AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಗಲಭೆ: ಈ ವ್ಯಕ್ತಿಯಿಂದ ಜೆಎನ್​ಯು ವಿದ್ಯಾರ್ಥಿಗೆ ಹೋಗಿತ್ತು ಒಂದು ಸೂಚನೆ..ಪೊಲೀಸರು ಬಿಚ್ಚಿಟ್ಟ ಸ್ಫೋಟಕ ಮಾಹಿತಿ

ಗಲಭೆಯನ್ನು ಹೆಚ್ಚಿಸಲು ಈ ರಸ್ತೆ ತಡೆ ಪ್ರತಿಭಟನೆ ಒಂದು ಪೂರ್ವ ಯೋಜಿತ ಪಿತೂರಿಯಾಗಿತ್ತು. ಅದಕ್ಕಾಗಿ ಯಾದವ್​, ಇಮಾಮ್​ ಮತ್ತು ಜೆಎನ್​ಯುದ ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್​ ಸೇರಿ ಸಾಮಾಜಿಕ ಜಾಲತಾಣಗಳ ಮೂಲಕ ಮೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ ಗಲಭೆ: ಈ ವ್ಯಕ್ತಿಯಿಂದ ಜೆಎನ್​ಯು ವಿದ್ಯಾರ್ಥಿಗೆ ಹೋಗಿತ್ತು ಒಂದು ಸೂಚನೆ..ಪೊಲೀಸರು ಬಿಚ್ಚಿಟ್ಟ ಸ್ಫೋಟಕ ಮಾಹಿತಿ
ಯೋಗೇಂದ್ರ ಯಾದವ್
Lakshmi Hegde
|

Updated on: Nov 28, 2020 | 8:27 PM

Share

ದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ಈಶಾನ್ಯ ದೆಹಲಿಯಲ್ಲಿ ಫೆಬ್ರವರಿಯಲ್ಲಿ ಅದೆಷ್ಟು ಹಿಂಸಾತ್ಮಕ ರೂಪ ಪಡೆದುಕೊಂಡಿತ್ತು ಎಂಬುದು ಗೊತ್ತೇ ಇದೆ. ಇದಕ್ಕೆ ಸಂಬಂಧಪಟ್ಟಂತೆ ಮತ್ತೊಂದು ಹೊಸ ವಿಚಾರವನ್ನು ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ಪೂರಕ ಚಾರ್ಜ್​ಶೀಟ್​​ನಲ್ಲಿ ಬಹಿರಂಗಪಡಿಸಿದ್ದಾರೆ.

ಅಂದು ನಡೆದ ರಸ್ತೆ ತಡೆಯ ಹಿಂದೆ ಸ್ವರಾಜ್​ ಅಭಿಯಾನ ಮುಖಂಡ ಯೋಗೇಂದ್ರ ಯಾದವ್​ ಕೈವಾಡವಿದೆ. ರೋಡ್​ ಜಾಮ್​ ಮಾಡಲು ಜಾಮಿಯಾ ಮಿಲಿಯಾ ಇಸ್ಲಾಮಿಯಾ, ಅಲಿಘಡ್​ ಮುಸ್ಲಿಂ ಯೂನಿವರ್ಸಿಟಿ ಮತ್ತು ದಹಲಿ ಯೂನಿವರ್ಸಿಟಿಯ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಯೋಗೇಂದ್ರ ಯಾದವ್, ಜವಾಹರ್​ಲಾಲ್​ ನೆಹರೂ ವಿಶ್ವವಿದ್ಯಾಲಯದ ಪಿಎಚ್​ಡಿ ವಿದ್ಯಾರ್ಥಿ ಶಾರ್ಜೀಲ್​ ಇಮಾಮ್​ಗೆ ಸೂಚನೆ ನೀಡಿದ್ದರು ಎಂದು ಪೊಲೀಸರು, ಹೆಚ್ಚುವರಿ ಸೆಷನ್ಸ್​ ನ್ಯಾಯಾಧೀಶ ಅಮಿತಾಬ್​ ರಾವತ್​ ಗೆ ಸಲ್ಲಿಸಿದ ಚಾರ್ಜ್​ಶೀಟ್​ನಲ್ಲಿ ಸ್ಪಷ್ಟಪಡಿಸಿದ್ದಾರೆ.

ಗಲಭೆಯನ್ನು ಹೆಚ್ಚಿಸಲು ಈ ರಸ್ತೆ ತಡೆ ಪ್ರತಿಭಟನೆ ಒಂದು ಪೂರ್ವ ಯೋಜಿತ ಪಿತೂರಿಯಾಗಿತ್ತು. ಅದಕ್ಕಾಗಿ ಯಾದವ್​, ಇಮಾಮ್​ ಮತ್ತು ಜೆಎನ್​ಯುದ ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್​ ಸೇರಿ ಸಾಮಾಜಿಕ ಜಾಲತಾಣಗಳ ಮೂಲಕ ಮೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿದ್ದರು. ಈ ರಸ್ತೆ ತಡೆ ಪ್ರತಿಭಟನೆ ಮುಂದೆ ಗಲಭೆ ಹಿಂಸಾತ್ಮಕ ರೂಪ ಪಡೆದುಕೊಳ್ಳಲು ಪ್ರಮುಖ ಕಾರಣವಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಇಮಾಮ್​ ಹಾಗೂ ಖಾಲಿದ್​ ಸದ್ಯ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ದೆಹಲಿ ಗಲಭೆಗೆ ಸಂಬಂಧಪಟ್ಟ ಇನ್ನೂ ದೊಡ್ಡದೊಡ್ಡ ವ್ಯಕ್ತಿಗಳನ್ನು ಬೆಳಕಿಗೆ ತರಲಾಗುವುದು. ತನಿಖೆ ಮುಂದುವರಿಯುತ್ತಿದೆ ಎಂದು ಪೊಲೀಸರು ಹೇಳಿಕೊಂಡಿದ್ದಾರೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