AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಗಲಭೆ: ಈ ವ್ಯಕ್ತಿಯಿಂದ ಜೆಎನ್​ಯು ವಿದ್ಯಾರ್ಥಿಗೆ ಹೋಗಿತ್ತು ಒಂದು ಸೂಚನೆ..ಪೊಲೀಸರು ಬಿಚ್ಚಿಟ್ಟ ಸ್ಫೋಟಕ ಮಾಹಿತಿ

ಗಲಭೆಯನ್ನು ಹೆಚ್ಚಿಸಲು ಈ ರಸ್ತೆ ತಡೆ ಪ್ರತಿಭಟನೆ ಒಂದು ಪೂರ್ವ ಯೋಜಿತ ಪಿತೂರಿಯಾಗಿತ್ತು. ಅದಕ್ಕಾಗಿ ಯಾದವ್​, ಇಮಾಮ್​ ಮತ್ತು ಜೆಎನ್​ಯುದ ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್​ ಸೇರಿ ಸಾಮಾಜಿಕ ಜಾಲತಾಣಗಳ ಮೂಲಕ ಮೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ ಗಲಭೆ: ಈ ವ್ಯಕ್ತಿಯಿಂದ ಜೆಎನ್​ಯು ವಿದ್ಯಾರ್ಥಿಗೆ ಹೋಗಿತ್ತು ಒಂದು ಸೂಚನೆ..ಪೊಲೀಸರು ಬಿಚ್ಚಿಟ್ಟ ಸ್ಫೋಟಕ ಮಾಹಿತಿ
ಯೋಗೇಂದ್ರ ಯಾದವ್
Lakshmi Hegde
|

Updated on: Nov 28, 2020 | 8:27 PM

Share

ದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ಈಶಾನ್ಯ ದೆಹಲಿಯಲ್ಲಿ ಫೆಬ್ರವರಿಯಲ್ಲಿ ಅದೆಷ್ಟು ಹಿಂಸಾತ್ಮಕ ರೂಪ ಪಡೆದುಕೊಂಡಿತ್ತು ಎಂಬುದು ಗೊತ್ತೇ ಇದೆ. ಇದಕ್ಕೆ ಸಂಬಂಧಪಟ್ಟಂತೆ ಮತ್ತೊಂದು ಹೊಸ ವಿಚಾರವನ್ನು ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ಪೂರಕ ಚಾರ್ಜ್​ಶೀಟ್​​ನಲ್ಲಿ ಬಹಿರಂಗಪಡಿಸಿದ್ದಾರೆ.

ಅಂದು ನಡೆದ ರಸ್ತೆ ತಡೆಯ ಹಿಂದೆ ಸ್ವರಾಜ್​ ಅಭಿಯಾನ ಮುಖಂಡ ಯೋಗೇಂದ್ರ ಯಾದವ್​ ಕೈವಾಡವಿದೆ. ರೋಡ್​ ಜಾಮ್​ ಮಾಡಲು ಜಾಮಿಯಾ ಮಿಲಿಯಾ ಇಸ್ಲಾಮಿಯಾ, ಅಲಿಘಡ್​ ಮುಸ್ಲಿಂ ಯೂನಿವರ್ಸಿಟಿ ಮತ್ತು ದಹಲಿ ಯೂನಿವರ್ಸಿಟಿಯ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಯೋಗೇಂದ್ರ ಯಾದವ್, ಜವಾಹರ್​ಲಾಲ್​ ನೆಹರೂ ವಿಶ್ವವಿದ್ಯಾಲಯದ ಪಿಎಚ್​ಡಿ ವಿದ್ಯಾರ್ಥಿ ಶಾರ್ಜೀಲ್​ ಇಮಾಮ್​ಗೆ ಸೂಚನೆ ನೀಡಿದ್ದರು ಎಂದು ಪೊಲೀಸರು, ಹೆಚ್ಚುವರಿ ಸೆಷನ್ಸ್​ ನ್ಯಾಯಾಧೀಶ ಅಮಿತಾಬ್​ ರಾವತ್​ ಗೆ ಸಲ್ಲಿಸಿದ ಚಾರ್ಜ್​ಶೀಟ್​ನಲ್ಲಿ ಸ್ಪಷ್ಟಪಡಿಸಿದ್ದಾರೆ.

ಗಲಭೆಯನ್ನು ಹೆಚ್ಚಿಸಲು ಈ ರಸ್ತೆ ತಡೆ ಪ್ರತಿಭಟನೆ ಒಂದು ಪೂರ್ವ ಯೋಜಿತ ಪಿತೂರಿಯಾಗಿತ್ತು. ಅದಕ್ಕಾಗಿ ಯಾದವ್​, ಇಮಾಮ್​ ಮತ್ತು ಜೆಎನ್​ಯುದ ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್​ ಸೇರಿ ಸಾಮಾಜಿಕ ಜಾಲತಾಣಗಳ ಮೂಲಕ ಮೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿದ್ದರು. ಈ ರಸ್ತೆ ತಡೆ ಪ್ರತಿಭಟನೆ ಮುಂದೆ ಗಲಭೆ ಹಿಂಸಾತ್ಮಕ ರೂಪ ಪಡೆದುಕೊಳ್ಳಲು ಪ್ರಮುಖ ಕಾರಣವಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಇಮಾಮ್​ ಹಾಗೂ ಖಾಲಿದ್​ ಸದ್ಯ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ದೆಹಲಿ ಗಲಭೆಗೆ ಸಂಬಂಧಪಟ್ಟ ಇನ್ನೂ ದೊಡ್ಡದೊಡ್ಡ ವ್ಯಕ್ತಿಗಳನ್ನು ಬೆಳಕಿಗೆ ತರಲಾಗುವುದು. ತನಿಖೆ ಮುಂದುವರಿಯುತ್ತಿದೆ ಎಂದು ಪೊಲೀಸರು ಹೇಳಿಕೊಂಡಿದ್ದಾರೆ.

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