AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Yoga Day 2021: ಕೊರೊನಾ ವಿರುದ್ಧದ ಹೋರಾಟಕ್ಕೆ ಯೋಗದಿಂದ ಬಲ ಸಿಕ್ಕಿದೆ: ಪ್ರಧಾನಿ ನರೇಂದ್ರ ಮೋದಿ

PM Narendra Modi Speech: ಜಗತ್ತಿನ ಹಲವು ರಾಷ್ಟ್ರಗಳಿಗೆ ಯೋಗ ಅವರ ಪಾರಂಪರಿಕ ಆಚರಣೆಯೇನಲ್ಲ. ಕೊರೊನಾ ಸಂದರ್ಭದಲ್ಲಿ ಬೇರೆ ಚಿಂತೆಯಲ್ಲಿ ಸಿಲುಕಿದ ಜನ ಇದನ್ನು ಮರೆಯಬಹುದಿತ್ತು. ಆದರೆ, ಯೋಗದೆಡೆಗೆ ಜನರಿಗಿದ್ದ ಆಸಕ್ತಿ ಮತ್ತಷ್ಟು ಹೆಚ್ಚಾಗಿದೆ.

International Yoga Day 2021: ಕೊರೊನಾ ವಿರುದ್ಧದ ಹೋರಾಟಕ್ಕೆ ಯೋಗದಿಂದ ಬಲ ಸಿಕ್ಕಿದೆ: ಪ್ರಧಾನಿ ನರೇಂದ್ರ ಮೋದಿ
ನರೇಂದ್ರ ಮೋದಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Jun 21, 2021 | 7:30 AM

Share

ದೆಹಲಿ: ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ. ಜಗತ್ತಿನಾದ್ಯಂತ ಹಲವು ದೇಶಗಳು ಭಾರತೀಯ ಮೂಲದ ಯೋಗ ಪದ್ಧತಿಯನ್ನು ಪರಿಪಾಲಿಸುತ್ತಿದ್ದು, ಕೊರೊನಾ ಕಾಲದಲ್ಲಿ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಯೋಗಾಭ್ಯಾಸ ಮತ್ತಷ್ಟು ಮಹತ್ವ ಗಿಟ್ಟಿಸಿಕೊಂಡಿದೆ. ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿರುವ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಎಲ್ಲರಿಗೂ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಶುಭಾಶಯಗಳು ಎನ್ನುವ ಮೂಲಕ ಮಾತು ಆರಂಭಿಸಿ, ಕೊರೊನಾ ನಡುವೆ ಯೋಗ ಆಶಾಕಿರಣವಾಗಿದೆ. ಕೊರೊನಾ ವಿರುದ್ಧದ ಹೋರಾಟಕ್ಕೆ ಯೋಗದಿಂದ ಬಲ ಸಿಕ್ಕಿದೆ ಎಂದು ತಿಳಿಸಿದ್ದಾರೆ.

ವಿಶ್ವದ ಮೂಲೆಮೂಲೆಯಲ್ಲಿ ಲಕ್ಷಾಂತರ ಜನರು ಯೋಗಾಭ್ಯಾಸ ಮಾಡುತ್ತಿದ್ದಾರೆ. ವೈದ್ಯರೂ ಸಹ ಯೋಗವನ್ನು ಸ್ವಯಂ ಅಸ್ತ್ರವಾಗಿಸಿಕೊಂಡಿದ್ದು, ಕೊರೊನಾ ಸಂದರ್ಭದಲ್ಲಿ ಇದು ಪರಿಣಾಮಕಾರಿಯಾಗಿದೆ. ರೋಗಿಗಳ ಶೀಘ್ರ ಗುಣಮುಖಕ್ಕೂ ಯೋಗ ಸಹಕಾರಿಯಾಗಿದ್ದು, ಯೋಗದಿಂದ ಜನರ ಉತ್ಸಾಹ, ಪ್ರೀತಿಯೂ ಹೆಚ್ಚಾಗಿದೆ. ಇಂದು ಇದನ್ನು ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ ಎನ್ನುವುದು ಸಂತಸದ ಸಂಗತಿ ಎಂದು ಹೇಳಿದ್ದಾರೆ.

ತಿರುವಳ್ಳವರ್​ ಹೇಳಿರುವುದು ಯೋಗದಿಂದ ಸಾಬೀತಾಗಿದೆ. ನಮ್ಮ ಆರೋಗ್ಯ, ಉಸಿರಾಟ ವ್ಯವಸ್ಥೆಯಲ್ಲಿ ಸುಧಾರಣೆಯಾಗಲು ಯೋಗ ಸಹಕರಿಸುತ್ತದೆ ಎನ್ನುವುದು ಗೊತ್ತಾಗಿದೆ. ಹಲವು ಶಾಲೆಗಳು ಆನ್​ಲೈನ್ ತರಗತಿಗೆ ಯೋಗವನ್ನೂ ಸೇರಿಸಿವೆ. ಯೋಗದಿಂದ ದೈಹಿಕ ಆರೋಗ್ಯದ ಜತೆ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ. ಋಣಾತ್ಮಕ ಅಂಶಗಳ ವಿರುದ್ಧದ ಹೋರಾಟಕ್ಕೆ ಸಹಕಾರಿಯಾದ ಯೋಗ ನಮ್ಮೊಳಗಿನ ಆಂತರಿಕ ಬಲ ಹೆಚ್ಚಳ ಮಾಡುತ್ತದೆ. ನಮಗೆ ಸಂತಸದ ಜೀವನ ನೀಡುತ್ತದೆ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.

