Ramdev ವೈದ್ಯರು ಭೂಮಿಯ ಮೇಲಿನ ದೇವದೂತರು, ಕೊವಿಡ್ ಲಸಿಕೆ ತೆಗೆದುಕೊಳ್ಳುವೆ: ಬಾಬಾ ರಾಮ್‌ದೇವ್

Yoga guru Ramdev: ಯಾವಾಗ ಲಸಿಕೆ ಪಡೆಯುತ್ತೀರಿ ಎಂದು ಕೇಳಿದಾಗ, "ಶೀಘ್ರದಲ್ಲೇ" ಎಂದು ಹೇಳಿದ ರಾಮ್‌ದೇವ್ ಉತ್ತಮ ಅಲೋಪತಿ ವೈದ್ಯರ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಅವರನ್ನು "ಭೂಮಿಯ ಮೇಲಿನ ದೇವದೂತರು" ಎಂದು ಬಣ್ಣಿಸಿದರು.

Ramdev ವೈದ್ಯರು ಭೂಮಿಯ ಮೇಲಿನ ದೇವದೂತರು, ಕೊವಿಡ್ ಲಸಿಕೆ ತೆಗೆದುಕೊಳ್ಳುವೆ: ಬಾಬಾ ರಾಮ್‌ದೇವ್
ಬಾಬ ರಾಮ್ ದೇವ್
Follow us
| Edited By: Rashmi Kallakatta

Updated on:Jun 11, 2021 | 10:57 AM

ಡೆಹ್ರಾಡೂನ್: ಯೋಗ ಮತ್ತು ಆಯುರ್ವೇದದ ರಕ್ಷಣೆ ಇರುವುದರಿಂದ ತನಗೆ ಕೊವಿಡ್ ಲಸಿಕೆ ಅಗತ್ಯವಿಲ್ಲ ಎಂದು ಹೇಳಿದ್ದ ಯೋಗ ಗುರು ರಾಮ್‌ದೇವ್ ಈಗ ಯೂಟರ್ನ್ ಹೊಡೆದಿದ್ದಾರೆ. ಶೀಘ್ರದಲ್ಲೇ ಲಸಿಕೆ ಪಡೆಯುವುದಾಗಿ ಹೇಳಿದ ಬಾಬಾ ರಾಮ್‌ದೇವ್ ವೈದ್ಯರನ್ನು “ಭೂಮಿಯ ಮೇಲಿನ ದೇವರ ದೂತರು” ಎಂದು ಬಣ್ಣಿಸಿದರು.  ಕೊವಿಡ್ ವಿರುದ್ಧ ಅಲೋಪಥಿ ಔಷಧಿಗಳ ಪರಿಣಾಮಕಾರಿತ್ವದ ಕುರಿತು ಹೇಳಿಕೆ ನೀಡಿ ರಾಮ್‌ದೇವ್ ವಿವಾದವನ್ನು ಹುಟ್ಟುಹಾಕಿದ್ದರು .ಇದನ್ನು ವೈದ್ಯರ ಸಂಘಟನೆ ತೀವ್ರವಾಗಿ ಖಂಡಿಸಿತ್ತು.

ಈಗ, ಜೂನ್ 21 ರಿಂದ ಎಲ್ಲರಿಗೂ ಉಚಿತ ಲಸಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ಘೋಷಣೆಯನ್ನು ಸ್ವಾಗತಿಸಿದ ಮ್‌ದೇವ್ ಇದನ್ನು “ಐತಿಹಾಸಿಕ” ಹೆಜ್ಜೆ ಎಂದು ಬಣ್ಣಿಸಿದರು ಮತ್ತು ಲಸಿಕೆ ಪಡೆಯುವಂತೆ ಎಲ್ಲರಿಗೂ ಮನವಿ ಮಾಡಿದರು.

ಲಸಿಕೆಯ ಎರಡೂ ಡೋಸ್, ಯೋಗ ಮತ್ತು ಆಯುರ್ವೇದದ ರಕ್ಷಣೆ ಪಡೆಯಿರಿ. ಕೊವಿಡ್‌ನಿಂದ ಒಬ್ಬ ವ್ಯಕ್ತಿಯೂ ಸಾಯಬಾರದು ಎಂದು ಅವರು ನಿಮಗೆ ಅಂತಹ ರಕ್ಷಣೆಯ ಗುರಾಣಿಯನ್ನು ನೀಡುತ್ತಾರೆ” ಎಂದು ಅವರು ಹರಿದ್ವಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಾಮ್‌ದೇವ್ ಹೇಳಿದ್ದಾರೆ.

