AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಗಲಭೆ: ಈ ವ್ಯಕ್ತಿಯಿಂದ ಜೆಎನ್​ಯು ವಿದ್ಯಾರ್ಥಿಗೆ ಹೋಗಿತ್ತು ಒಂದು ಸೂಚನೆ..ಪೊಲೀಸರು ಬಿಚ್ಚಿಟ್ಟ ಸ್ಫೋಟಕ ಮಾಹಿತಿ

ಗಲಭೆಯನ್ನು ಹೆಚ್ಚಿಸಲು ಈ ರಸ್ತೆ ತಡೆ ಪ್ರತಿಭಟನೆ ಒಂದು ಪೂರ್ವ ಯೋಜಿತ ಪಿತೂರಿಯಾಗಿತ್ತು. ಅದಕ್ಕಾಗಿ ಯಾದವ್​, ಇಮಾಮ್​ ಮತ್ತು ಜೆಎನ್​ಯುದ ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್​ ಸೇರಿ ಸಾಮಾಜಿಕ ಜಾಲತಾಣಗಳ ಮೂಲಕ ಮೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ ಗಲಭೆ: ಈ ವ್ಯಕ್ತಿಯಿಂದ ಜೆಎನ್​ಯು ವಿದ್ಯಾರ್ಥಿಗೆ ಹೋಗಿತ್ತು ಒಂದು ಸೂಚನೆ..ಪೊಲೀಸರು ಬಿಚ್ಚಿಟ್ಟ ಸ್ಫೋಟಕ ಮಾಹಿತಿ
ಯೋಗೇಂದ್ರ ಯಾದವ್
Lakshmi Hegde
|

Updated on: Nov 28, 2020 | 8:27 PM

Share

ದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ಈಶಾನ್ಯ ದೆಹಲಿಯಲ್ಲಿ ಫೆಬ್ರವರಿಯಲ್ಲಿ ಅದೆಷ್ಟು ಹಿಂಸಾತ್ಮಕ ರೂಪ ಪಡೆದುಕೊಂಡಿತ್ತು ಎಂಬುದು ಗೊತ್ತೇ ಇದೆ. ಇದಕ್ಕೆ ಸಂಬಂಧಪಟ್ಟಂತೆ ಮತ್ತೊಂದು ಹೊಸ ವಿಚಾರವನ್ನು ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ಪೂರಕ ಚಾರ್ಜ್​ಶೀಟ್​​ನಲ್ಲಿ ಬಹಿರಂಗಪಡಿಸಿದ್ದಾರೆ.

ಅಂದು ನಡೆದ ರಸ್ತೆ ತಡೆಯ ಹಿಂದೆ ಸ್ವರಾಜ್​ ಅಭಿಯಾನ ಮುಖಂಡ ಯೋಗೇಂದ್ರ ಯಾದವ್​ ಕೈವಾಡವಿದೆ. ರೋಡ್​ ಜಾಮ್​ ಮಾಡಲು ಜಾಮಿಯಾ ಮಿಲಿಯಾ ಇಸ್ಲಾಮಿಯಾ, ಅಲಿಘಡ್​ ಮುಸ್ಲಿಂ ಯೂನಿವರ್ಸಿಟಿ ಮತ್ತು ದಹಲಿ ಯೂನಿವರ್ಸಿಟಿಯ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಯೋಗೇಂದ್ರ ಯಾದವ್, ಜವಾಹರ್​ಲಾಲ್​ ನೆಹರೂ ವಿಶ್ವವಿದ್ಯಾಲಯದ ಪಿಎಚ್​ಡಿ ವಿದ್ಯಾರ್ಥಿ ಶಾರ್ಜೀಲ್​ ಇಮಾಮ್​ಗೆ ಸೂಚನೆ ನೀಡಿದ್ದರು ಎಂದು ಪೊಲೀಸರು, ಹೆಚ್ಚುವರಿ ಸೆಷನ್ಸ್​ ನ್ಯಾಯಾಧೀಶ ಅಮಿತಾಬ್​ ರಾವತ್​ ಗೆ ಸಲ್ಲಿಸಿದ ಚಾರ್ಜ್​ಶೀಟ್​ನಲ್ಲಿ ಸ್ಪಷ್ಟಪಡಿಸಿದ್ದಾರೆ.

ಗಲಭೆಯನ್ನು ಹೆಚ್ಚಿಸಲು ಈ ರಸ್ತೆ ತಡೆ ಪ್ರತಿಭಟನೆ ಒಂದು ಪೂರ್ವ ಯೋಜಿತ ಪಿತೂರಿಯಾಗಿತ್ತು. ಅದಕ್ಕಾಗಿ ಯಾದವ್​, ಇಮಾಮ್​ ಮತ್ತು ಜೆಎನ್​ಯುದ ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್​ ಸೇರಿ ಸಾಮಾಜಿಕ ಜಾಲತಾಣಗಳ ಮೂಲಕ ಮೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿದ್ದರು. ಈ ರಸ್ತೆ ತಡೆ ಪ್ರತಿಭಟನೆ ಮುಂದೆ ಗಲಭೆ ಹಿಂಸಾತ್ಮಕ ರೂಪ ಪಡೆದುಕೊಳ್ಳಲು ಪ್ರಮುಖ ಕಾರಣವಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಇಮಾಮ್​ ಹಾಗೂ ಖಾಲಿದ್​ ಸದ್ಯ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ದೆಹಲಿ ಗಲಭೆಗೆ ಸಂಬಂಧಪಟ್ಟ ಇನ್ನೂ ದೊಡ್ಡದೊಡ್ಡ ವ್ಯಕ್ತಿಗಳನ್ನು ಬೆಳಕಿಗೆ ತರಲಾಗುವುದು. ತನಿಖೆ ಮುಂದುವರಿಯುತ್ತಿದೆ ಎಂದು ಪೊಲೀಸರು ಹೇಳಿಕೊಂಡಿದ್ದಾರೆ.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?