ಜಗತ್ತಿನ ಹಲವು ರಾಷ್ಟ್ರಗಳಿಗೆ ಯೋಗ ಅವರ ಪಾರಂಪರಿಕ ಆಚರಣೆಯೇನಲ್ಲ. ಕೊರೊನಾ ಸಂದರ್ಭದಲ್ಲಿ ಬೇರೆ ಚಿಂತೆಯಲ್ಲಿ ಸಿಲುಕಿದ ಜನ ಇದನ್ನು ಮರೆಯಬಹುದಿತ್ತು. ಆದರೆ, ಯೋಗದೆಡೆಗೆ ಜನರಿಗಿದ್ದ ಆಸಕ್ತಿ ಮತ್ತಷ್ಟು ಹೆಚ್ಚಾಗಿದೆ. ಕೊರೊನಾ ಈ ಜಗತ್ತಿನ ಬಾಗಿಲು ತಟ್ಟಿದಾಗ ಅದನ್ನು ತಡೆದು ನಿಲ್ಲಿಸಲು ಯಾರೂ ಸಂಪೂರ್ಣ ಸಿದ್ಧರಾಗಿರಲಿಲ್ಲ. ಅಂತಹ ಹೊತ್ತಿನಲ್ಲಿ ಯೋಗ ಆತ್ಮವಿಶ್ವಾಸ ವೃದ್ಧಿಸುವ ಬಹುಮುಖ್ಯ ಮಾಧ್ಯಮವಾಗಿ ಪರಿಣಮಿಸಿ ಎಲ್ಲರಲ್ಲೂ ಧೈರ್ಯ ಮೂಡಿಸಿತು ಎಂದು ಯೋಗದ ಕುರಿತಾಗಿ ಮಾತನಾಡಿದ್ದಾರೆ.

ಭಾರತದ ಋಷಿ ಮುನಿಗಳು ಆರೋಗ್ಯದ ಬಗ್ಗೆ ಮಾತನಾಡಿದಾಗ ಅದು ಕೇವಲ ದೈಹಿಕ ಆರೋಗ್ಯಕ್ಕೆ ಸೀಮಿತವಾಗುತ್ತಿರಲಿಲ್ಲ. ಸಂಪೂರ್ಣ ಆರೋಗ್ಯ ಎಂದರೆ ಮಾನಸಿಕ ಆರೋಗ್ಯವೂ ಸೇರಿಕೊಳ್ಳುತ್ತದೆ. ಇದನ್ನು ಸಾಧಿಸಲು ಯೋಗದಿಂದ ಸಾಧ್ಯವಿದೆ. ಇಂದು ಜಗತ್ತಿಗೆ M YOGA ಆ್ಯಪ್​ ಮೂಲಕ ಯೋಗದ ವಿವಿಧ ಭಂಗಿಗಳನ್ನು, ಅದರ ಮಹತ್ವಗಳನ್ನು ಹಲವು ಭಾಷೆಗಳಲ್ಲಿ ವಿಡಿಯೋ ಮೂಲಕ ಸಾರಲಾಗುತ್ತಿದೆ. ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಬಗ್ಗೆ ಭಾರತ ಪ್ರಸ್ತಾಪಿಸಲು ಮೂಲ ಕಾರಣ ಯೋಗ ಇಡೀ ವಿಶ್ವಕ್ಕೆ ತಲುಪಬೇಕು, ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎನ್ನುವುದಾಗಿತ್ತು. ಇದೀಗ ವಿಶ್ವ ಆರೋಗ್ಯ ಸಂಸ್ಥೆ ಮೂಲಕ ಭಾರತ ಇನ್ನೊಂದು ಮಹತ್ತರ ಕಾರ್ಯಕ್ಕೆ ಜತೆಯಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: World Yoga Day 2021: ಯೋಗ ಎಲ್ಲರ ಜೀವನದ ಅವಿಭಾಜ್ಯ ಅಂಗವಾಗಲಿ.. ಟ್ವೀಟ್ ಮೂಲಕ ಶುಭಾಶಯ ತಿಳಿಸಿದ ಸಿಎಂ ಯಡಿಯೂರಪ್ಪ 

International Yoga Day: ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಆನ್​ಲೈನ್ ಮೂಲಕ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!