ಯಾವಾಗ ಲಸಿಕೆ ಪಡೆಯುತ್ತೀರಿ ಎಂದು ಕೇಳಿದಾಗ, “ಶೀಘ್ರದಲ್ಲೇ” ಎಂದು ಹೇಳಿದ ರಾಮ್‌ದೇವ್ ಉತ್ತಮ ಅಲೋಪತಿ ವೈದ್ಯರ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಅವರನ್ನು “ಭೂಮಿಯ ಮೇಲಿನ ದೇವದೂತರು” ಎಂದು ಬಣ್ಣಿಸಿದರು.

ಭಾರತೀಯ ವೈದ್ಯಕೀಯ ಸಂಘಟನೆ (ಐಎಂಎ) ಯೊಂದಿಗೆ ನಡೆಯುತ್ತಿರುವ ಜಟಾಪಟಿ ಬಗ್ಗೆ ಪ್ರತಿಕ್ರಿಯಿಸಿದ ಅವರು ನನಗೆ ಯಾವುದೇ ಸಂಘಟನೆಯೊಂದಿಗೆ ಯಾವುದೇ ದ್ವೇಷ ಇಲ್ಲ ಎಂದು ಹೇಳಿದರು. ಔಷಧಿಗಳ ಹೆಸರಿನಲ್ಲಿ ಜನರ ಶೋಷಣೆಗೆ ನಾನು ವಿರೋಧ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ ಯೋಗಗುರು.

ಅನೇಕ ವೈದ್ಯರು ಜೆನೆರಿಕ್ ಔಷಧಿಗಳ ಬದಲಿಗೆ ದುಬಾರಿ ಔಷಧಿಗಳನ್ನು ಶಿಫಾರಸು ಮಾಡುವ ಪ್ರವೃತ್ತಿಯಿಂದಾಗಿ ಪ್ರಧಾನ್ ಮಂತ್ರಿ ಔಷಧಿ ಕೇಂದ್ರಗಳನ್ನು ತೆರೆಯಬೇಕಾಗಿ ಬಂತು . ಈ ಔಷಧಿಗಳು ಹೆಚ್ಚು ಅಗ್ಗವಾಗಿದೆ ಎಂದು ಬಾಬಾ ರಾಮ್‌ದೇವ್ ಹೇಳಿದರು.

“ನಾನು ಯಾವುದೇ ಸಂಸ್ಥೆಯ ವಿರೋಧಿಯಲ್ಲ. ಒಳ್ಳೆಯ ವೈದ್ಯರು ನಿಜವಾದ ವರದಾನ. ಅವರು ಭೂಮಿಯ ಮೇಲಿನ ದೇವದೂತರು. ಆದರೆ ಕೆಲವು ವೈದ್ಯರು ತಪ್ಪು ಕೆಲಸಗಳನ್ನು ಮಾಡುತ್ತಾರೆ.  “ತುರ್ತು ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ ವಿಷಯಕ್ಕೆ ಬಂದಾಗ ಅಲೋಪತಿ ಉತ್ತಮವಾಗಿದೆ. ಇದರ ಬೇರೆ ಮಾತಿಲ್ಲ ಎಂದಿದ್ದಾರೆ ಯೋಗ ಗುರು ಬಾಬಾ ರಾಮ್‌ದೇವ್ .

ಇದನ್ನೂ ಓದಿ: Ramdev: ಅಲೋಪತಿ ವೈದ್ಯವನ್ನು ಸ್ಟುಪಿಡ್​ ಅಂದಿದ್ದ ಪತಂಜಲಿ ಬಾಬಾ ರಾಮದೇವ್​​ಗೆ ದೆಹಲಿ ಹೈಕೋರ್ಟ್​ ಸಮನ್ಸ್​

ಇದನ್ನೂ ಓದಿ: ಅಲೋಪಥಿಕ್​ ವೈದ್ಯಕೀಯ ಪದ್ಧತಿಗೆ ಅಗೌರವ ತೋರಿದ ಆರೋಪ; ಬಾಬಾ ರಾಮ್​ದೇವ್​ ವಿರುದ್ಧ ಎಫ್​ಐಆರ್​

Published On - 10:55 am, Fri, 11 June 21

ತಾಜಾ ಸುದ್ದಿ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್