AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಷ್ಯೆಯ ಮೇಲೆ ಹಲವು ಬಾರಿ ಅತ್ಯಾಚಾರ ಮಾಡಿದ್ದ ಯೋಗ ಶಿಕ್ಷಕ ಅರೆಸ್ಟ್​; ವಿಡಿಯೋ ತೋರಿಸಿ ಬೆದರಿಸುತ್ತಿದ್ದ !

ಸಂತ್ರಸ್ತ ಯುವತಿ ಮಾಂಬಲಂ ಮಹಿಳಾ ಠಾಣೆಗೆ ದೂರು ನೀಡಿದ್ದಾಳೆ. ಯೋಗ ಕಲಿಸುವ ಶಿಕ್ಷಕ ಮೊದಲ ಬಾರಿ ರೇಪ್​ ಮಾಡಿದ್ದು ಏಪ್ರಿಲ್​​ನಲ್ಲಿ ಎಂದೂ ಹೇಳಿದ್ದಾಳೆ.

ಶಿಷ್ಯೆಯ ಮೇಲೆ ಹಲವು ಬಾರಿ ಅತ್ಯಾಚಾರ ಮಾಡಿದ್ದ ಯೋಗ ಶಿಕ್ಷಕ ಅರೆಸ್ಟ್​; ವಿಡಿಯೋ ತೋರಿಸಿ ಬೆದರಿಸುತ್ತಿದ್ದ !
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 07, 2021 | 6:13 PM

Share

ಯೋಗ ಕಲಿಯಲು ಬರುತ್ತಿದ್ದ ಯುವತಿಯ ಮೇಲೆ ಹಲವು ಬಾರಿ ಅತ್ಯಾಚಾರ ಮಾಡಿದ್ದ 45 ವರ್ಷದ ಯೋಗ ಶಿಕ್ಷಕನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಯುವತಿ 22 ವರ್ಷದವಳಾಗಿದ್ದಾಳೆ. ಬಂಧಿತ ಯೋಗ ಬೋಧಕನ ಹೆಸರನ್ನು ಯೋಗರಾಜ್ ಅಲಿಯಾಸ್ ಪೂವೇಂದ್ರನ್ ಚಿದಂಬರಂ ಎಂದು ಗುರುತಿಸಲಾಗಿದೆ. ಈತ ಪದೇಪದೆ ಆಕೆಯ ಮೇಲೆ ರೇಪ್​ ಮಾಡಿದ್ದಲ್ಲದೆ, ಆ ವಿಡಿಯೋವನ್ನು ಇಂಟರ್​ನೆಟ್​​ನಲ್ಲಿ ವೈರಲ್​ ಮಾಡುವ ಬೆದರಿಕೆಯೊಡ್ಡುತ್ತಿದ್ದ ಎನ್ನಲಾಗಿದೆ.  

ಸಂತ್ರಸ್ತ ಯುವತಿ ಮಾಂಬಲಂ ಮಹಿಳಾ ಠಾಣೆಗೆ ದೂರು ನೀಡಿದ್ದಾಳೆ. ಯೋಗ ಕಲಿಸುವ ಶಿಕ್ಷಕ ಮೊದಲ ಬಾರಿ ರೇಪ್​ ಮಾಡಿದ್ದು ಏಪ್ರಿಲ್​​ನಲ್ಲಿ. ಆಗ ಬರ್ತ್​ ಡೇ ಪಾರ್ಟಿಯೊಂದಕ್ಕೆ ಆಮಂತ್ರಿಸಿದ್ದ. ಅಲ್ಲಿ ಹೋಗಿದ್ದ ನನಗೆ ತಂಪುಪಾನೀಯದಲ್ಲಿ ಮತ್ತುಬರುವ ಔಷಧಿ ಕೊಟ್ಟು ಎಚ್ಚರತಪ್ಪಿಸಿದ್ದ. ಮೈಮೇಲೆ ಎಚ್ಚರವಿಲ್ಲದೆ ಬಿದ್ದಿದ್ದ ನನ್ನ ಮೇಲೆ ಅತ್ಯಾಚಾರ ಎಸಗಿದ್ದ. ಅದನ್ನು ವಿಡಿಯೋ ಮಾಡಿಟ್ಟುಕೊಂಡಿದ್ದ. ನಂತರ ಅದನ್ನು ಇಂಟರ್​ನೆಟ್​​ನಲ್ಲಿ ಹರಿಬಿಡುವ ಬೆದರಿಕೆಯೊಡ್ಡಿ, ಪದೇಪದೇ ಅತ್ಯಾಚಾರ ಮಾಡಿದ್ದಾನೆ ಎಂದು ಹೇಳಿದ್ದಾಳೆ.  ಪೊಲೀಸರು ಪರಿಶೀಲನೆ ನಡೆಸಿದಾಗ ಈ ವ್ಯಕ್ತಿಯ ಮೊಬೈಲ್​ನಲ್ಲಿ ಹಲವು ಮಹಿಳೆಯರ, ಯುವತಿಯರ ಅಶ್ಲೀಲ ವಿಡಿಯೋಗಳು ಇರುವುದು ಪತ್ತೆಯಾಗಿದೆ. ಸದ್ಯ ಈತನ ಲ್ಯಾಪ್​ಟಾಪ್​, ಮೊಬೈಲ್​ಗಳನ್ನೆಲ್ಲ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಶೀಘ್ರದಲ್ಲೇ  ಕೋರ್ಟ್​​ಗೆ ಹಾಜರುಪಡಿಸಲಿದ್ದಾರೆ.

ಇದನ್ನೂ ಓದಿ: Kotigobba 3 Trailer: ಆ್ಯಕ್ಷನ್​ ಮತ್ತು ಅದ್ದೂರಿತನ; ‘ಕೋಟಿಗೊಬ್ಬ 3’ ಟ್ರೇಲರ್​ನಲ್ಲಿ ಮಿಂಚಿದ ಸುದೀಪ್

ಯಾರೇ ತಪ್ಪು ಮಾಡಿದ್ರೂ ಐಟಿ ಅಧಿಕಾರಿಗಳು ಬಿಡುವುದಿಲ್ಲ; ರಾಜಕೀಯ ಪ್ರೇರಿತ ದಾಳಿ ಅಲ್ಲ ಎಂದ ಬಿಎಸ್ ಯಡಿಯೂರಪ್ಪ

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು