್‌ದೇವ್ ಹೇಳಿದರು.

“ನಾನು ಯಾವುದೇ ಸಂಸ್ಥೆಯ ವಿರೋಧಿಯಲ್ಲ. ಒಳ್ಳೆಯ ವೈದ್ಯರು ನಿಜವಾದ ವರದಾನ. ಅವರು ಭೂಮಿಯ ಮೇಲಿನ ದೇವದೂತರು. ಆದರೆ ಕೆಲವು ವೈದ್ಯರು ತಪ್ಪು ಕೆಲಸಗಳನ್ನು ಮಾಡುತ್ತಾರೆ.  “ತುರ್ತು ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ ವಿಷಯಕ್ಕೆ ಬಂದಾಗ ಅಲೋಪತಿ ಉತ್ತಮವಾಗಿದೆ. ಇದರ ಬೇರೆ ಮಾತಿಲ್ಲ ಎಂದಿದ್ದಾರೆ ಯೋಗ ಗುರು ಬಾಬಾ ರಾಮ್‌ದೇವ್ .

ಇದನ್ನೂ ಓದಿ: Ramdev: ಅಲೋಪತಿ ವೈದ್ಯವನ್ನು ಸ್ಟುಪಿಡ್​ ಅಂದಿದ್ದ ಪತಂಜಲಿ ಬಾಬಾ ರಾಮದೇವ್​​ಗೆ ದೆಹಲಿ ಹೈಕೋರ್ಟ್​ ಸಮನ್ಸ್​

ಇದನ್ನೂ ಓದಿ: ಅಲೋಪಥಿಕ್​ ವೈದ್ಯಕೀಯ ಪದ್ಧತಿಗೆ ಅಗೌರವ ತೋರಿದ ಆರೋಪ; ಬಾಬಾ ರಾಮ್​ದೇವ್​ ವಿರುದ್ಧ ಎಫ್​ಐಆರ್​

Published On - 10:55 am, Fri, 11 June 21

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು